ಭದ್ರತಾ ಲೋಪ: NSA ಅಜಿತ್ ದೋವಲ್ ನಿವಾಸ ಪ್ರವೇಶಿಸಲು ಯತ್ನ, ಬೆಂಗಳೂರಿನ ಯುವಕನ ವಿಚಾರಣೆ
ತನ್ನ ದೇಹದೊಳಗೆ ಚಿಪ್ ಇದ್ದು, ಇದನ್ನು ಬಾಹ್ಯವಾಗಿ ನಿಯಂತ್ರಿಸಲಾಗುತ್ತಿದೆ ಎಂದು ಹೇಳಿದ್ದ.
Team Udayavani, Feb 16, 2022, 2:32 PM IST
ನವದೆಹಲಿ: ರಾಷ್ಟ್ರೀಯ ಭದ್ರತಾ ಸಲಹೆಗಾರ(ಎನ್ ಎಸ್ ಎ) ಅಜಿತ್ ದೋವಲ್ ನಿವಾಸದಲ್ಲಿ ಭದ್ರತಾ ಲೋಪ ಘಟನೆ ನಡೆದಿದ್ದು, ವ್ಯಕ್ತಿಯೊಬ್ಬ ಬುಧವಾರ (ಫೆ.16) ದೋವಲ್ ನಿವಾಸದೊಳಕ್ಕೆ ಪ್ರವೇಶಿಸಲು ಯತ್ನಿಸಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ವಿಧಾನಸಭೆಯಲ್ಲಿ ಕಾಂಗ್ರೆಸ್-ಬಿಜೆಪಿ ಸದಸ್ಯರ ಮಧ್ಯೆ ಕೈ ಕೈ ಮಿಲಾಯಿಸುವ ಸ್ಥಿತಿ ನಿರ್ಮಾಣ
ಮನೆ ಪ್ರವೇಶಿಸಲು ಯತ್ನಿಸಿದ ವ್ಯಕ್ತಿಯನ್ನು ಭದ್ರತಾ ಸಿಬಂದಿಗಳು ತಡೆದಿದ್ದು, ಈತನನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿರುವುದಾಗಿ ವರದಿ ವಿವರಿಸಿದೆ. ಮೂಲಗಳ ಪ್ರಕಾರ, ದೋವಲ್ ನಿವಾಸದೊಳಕ್ಕೆ ಪ್ರವೇಶಿಸಿದ ವ್ಯಕ್ತಿ ತನ್ನ ದೇಹದೊಳಗೆ ಚಿಪ್ ಇದ್ದು, ಇದನ್ನು ಬಾಹ್ಯವಾಗಿ ನಿಯಂತ್ರಿಸಲಾಗುತ್ತಿದೆ ಎಂದು ಹೇಳಿದ್ದ.
ಎನ್ ಎಸ್ ಎ ಅಜಿತ್ ದೋವಲ್ ನಿವಾಸ ಪ್ರವೇಶಿಸಲು ಯತ್ನಿಸಿದ್ದ ವ್ಯಕ್ತಿಯನ್ನು ಬೆಂಗಳೂರು ನಿವಾಸಿ ಎಂದು ಗುರುತಿಸಲಾಗಿದೆ. ಈ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದೊಯ್ದು ಎಂಆರ್ ಐ ಸ್ಕ್ಯಾನ್ ಮಾಡಿಸಿದ್ದು, ಯಾವುದೇ ಚಿಪ್ ಪತ್ತೆಯಾಗಿಲ್ಲ ಎಂದು ಮೂಲಗಳು ತಿಳಿಸಿವೆ.
ದೋವಲ್ ನಿವಾಸದೊಳಗೆ ಪ್ರವೇಶಿಸಲು ಯತ್ನಿಸಿರುವ ಬೆಂಗಳೂರಿನ ವ್ಯಕ್ತಿಯನ್ನು ದೆಹಲಿಯ ವಿಶೇಷ ಭಯೋತ್ಪಾದಕ ನಿಗ್ರಹ ಘಟಕ ವಶಕ್ಕೆ ತೆಗೆದುಕೊಂಡಿಲ್ಲ ಎಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
MUST WATCH
ಹೊಸ ಸೇರ್ಪಡೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
ಬ್ಯಾಟಿಂಗ್ – ಬೌಲಿಂಗ್ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್ಗೆ ದಕ್ಷಿಣ ಆಫ್ರಿಕಾ ಪ್ರಕಟ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ