ಇದು ಸ್ಮಶಾನ ವೈರಾಗ್ಯ…ಟಿಎಂಸಿ ಮುಖಂಡರ ರಾಜಕೀಯ ನಿವೃತ್ತಿ ಹೇಳಿಕೆಗೆ ಬಿಜೆಪಿ ತಿರುಗೇಟು
ಮಮತಾ ಬ್ಯಾನರ್ಜಿಯ ತೃಣಮೂಲ ಕಾಂಗ್ರೆಸ್ ಕಾಂಗ್ರೆಸ್ ನಾಟಕದ ಪಕ್ಷವಾಗಿದೆ
Team Udayavani, Sep 8, 2022, 2:46 PM IST
ಕೋಲ್ಕತಾ: ಟಿಎಂಸಿ ಹಿರಿಯ ಮುಖಂಡ, ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಪ್ತ ಮದನ್ ಮಿತ್ರಾ ರಾಜಕೀಯದಿಂದ ನಿವೃತ್ತಿ ಹೊಂದುವುದಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದು, ಇದಕ್ಕೆ ಬಿಜೆಪಿ ಸಂಸದ ದಿಲೀಪ್ ಘೋಷ್ ತಿರುಗೇಟು ನೀಡಿದ್ದಾರೆ.
ಇದನ್ನೂ ಓದಿ:ಆಯುಷ್ಮಾನ್ ಭಾರತ್ ನಡಿ ವಿರಳ ಕಾಯಿಲೆಗಳಿಗೂ ಚಿಕಿತ್ಸಾ ವೆಚ್ಚ ಭರಿಸಲು ಕ್ರಮ: ಸುಧಾಕರ್
ಇತ್ತೀಚೆಗೆ ತೃಣಮೂಲ ಕಾಂಗ್ರೆಸ್ ಮುಖಂಡ, ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ತಪಸ್ ರೇ, ತಾನು ಮುಂಬರುವ ದಿನಗಳಲ್ಲಿ ರಾಜಕೀಯ ತ್ಯಜಿಸುವುದಾಗಿ ಹೇಳಿಕೆ ನೀಡಿದ್ದರು. ಬಳಿಕ ಇದೀಗ ಮತ್ತೊಬ್ಬ ಮುಖಂಡ, ಮಮತಾ ಆಪ್ತ ಮದನ್ ಮಿತ್ರಾ ಕೂಡಾ ರಾಜಕೀಯ ತ್ಯಜಿಸುವುದಾಗಿ ತಿಳಿಸಿದ್ದಾರೆ.
ಟಿಎಂಸಿ ಮುಖಂಡರ ಈ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ, ಸಂಸದ ದಿಲೀಪ್ ಘೋಷ್ ಪ್ರತಿಕ್ರಿಯೆ ನೀಡಿದ್ದು, ಇದಕ್ಕೆ ಸ್ಮಶಾನ ವೈರಾಗ್ಯ ಎಂದು ಕರೆಯುತ್ತಾರೆ. ಅಂದರೆ ಜನರು ಅಂತ್ಯಕ್ರಿಯೆ ನಡೆಯುವ ವೇಳೆ ಸ್ಮಶಾನಕ್ಕೆ ಭೇಟಿ ಕೊಟ್ಟಾಗ ಇಂತಹ ಭಾವನೆ ಬರುತ್ತದೆ. ಮನುಷ್ಯನ ಜೀವನದಲ್ಲಿಯೂ ಹಾಗೆ ಎಲ್ಲವೂ ಮುಗಿಯಿತು ಎಂಬಂತಾಗುತ್ತದೆ. ಅದೇ ರೀತಿ ಟಿಎಂಸಿ ಮುಖಂಡರಿಗೂ ಆಗಿದೆ ಎಂದು ವ್ಯಂಗ್ಯವಾಡಿದರು.
ಈಗಾಗಲೇ ಟಿಎಂಸಿಯ ಕೆಲವು ಮುಖಂಡರು ರಾಜಕೀಯದಿಂದ ನಿವೃತ್ತಿಯಾಗುವ ಮಾತುಗಳನ್ನಾಡಿದ್ದಾರೆ. ಈ ಮೊದಲು ಟಿಎಂಸಿಯಲ್ಲಿ ಎಲ್ಲವೂ ಸರಿ ಇತ್ತು. ಆದರೆ ಭ್ರಷ್ಟಾಚಾರ ಪ್ರಕರಣದಲ್ಲಿ ಟಿಎಂಸಿ ಮುಖಂಡರು ಜೈಲು ಸೇರುತ್ತಿದ್ದಂತೆಯೇ, ಕೆಲವರು ರಾಜಕೀಯ ತ್ಯಜಿಸುವ ಕುರಿತು ಇಚ್ಛೆ ವ್ಯಕ್ತಪಡಿಸುತ್ತಿದ್ದಾರೆ. ಇದೊಂದು ಕೇವಲ ನಾಟಕ. ಮಮತಾ ಬ್ಯಾನರ್ಜಿಯ ತೃಣಮೂಲ ಕಾಂಗ್ರೆಸ್ ಕಾಂಗ್ರೆಸ್ ನಾಟಕದ ಪಕ್ಷವಾಗಿದೆ ಎಂದು ಘೋಷ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ