ಕೋವಿಡ್ ಹಿನ್ನೆಲೆ : ಯುಗಾದಿ ಜಾತ್ರೆಯಂದು ಮಹದೇಶ್ವರ ಬೆಟ್ಟಕ್ಕೆ ಭಕ್ತಾದಿಗಳ ಪ್ರವೇಶ ನಿರ್ಬಂಧ
ಸರಳ ಆಚರಣೆಗೆ ಜಿಲ್ಲಾಧಿಕಾರಿ ಆದೇಶ
Team Udayavani, Apr 4, 2021, 7:31 PM IST
ಚಾಮರಾಜನಗರ: ಸಾರ್ವಜನಿಕರು ಹಾಗೂ ಭಕ್ತಾಧಿಗಳ ಸುರಕ್ಷತೆ ಹಾಗೂ ಆರೋಗ್ಯದ ಹಿತದೃಷ್ಠಿಯಿಂದ ಕೊರೊನಾ ವೈರಸ್ ಹರಡದಂತೆ ತಡೆಯುವ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಹನೂರು ತಾಲೂಕು ಮಲೆ ಮಹದೇಶ್ವರ ಬೆಟ್ಟದಲ್ಲಿ ಏ. 10ರಿಂದ 13ರವರೆಗೆ ನಡೆಯುವ ಯುಗಾದಿ ಜಾತ್ರೆಗೆ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿದೆ.
ಜಾತ್ರಾ ಮಹೋತ್ಸವದ ವಿಶೇಷ ಪೂಜಾ ಕಾರ್ಯಗಳಿಗೆ ದೇವಾಲಯದ ಅರ್ಚಕರು, ಸಿಬ್ಬಂದಿ, ಸ್ಥಳೀಯರು, ಸರ್ಕಾರಿ ಕೆಲಸದ ನಿಮಿತ್ತ ತೆರಳುವ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳನ್ನು ಹೊರತುಪಡಿಸಿ ತಾಲೂಕು, ಜಿಲ್ಲಾ ಹಾಗೂ ಅಂತರಜಿಲ್ಲಾ ಸಾರ್ವಜನಿಕರು ಮತ್ತು ಭಕ್ತಾದಿಗಳ ಪ್ರವೇಶವನ್ನು ನಿರ್ಬಂಧಿಸಿ ಜಾತ್ರಾ ಮಹೋತ್ಸವವನ್ನು ಸರಳ ಹಾಗೂ ಸಾಂಪ್ರದಾಯಿಕವಾಗಿ ನಡೆಸುವಂತೆ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ :ತ್ರಿಬಲ್ ರೈಡಿಂಗ್: ನಿಯಂತ್ರಣ ಕಳೆದು ಹಳ್ಳಕ್ಕೆ ಬಿದ್ದ ಬೈಕ್, ಇಬ್ಬರ ಸಾವು, ಓರ್ವನಿಗೆ ಗಾಯ