ಮಲೆ ಮಹದೇಶ್ವರ ಬೆಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಲು ಕ್ರಮ : ಸಿಎಂ

ಉದಯವಾಣಿ ಪ್ರಕಟಿಸಿದ್ದ ವರದಿಗೆ ಮುಖ್ಯಮಂತ್ರಿ ಸ್ಪಂದನೆ

Team Udayavani, Nov 26, 2020, 4:51 PM IST

ಮಲೆ ಮಹದೇಶ್ವರ ಬೆಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಲು ಕ್ರಮ : ಸಿಎಂ

ಹನೂರು (ಚಾಮರಾಜನಗರ): ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಸುಸಜ್ಜಿತ ಆಸ್ಪತ್ರೆಯಿಲ್ಲ ಎಂದು ಉದಯವಾಣಿ ಪ್ರಕಟಿಸಿದ್ದ ವರದಿಗೆ ಮುಖ್ಯಮಂತ್ರಿ ಬಿ.ಎಸ್‍. ಯಡಿಯೂರಪ್ಪ ಅವರಿಂದ ಸ್ಪಂದನೆ ದೊರೆತಿದ್ದು, ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳುತ್ತೇನೆ ಎಂದು ಗುರುವಾರ ಭರವಸೆ ನೀಡಿದರು.

ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಶ್ರೀಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ ಕೈಗೊಳ್ಳಲಾಗಿರುವ 110 ಕೋಟಿ ರೂ. ಅಂದಾಜು ವೆಚ್ಚದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಮಹದೇಶ್ವರ ಬೆಟ್ಟದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಬೇಕೆಂಬುದು ಇಲ್ಲಿನ ಜನರ ಅಪೇಕ್ಷೆಯಾಗಿದೆ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂದರು.

ಇದನ್ನೂ ಓದಿ:ಕೈಗಾರಿಕಾ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ದಿಗೆ ಮೊದಲ ಆದ್ಯತೆ ನೀಡಿ: ಶೆಟ್ಟರ್‌

29 ಗ್ರಾಮಗಳ ವ್ಯಾಪ್ತಿಯ 18 ಸಾವಿರ ಜನಸಂಖ್ಯೆಯುಳ್ಳ ಹಾಗೂ ಪ್ರತಿ ವರ್ಷ 50 ಲಕ್ಷ ಜನರು ಭೇಟಿ ನೀಡುವ ಪ್ರಸಿದ್ಧ ಯಾತ್ರಾ ಸ್ಥಳ ಮಹದೇಶ್ವರ ಬೆಟ್ಟದಲ್ಲಿ ಸುಸಜ್ಜಿತ ಆಸ್ಪತ್ರೆಯಿಲ್ಲ ಎಂದು ಉದಯವಾಣಿ ಗುರುವಾರದ ಸಂಚಿಕೆಯಲ್ಲಿ ವರದಿ ಪ್ರಕಟಿಸಿತ್ತು.

ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟವು ಪ್ರಾಕೃತಿಕ ಸೊಬಗಿನಿಂದ ಕೂಡಿರುವ ಧಾರ್ಮಿಕ ಕೇಂದ್ರವಾಗಿದ್ದು ಇಲ್ಲಿಗೆ ಲಕ್ಷಾಂತರ ಭಕ್ತಾದಿಗಳು ಆಗಮಿಸುತ್ತಿದ್ದಾರೆ. ಈ ಕ್ಷೇತ್ರವು ಪ್ರವಾಸೋದ್ಯಮದ ಅಭಿವೃದ್ಧಿಗೂ ಪೂರಕವಾದ ಕ್ಷೇತ್ರವಾಗಿದ್ದು, ಸುಂದರವಾದ ಭಕ್ತಿಪೂರ್ವಕ ಪ್ರವಾಸಿ ತಾಣವನ್ನಾಗಿಸುವುದು ಸರ್ಕಾರ ಮತ್ತು ಪ್ರಾಧಿಕಾರದ ಉದ್ದೇಶವಾಗಿದೆ. ಈ ಹಿನ್ನೆಲೆ ಇಂದು 14 ಕೋಟಿಗೂ ಅಧಿಕ ವೆಚ್ಚದ ಕಾಮಗಾರಿಗಳ ಉದ್ಘಾಟನೆ ನೆರವೇರಿಸಿದ್ದು 110 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ.

ಈ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ ಸಾರ್ವಜನಿಕ ಬಳಕೆಗೆ ದೊರಕಿಸಿಕೊಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಹನೂರು ಕ್ಷೇತ್ರ ಶಾಸಕ ಆರ್‍.ನರೇಂದ್ರ ಅವರು ಸಹ ತಮ್ಮ ಭಾಷಣದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಬೇಕೆಂದು ಮನವಿ ಮಾಡಿದರು. ಅಲ್ಲದೇ ಹನೂರು ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡುವಂತೆ ಕೋರಿದರು.

ಇದನ್ನು ಸಹ ಪ್ರಸ್ತಾಪಿಸಿದ ಮುಖ್ಯಮಂತ್ರಿಯವರು, ನರೇಂದ್ರ ಅವರ ಕೋರಿಕೆಯಂತೆ ಹಣಕಾಸಿನ ಇತಿಮಿತಿಯೊಳಗೆ ಅನುದಾನ ಬಿಡಗಡೆ ಮಾಡುವ ಮೂಲಕ ಹನೂರು ಕ್ಷೇತ್ರದ ಅಭಿವೃದ್ಧಿಗೆ ಕ್ರಮವಹಿಸಲಾಗುವುದು ಎಂದರು.

ಸ್ವಚ್ಛತೆಗೆ ಆದ್ಯತೆ ನೀಡಿ: ಇದೇ ವೇಳೆ ಮುಖ್ಯಮಂತ್ರಿಗಳು ಕೋವಿಡ್-19 ಸಾಂಕ್ರಾಮಿಕದ ಹಿನ್ನೆಲೆ ಶ್ರೀ ಕ್ಷೇತ್ರದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಲು ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳೋಣ ಮತ್ತು ಪಾಕೃತಿಕ ಸೊಬಗಿನಿಂದ ಕೂಡಿರುವ ಸುಂದರ ಪರಿಸರ ಮತ್ತು ಸುತ್ತಮುತ್ತಲ ಪ್ರದೇಶವನ್ನು ಪ್ಲಾಸ್ಟಿಕ್ ಮತ್ತು ಇನ್ನಿತರ ತ್ಯಾಜ್ಯಗಳಿಂದ ಮುಕ್ತಗೊಳಿಸೋಣ ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ ಇಲಾಖಾ ಸಚಿವ ಗೋವಿಂದ ಕಾರಜೋಳ ಮಾತನಾಡಿ ಕಳೆದ 15 ತಿಂಗಳ ಯಡಿಯೂರಪ್ಪ ಅವರ ಅಧಿಕಾರಾವಧಿಯಲ್ಲಿ ಆರ್ಥಿಕ ಸಂಕಷ್ಟದ ನಡುವೆಯೂ ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲಾಗುತ್ತಿದೆ. ಕಳೆದ ಸಾಲು ಮತ್ತು ಪ್ರಸಕ್ತ ಸಾಲಿನಲ್ಲಿ ಮಳೆ ಮತ್ತು ಪ್ರವಾಹದಿಂದಾಗಿ 60 ಸಾವಿರ ಕೋಟಿ ಆರ್ಥಿಕ ನಷ್ಟ ಉಂಟಾಗಿದೆ. ಅಲ್ಲದೆ ಕೊರೋನಾ ಹಿನ್ನೆಲೆ ನಿರೀಕ್ಷಿತ ಆದಾಯ ಬಾರದಿದ್ದರೂ ಅಭಿವೃದ್ಧಿ ಯೋಜನೆಗಳು ಕುಂಠಿತವಾಗದ ರೀತಿಯಲ್ಲಿ ಅನುದಾನ ನೀಡಲಾಗುತ್ತಿದೆ. ಚಾಮರಾಜನಗರ ಜಿಲ್ಲೆಯ ಅಭಿವೃದ್ಧಿಗೆ ಕಳೆದ 15 ತಿಂಗಳ ಅವಧಿಯಲ್ಲಿ ಲೋಕೋಪಯೋಗ ಇಲಾಖೆಯ ಮೂಲಕ 380 ಕೋಟಿ ಅನುದಾನ ನೀಡಲಾಗಿದೆ ಎಂದು ತಿಳಿಸಿದರು.

ಮಳೆ ಬಂದರ ಕೆಟ್ಟಿಲ್ಲಂತ, ಮಗ ಉಂಡ್ರ ಕೆಟ್ಟಿಲ್ಲಂತ: ಯಡಿಯೂರಪ್ಪ ಅವರು ರಾಜ್ಯದಲ್ಲಿ ಯಾವ ಯಾವ ಅವಧಿಯಲ್ಲಿ ಅಧಿಕಾರದಲ್ಲಿದ್ದಾರೋ ಆ ಅವಧಿಯಲ್ಲಿ ಮಳೆ ಹೆಚ್ಚಾಗುತ್ತಿದೆ. ಅವರು ಅಧಿಕಾರದಲ್ಲಿದ್ದರೆ ರಾಜ್ಯದಲ್ಲಿ ಹಸಿರ ಇರುತ್ತದೆಯೋ ಹೊರತು ಒಣ ಬರವಿರುವುದಿಲ್ಲ. ಇದಕ್ಕೆ ಉತ್ತರ ಕರ್ನಾಟಕದಲ್ಲಿ ಮಳೆ ಬಂದರೆ ಕೆಟ್ಟಿಲ್ಲಂತ, ಮಗ ಉಂಡ್ರ ಕೆಟ್ಟಿಲ್ಲಂತ ಎಂಬ ನಾಣ್ಣುಡಿಯಿದೆ. ಆದುದರಿಂದ ಯಡಿಯೂರಪ್ಪ ಅವರ ಕಾಲ ನಾಡು ಸುಭಿಕ್ಷವಾಗಿರಲಿ, ಇದಕ್ಕೆ ಮಹದೇಶ್ವರರು, ಶರಣ ಸಂತರು ಆಶೀರ್ವದಿಸಲಿ ಎಂದು ಹಾರೈಸಿದರು.

ಇದೇ ವೇಳೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಯಡಿಯೂರಪ್ಪ, ಮಂತ್ರಿಗಳು ಮತ್ತು ಶಾಸಕರು ಶ್ರೀಕ್ಷೇತ್ರದ 2021ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ನೆರವೇರಿಸಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.