ಕೊನೆಗೂ ದೇಗುಲ ಬಾಗಿಲು ತೆರೆಯಿತು! ಬರೋಬ್ಬರಿ 7 ತಿಂಗಳ ಬಳಿಕ ಭಕ್ತರಿಗೆ ದೇವರ ದರ್ಶನ 

ಆರೋಗ್ಯ ಮಾರ್ಗಸೂಚಿ ಪಾಲನೆ ಕಡ್ಡಾಯ

Team Udayavani, Nov 15, 2020, 6:54 PM IST

ಕೊನೆಗೂ ದೇಗುಲ ಬಾಗಿಲು ತೆರೆಯಿತು! ಬರೋಬ್ಬರಿ 7 ತಿಂಗಳ ಬಳಿಕ ಭಕ್ತರಿಗೆ ದೇವರ ದರ್ಶನ 

ಮುಂಬೈ: ಬರೋಬ್ಬರಿ 7 ತಿಂಗಳು… ದೇಗುಲದಲ್ಲಿದ್ದ ದೇವರು ಭಕ್ತರ ಮುಖ ನೋಡಿರಲಿಲ್ಲ. ಮನೆಯಲ್ಲಿದ್ದ ಭಕ್ತ, ದೇವಳದ ಭಗವಂತನನ್ನು ಕಂಡಿರಲಿಲ್ಲ… ಕೊನೆಗೂ ಸೋಮವಾರದಿಂದ ದೇಗುಲದ ಬಾಗಿಲು ತೆರೆಯಲು ಮಹಾರಾಷ್ಟ್ರ ಸರ್ಕಾರ ಅನುಮತಿಸಿದ್ದು, ಭಕ್ತಾದಿಗಳಲ್ಲಿ ಪುಳಕ ಹೆಚ್ಚಿಸಿದೆ.

ದೇಗುಲ ಆವರಣದಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯ ಪಾಲಿಸಲು ಸೂಚಿಸಲಾಗಿದೆ. ಎಲ್ಲ ರಾಜ್ಯಗಳಲ್ಲಿ ದೇಗುಲ ತೆರೆಯಲು ಅನುಮತಿ ನೀಡಿದ್ದರೂ, “ಮಹಾ’ ಸರ್ಕಾರ ಕೊರೊನಾದ ನೆಪವೊಡ್ಡಿ, ನಿರ್ಬಂಧವನ್ನು ವಿಸ್ತರಿಸಿದ್ದಕ್ಕೆ ರಾಜಕೀಯ ಆಕ್ಷೇಪಗಳೂ ಕೇಳಿಬಂದಿದ್ದವು. ಆ ಗಲಾಟೆಗಳೆಲ್ಲ ಈಗ ತಣ್ಣಗಾಗಿ, ದೇಗುಲ ಗಂಟೆಯ ಸದ್ದೊಂದೇ ಕೇಳುವಂತಾಗಿದೆ.

ನಿಯಮಗಳೇನೇನು?: ವಿಗ್ರಹ ಅಥವಾ ಧರ್ಮ ಗ್ರಂಥಗಳನ್ನು ಸ್ಪರ್ಶಿಸುವಂತಿಲ್ಲ. ಪ್ರಸಾದ ವಿತರಣೆಗೆ ಅನುಮತಿ ಇಲ್ಲ. ತೀರ್ಥ ನೀಡುವುದು, ಚಿಮುಕಿಸುವುದಕ್ಕೆ ಅವಕಾಶವಿಲ್ಲ. ಪ್ರಾರ್ಥನೆ ಮಾಡುವ ಭಕ್ತಾದಿಗಳು, ಅವರೇ ಸ್ವತಃ ಮ್ಯಾಟ್‌ ಅಥವಾ ಶುಚಿ ಬಟ್ಟೆಗಳನ್ನು ತರತಕ್ಕದ್ದು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು.

ಇದನ್ನೂ ಓದಿ:ಮೈಸೂರು: ಪ್ರೀತಿಯ ನಾಟಕವಾಡಿ ಯುವತಿಯನ್ನು ಬೆಂಕಿಹಚ್ಚಿ ಕೊಂದ ಹಂತಕ ಅರೆಸ್ಟ್

ನೋ ಎಂಟ್ರಿ: 65 ವರ್ಷ ಮೇಲ್ಪಟ್ಟವರು, ಅನಾರೋಗ್ಯಪೀಡಿತರು, ಗರ್ಭಿಣಿಯರು ಮತ್ತು 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ದೇಗುಲ ಪ್ರವೇಶಕ್ಕೆ ಸರ್ಕಾರ ಅನುಮತಿ ಕಲ್ಪಿಸಿಲ್ಲ.

ನಿಯಮ ಪಾಲಿಸಿದರಷ್ಟೇ ದೇವರ ಆಶೀರ್ವಾದ: ಉದ್ಧವ್‌
“ದೇಗುಲ ಆವರಣದಲ್ಲಿ ನೀವು ಶಿಸ್ತಿನಿಂದ, ಆರೋಗ್ಯ ಮಾರ್ಗಸೂಚಿ ಪಾಲಿಸಿದರಷ್ಟೇ ದೇವರು ನಮಗೆ, ನಮ್ಮ ನಾಡಿಗೆ ಆಶೀರ್ವದಿಸುತ್ತಾನೆ. ಕೊರೊನಾ ನಮ್ಮ ಸುತ್ತಮುತ್ತ ಇನ್ನೂ ಜೀವಂತವಿದೆಯೆಂಬ ವಾಸ್ತವವನ್ನು ನಾವು ಮರೆಯಬಾರದು. ಸ್ವ-ನಿಯಮ ಅಳವಡಿಸಿಕೊಂಡು ನಾವು ಈ ಬಾರಿ ಹಬ್ಬಗಳನ್ನು ಆಚರಿಸಬೇಕಾಗಿದೆ’ ಎಂದು ಸಿಎಂ ಉದ್ಧವ್‌ ಠಾಕ್ರೆ ಕರೆನೀಡಿದ್ದಾರೆ.

ಟಾಪ್ ನ್ಯೂಸ್

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.