ನಾಡಿನೆಲ್ಲೆಡೆ ಇಂದು ಶಿವ ನಾಮ ಸ್ಮರಣೆ, ಜಾಗರಣೆ : ವಿವಿಧ ಧಾರ್ಮಿಕ ಕಾರ್ಯಕ್ರಮಗಳಿಗೆ ಸಿದ್ಧತೆ


Team Udayavani, Mar 11, 2021, 5:55 AM IST

ನಾಡಿನೆಲ್ಲೆಡೆ ಇಂದು ಶಿವ ನಾಮ ಸ್ಮರಣೆ, ಜಾಗರಣೆ : ವಿವಿಧ ಧಾರ್ಮಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಉಡುಪಿ: ಮಹಾಶಿವರಾತ್ರಿ ಆಚರಣೆ ಪ್ರಯುಕ್ತ ಗುರುವಾರ ಶಿವ ದೇವಸ್ಥಾನಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನಡೆಯಲಿವೆ.

ಶಿಶಿರ ಋತುವಿನ ಮಾಘ ಮಾಸದ ಕೃಷ್ಣಪಕ್ಷ ಚತುರ್ದಶಿಯಂದು ಶಿವರಾತ್ರಿ ಆಚರಣೆ ನಡೆಯುತ್ತದೆ. ಈ ದಿನ ರಾತ್ರಿ ಸಮಯದಲ್ಲಿ ಶಿವ ಪಾರ್ವತಿಯ ಜತೆಯಲ್ಲಿ ಭೂಮಿಗೆ ಬರುತ್ತಾನೆ. ಭೂಮಿಯಲ್ಲಿ ಸಂಚರಿಸುತ್ತ ಎಲ್ಲ ಸ್ಥಾವರ ಜಂಗಮ ಲಿಂಗಗಳಲ್ಲಿ ಸಂಕ್ರಮಣಗೊಳ್ಳುತ್ತಾನೆ. ಆ ಸಮಯದಲ್ಲಿ ತನ್ನನ್ನು ಯಾರು ಪೂಜಿಸುವರೋ ಅವರ ಪಾಪಗಳು ಪರಿಹಾರವಾಗು ತ್ತವೆ ಎಂದು ಶಾಸ್ತ್ರೋಕ್ತಿ ಇದೆ. ಈ ನಂಬಿಕೆಯಂತೆ ಶಿವರಾತ್ರಿಯಂದು ಜಾಗರಣೆ, ಆಚರಣೆ, ಅಭಿಷೇಕ, ಭಜನೆ, ಪಾದಯಾತ್ರೆ, ದೇವರ ದರ್ಶನ ನಡೆಸಲಾಗುತ್ತದೆ.

ಭಕ್ತರು ದೇವಸ್ಥಾನಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಬರುವ ಕಾರಣ ದೇವಸ್ಥಾನಗಳ ಆಡಳಿತ ಮಂಡಳಿಗಳು ಇದಕ್ಕೆ ಬೇಕಾದ ಸಿದ್ಧತೆ ನಡೆಸಿವೆ. ಬಿಲ್ವಪತ್ರೆ ಪ್ರಿಯನಾದ ಕಾರಣ ಬಿಲ್ವಾರ್ಚನೆ, ಅಭಿಷೇಕ ಪ್ರಿಯನಾದ ಕಾರಣ ಶತರುದ್ರಾಭಿಷೇಕಗಳು, ರುದ್ರ, ಚಮಕ ಪಾರಾಯಣಗಳು ನಡೆಯಲಿವೆ. ಕೆಲವು ದೇವಸ್ಥಾನಗಳಲ್ಲಿ ವಾರ್ಷಿಕ ರಥೋತ್ಸವವೂ ಇದೇ ಸಮಯದಲ್ಲಿ ನಡೆಯಲಿದ್ದು ಮರುದಿನ ಭೋಜನ ಪ್ರಸಾದವನ್ನು ಏರ್ಪಡಿಸಲಾಗಿದೆ. ಕೆಲವು ದೇವಸ್ಥಾನಗಳಲ್ಲಿ ಭಜನ ಮಂಡಳಿಗಳು ಸೂರ್ಯೋದಯದಿಂದ ಮರುದಿನ ಸೂರ್ಯೋದಯದವರೆಗೆ 24 ಗಂಟೆಗಳ ಭಜನ ಕಾರ್ಯಕ್ರಮ ನಡೆಸಲಿವೆ. ಇದು ಜಾಗರಣೆ ನಡೆಸಲು ಅನುಕೂಲವಾಗಲಿದೆ. ಭಕ್ತರು ಮನೆಮನೆಗಳಲ್ಲಿಯೂ ಉಪವಾಸವಿದ್ದು ವಿಶೇಷ ಪೂಜೆಗಳನ್ನು ನಡೆಸುತ್ತಾರೆ ಮತ್ತು
ಮನೆಗಳಲ್ಲಿಯೂ ರುದ್ರ ಪಾರಾಯಣ ಗಳನ್ನು ನಡೆಸುತ್ತಾರೆ.

ದೊಡ್ಡ ಮಟ್ಟದ ಮನೋರಂಜನಾ ಕಾರ್ಯಕ್ರಮ ಹಮ್ಮಿಕೊಳ್ಳದೇ ಅದ್ದೂರಿ ಕಡೆಗೆ ಮನ ಮಾಡದೇ, ಭಜನೆಯಂತಹ ಧಾರ್ಮಿಕ ಚಟುವಟಿಕೆಗೆ ಹೆಚ್ಚಿನ ಆದ್ಯತೆ ದೊರೆತದ್ದು ಈ ಬಾರಿಯ ವಿಶೇಷ.

ದೇವಾಲಯಗಳಲ್ಲಿ ದೀಪಾಲಂಕಾರ ನಡೆದಿದೆ. ಬೆಳಗ್ಗೆಯಿಂದಲೇ ಭಜನೆ, ಅಭಿಷೇಕ, ಅರ್ಚನೆ ನಡೆಯಲಿದೆ. ಗ್ರಾಮೀಣ ಭಾಗಗಳಲ್ಲಿ ಕೆಲವು ಸಮುದಾಯದವರು “ಹಣಬು’ ಸುಡುವ ಪದ್ಧತಿಯನ್ನು ನಡೆಸುತ್ತಾರೆ. ಹತ್ತಿ, ಬಟ್ಟೆ, ಹುಲ್ಲುಗಳಿಂದ ಮಾಡಿದ ಆಕಾರವನ್ನು ಸುಡುತ್ತಾರೆ. ರಾತ್ರಿ ಇಡೀ ಜಾಗರಣೆಗೆ ಸಿದ್ಧತೆಗಳೂ ನಡೆದಿವೆ.

ಟಾಪ್ ನ್ಯೂಸ್

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.