ಮುಂಬಯಿಯಲ್ಲಿ 4 ಕೋಟಿ ರೂ. ಮೌಲ್ಯದ ಹೆರಾಯಿನ್ ವಶ; ಗುಜರಾತ್ ವ್ಯಕ್ತಿ ಸೆರೆ
ಮಾಹಿತಿ ಆಧಾರದ ಮೇಲೆ ಕಾಂಪ್ಲೆಕ್ಸ್ ನ ಕಾನ್ಫರೆನ್ಸ್ ಹಾಲ್ ನಲ್ಲಿ ಶೋಧ ಕಾರ್ಯ ನಡೆಸಲಾಗಿತ್ತು.
Team Udayavani, Nov 5, 2021, 12:49 PM IST
ಮುಂಬಯಿ:ಇಲ್ಲಿನ ವಿಮಾನ ನಿಲ್ದಾಣ ಸಮೀಪದ ಕಾರ್ಗೋ ಕಾಂಪ್ಲೆಕ್ಸ್ ನಲ್ಲಿ 4 ಕೋಟಿ ರೂಪಾಯಿ ಮೌಲ್ಯದ 700 ಗ್ರಾಂ ಹೆರಾಯಿನ್ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ನಾರ್ಕೊಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ ಸಿಬಿ) ಗುರುವಾರ ಗುಜರಾತ್ ನ ವ್ಯಕ್ತಿಯನ್ನು ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನೂ ಓದಿ:ನಕಲಿ ಮದ್ಯ ಕುಡಿದು 24 ಮಂದಿ ಸಾವು: ಮೂರು ತಂಡಗಳಿಂದ ತನಿಖೆ
ಮುಂಬಯಿಯ ಇಂಟರ್ ನ್ಯಾಷನಲ್ ಕೊರಿಯರ್ ಟರ್ಮಿನಲ್ ಪಾರ್ಸೆಲ್ ನಲ್ಲಿ ಡ್ರಗ್ಸ್ ಕಳ್ಳಸಾಗಣೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯುರೋ ವಲಯ ಘಟಕಕ್ಕೆ ಬಂದಿತ್ತು. ಅದರಂತೆ ಕಾರ್ಯಾಚರಣೆ ನಡೆಸಲಾಗಿತ್ತು ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.
ಮಾಹಿತಿ ಆಧಾರದ ಮೇಲೆ ಕಾಂಪ್ಲೆಕ್ಸ್ ನ ಕಾನ್ಫರೆನ್ಸ್ ಹಾಲ್ ನಲ್ಲಿ ಶೋಧ ಕಾರ್ಯ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ಪ್ಯಾಕೇಟ್ ನಲ್ಲಿ 700 ಗ್ರಾಂಗಳಷ್ಟು ಬಿಳಿ ಪೌಡರ್ ಇದ್ದಿರುವುದು ಪತ್ತೆಯಾಗಿತ್ತು. ಇದು ಸುಮಾರು 4 ಕೋಟಿ ರೂಪಾಯಿ ಮೌಲ್ಯದ ಹೆರಾಯಿನ್ ಎಂದು ವರದಿ ಹೇಳಿದೆ.
ಎನ್ ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು. ಈ ಪಾರ್ಸೆಲ್ ಗುಜರಾತ್ ನ ವಡೋದರಾ ನಿವಾಸಿ ಕೃಷ್ಣ ಮುರಾರಿ ಪ್ರಸಾದ್ ಹೆಸರಿನಲ್ಲಿ ಇತ್ತು. ಈ ನಿಟ್ಟಿನಲ್ಲಿ ಪ್ರಸಾದ್ ಗೆ ಸಮನ್ಸ್ ನೀಡಿದ್ದು, ಅದರಂತೆ ಹೇಳಿಕೆ ದಾಖಲು ಮಾಡಿಕೊಳ್ಳಲಾಗಿದೆ ಎಂದು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯುರೋದ ಅಧಿಕಾರಿ ತಿಳಿಸಿದ್ದಾರೆ.
ತನಿಖೆಯ ನಂತರ ಪ್ರಸಾದ್ ನನ್ನು ಬಂಧಿಸಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೆರಾಯಿನ್ ಸಾಗಾಟ ಜಾಲ ಹಾಗೂ ಅಂತಾರಾಷ್ಟ್ರೀಯ ಅಕ್ರಮ ಸಾಗಾಟದ ಕುರಿತು ಮಾಹಿತಿ ಕಲೆ ಹಾಕುತ್ತಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್