ಕೋವಿಡ್ ವಾರ್ಡ್ ನಲ್ಲಿ ಗಂಟೆಗಟ್ಟಲೇ ಇರಿಸಿದ ಶವ : ಸೋಂಕಿತರಲ್ಲಿ ಆತಂಕ
Team Udayavani, May 8, 2021, 6:47 PM IST
ಮಂಡ್ಯ: ಮಳವಳ್ಳಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಕೋವಿಡ್ ವಾರ್ಡ್ ನಲ್ಲಿ ಸೋಂಕಿನಿಂದ ಮೃತಪಟ್ಟವರ ಶವವನ್ನು ಗಂಟೆಗಟ್ಟಲೇ ವಾರ್ಡ್ ನಲ್ಲಿ ಇಟ್ಟಿದ್ದರಿಂದ ಇತರೆ ಸೋಂಕಿತರು ಆತಂಕಗೊಂಡ ಘಟನೆ ಶನಿವಾರ ಮುಂಜಾನೆ ನಡೆದಿದೆ.
ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಕೋವಿಡ್ ವಾರ್ಡ್ ತುರ್ತು ಘಟಕದಲ್ಲಿ 6 ಮಂದಿ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಸೋಂಕಿತರು ಶುಕ್ರವಾರ ರಾತ್ರಿ ಸಾವನ್ನಪ್ಪಿದ್ದರು. ಹಲವು ಗಂಟೆಗಳ ಕಾಲ ಶವಗಳನ್ನು ವಾರ್ಡ್ ನಲ್ಲಿ ಇಡಲಾಗಿತ್ತು. ಆಸ್ಪತ್ರೆಯ ಸಿಬ್ಬಂದಿ ಶವಗಳ ಮುಂದೆಯೇ ಸೋಂಕಿತರಿಗೆ ಚಿಕಿತ್ಸೆ ನೀಡಿದ್ದಾರೆ. ಕೊರೊನಾ ಭಯದಲ್ಲಿದ್ದ ಸೋಂಕಿತರಿಗೆ ಮತ್ತಷ್ಟು ಆತಂಕ ಕಾಡಿದೆ.
ಸಾವನ್ನಪ್ಪಿರುವ ಮೃತರ ಶವಗಳನ್ನು ಕೂಡಲೇ ಬೇರೆಡೆಗೆ ಸಾಗಿಸುವಂತೆ ಕರ್ತವ್ಯದಲ್ಲಿದ್ದ ವೈದ್ಯರು ಹಾಗೂ ತಾಲೂಕು ಆಡಳಿತಕ್ಕೆ ಮನವಿ ಮಾಡಿದ್ದಾರೆ. ನಂತರ ಶವಗಳನ್ನು ಬೇರೆಡೆಗೆ ಸಾಗಿಸಲಾಯಿತು.
ಇದನ್ನೂ ಓದಿ :ಒಂದು ವಾರದೊಳಗೆ ಇಬ್ಬರು ಶಿಕ್ಷಣ ತಜ್ಞರು ಕೋವಿಡ್ ಗೆ ಬಲಿ
ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಮಾಧವ ನಾಯಕ್ ಮಾತನಾಡಿ, ಕೋವಿಡ್ ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಶವಗಳನ್ನು ಆರೋಗ್ಯ ಇಲಾಖೆಯ ಮಾರ್ಗಸೂಚಿಯಂತೆ ಪ್ಯಾಕ್ ಮಾಡಲು ಒಂದೂವರೆ ಗಂಟೆಗಳ ಸಮಯಬೇಕು. ಸಾವನ್ನಪ್ಪಿದ ತಕ್ಷಣವೇ ಶವಗಳನ್ನು ಬೇರೆಡೆ ಸಾಗಿಸಲು ಕ್ರಮ ವಹಿಸಲಾಗಿದೆ ಎಂದು ಹೇಳಿದರು.
ತಹಶೀಲ್ದಾರ್ ಎಂ.ವಿಜಯಣ್ಣ ಪ್ರತಿಕ್ರಿಯಿಸಿ, ವೈದ್ಯರು ಕೋವಿಡ್ ಮಾರ್ಗಸೂಚಿಯಂತೆ ಮೃತರ ಶವಗಳನ್ನು ವಾರಸುದಾರರಿಗೆ ನೀಡಿದ್ದಾರೆ. ಘಟನೆಯಿಂದ ಯಾವ ಸೋಂಕಿತರು ಆತಂಕಗೊಂಡಿರಲಿಲ್ಲ. ಈ ಬಗ್ಗೆ ಕರ್ತವ್ಯದಲ್ಲಿದ್ದ ವೈದ್ಯರಿಂದ ಮಾಹಿತಿ ಪಡೆಯಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ