ಐಪಿಎಲ್ ಪಂದ್ಯದ ವೇಳೆ ಮೈದಾನಕ್ಕೆ ನುಗ್ಗಿದ ಯುವಕನ ಬಂಧನ
ಹೊರಗೆ ಕರೆದೊಯ್ಯುವಾಗ ಪೊಲೀಸರೊಂದಿಗೆ ವಾಗ್ವಾದ
Team Udayavani, Apr 10, 2022, 7:11 PM IST
ಪುಣೆ : ಇಲ್ಲಿನ ಗಹುಂಜೆಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಪಂದ್ಯ ನಡೆಯುತ್ತಿದ್ದ ವೇಳೆ ಪ್ರವೇಶಿಸಿದ ಸತಾರಾ ಜಿಲ್ಲೆಯ 26 ವರ್ಷದ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಶನಿವಾರದ ಪಂದ್ಯದ ವೇಳೆ ಯುವಕ ಕ್ರೀಡಾಂಗಣದೊಳಗೆ ನುಗ್ಗಿದ್ದ. ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರನ್ನು ಭೇಟಿಯಾಗಲು ಈ ರೀತಿ ಮಾಡಿದ್ದ.
ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂಗೆ ಬಂಧಿತ ದಶರಥ್ ಜಾಧವ್ ಓಡಿಹೋಗಿ, ಬ್ಯಾಟಿಂಗ್ ಮಾಡುತ್ತಿದ್ದ ಕೊಹ್ಲಿಯವರನ್ನು ಮುಷ್ಟಿಯಿಂದ ಮುಷ್ಟಿಗೆ ಬಡಿದು, ರೋಹಿತ್ ಶರ್ಮಾ ಕಡೆಗೆ ತೆರಳಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಕ್ರೀಡಾಂಗಣಕ್ಕೆ ಅತಿಕ್ರಮ ಪ್ರವೇಶ ಮಾಡಿದ್ದಕ್ಕಾಗಿ ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಾಧವ್ ನನ್ನು ಮೈದಾನದಿಂದ ಹೊರಗೆ ಕರೆದೊಯ್ಯುವಾಗ ಪೊಲೀಸರೊಂದಿಗೆ ವಾಗ್ವಾದದಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಐಪಿಸಿ ಸೆಕ್ಷನ್ 447 (ಕ್ರಿಮಿನಲ್ ಅತಿಕ್ರಮಣ) ಮತ್ತು 353 (ಸಾರ್ವಜನಿಕ ನೌಕರನ ಕರ್ತವ್ಯ ನಿರ್ವಹಣೆಯನ್ನು ತಡೆಯಲು ಹಲ್ಲೆ ಅಥವಾ ಕ್ರಿಮಿನಲ್ ಬಲ ಪ್ರಯೋಗ) ಆರೋಪದ ಅಡಿಯಲ್ಲಿ ಬಂಧಿಸಲಾಗಿದೆ ಎಂದು ತಾಳೇಗಾಂವ್ ಪೊಲೀಸ್ ಠಾಣೆಯ ಹಿರಿಯ ಇನ್ಸ್ಪೆಕ್ಟರ್ ಮಧುಕರ್ ಸಾವಂತ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ