ಮಂಡ್ಯ : ಕ್ಷುಲ್ಲಕ ವಿಚಾರಕ್ಕೆ ಹಾಡಹಗಲೇ ದುಷ್ಕರ್ಮಿಗಳಿಂದ ಯುವಕನ ಹತ್ಯೆ
Team Udayavani, Jan 25, 2021, 6:34 PM IST
ಮಂಡ್ಯ: ಕ್ಷುಲ್ಲಕ ವಿಚಾರಕ್ಕೆ ಯುವಕನೊಬ್ಬನನ್ನು ಹಾಡಹಗಲೇ ದುಷ್ಕರ್ಮಿಗಳ ಗುಂಪು ಕೊಲೆ ಮಾಡಿರುವ ಘಟನೆ ಮಳವಳ್ಳಿ ಪಟ್ಟಣದ ಎನ್ಇಎಸ್ ಬಡಾವಣೆಯಲ್ಲಿ ಸೋಮವಾರ ನಡೆದಿದೆ.
ಪಟ್ಟಣದ ಎನ್ಇಎಸ್ ಬಡಾವಣೆಯ ನಿವಾಸಿ ಜಯಮ್ಮ ಎಂಬುವವರ ಪುತ್ರ ಶರತ್(23) ಕೊಲೆಯಾದ ಯುವಕ.
ಕಳೆದ ಒಂದು ವಾರದ ಹಿಂದೆ ಹೋಟೆಲೊಂದರಲ್ಲಿ ನಿಂತಿದ್ದ ಶರತ್ ಬಳಿ ಹುಡುಗಿಯೊಬ್ಬಳು ಬಂದು ಫೋಟೋದಲ್ಲಿದ್ದ ಯುವಕನೊಬ್ಬನ ವಿಳಾಸ ಕೇಳಿದ್ದಾಳೆ. ಈ ವೇಳೆ ಶರತ್ ಮಾಹಿತಿ ನೀಡಿದ್ದ ಎನ್ನಲಾಗಿದ್ದು, ಈ ದ್ವೇಷದ ಹಿನ್ನೆಲೆಯಲ್ಲಿ ಸೋಮವಾರ ಮನೆಯ ಬಳಿ ಬಂದ 3-4 ಮಂದಿ ದುಷ್ಕರ್ಮಿಗಳು ಶರತ್ ನನ್ನು ಆಟೋದಲ್ಲಿ ಕರೆದುಕೊಂಡು ಹೋಗಿದ್ದಾರೆ.
ಇದನ್ನು ಗಮಿಸಿದ ತಾಯಿ ಜಯಮ್ಮ ಆಟೋ ಹಿಂಬಾಲಿಸಿಕೊಂಡು ಹೋದಾಗ ಚರ್ಚ್ ಹಿಂಭಾಗದಲ್ಲಿ ದುಷ್ಕರ್ಮಿಗಳು ಮಗನ ಮೇಲೆ ಹಲ್ಲೆ ನಡೆಸುತ್ತಿರುವುದನ್ನು ನೋಡಿ ಕಿರುಚಿಕೊಂಡಿದ್ದಾರೆ. ಈ ವೇಳೆ ಶರತ್ ನನ್ನು ಸ್ಥಳದಲ್ಲಿಯೇ ಬಿಟ್ಟು ದುಷ್ಕರ್ಮಿಗಳ ತಂಡ ಪರಾರಿಯಾಗಿದೆ.
ಇದನ್ನೂ ಓದಿ:ಬಂಗಾರ ಪಲ್ಕೆ ಜಲಪಾತದಿಂದ ಬಿದ್ದು ಮಣ್ಣಿನಡಿ ಸಿಲುಕಿದ ಯುವಕ
ಗಂಭೀರ ಹಲ್ಲೆಗೊಳಗಾದ ಶರತ್ ನನ್ನು ಕೂಡಲೇ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಯಿತಾದರೂ. ತೊಡೆಗೆ ಹರಿತವಾದ ಆಯುಧದಿಂದ ಹಲ್ಲೆ ಮಾಡಿದ್ದ ಪರಿಣಾಮ ತೀವ್ರ ರಕ್ತಸ್ರಾವದಿಂದ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ ಎಂದು ಮೃತ ಯುವಕನ ತಾಯಿ ಜಯಮ್ಮ ಹೇಳಿದರು.
ಈ ಸಂಬಂಧ ಪಟ್ಟಣದ ಪುರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಪಟ್ಣಣದಲ್ಲಿ ದಿನದಿಂದ ದಿನಕ್ಕೆ ಕಳ್ಳತನ, ದರೋಡೆ ಸೇರಿದಂತೆ ಅಪರಾಧ ಪ್ರಕರಣಗಳು ಸಂಖ್ಯೆ ಹೆಚ್ಚಾಗುತ್ತಿದ್ದು, ಹಾಡಹಗಲೆ ಯುವಕ ಕೊಲೆ ನಡೆದಿರುವುದು ಸಾರ್ವಜನಿಕರಲ್ಲಿ ಭಯ ಮೂಡಿಸಿದೆ. ಮನೆ ಕಳ್ಳತನ, ಬೈಕ್ ಅಡ್ಡಗಟ್ಟಿ ದರೋಡೆ, ಕ್ಷುಲ್ಲಕ ವಿಚಾರಗಳಿಗೆ ಹಲ್ಲೆಗಳು ನಿರಂತರವಾಗಿ ನಡೆಯುತ್ತಿದ್ದರೂ ಕಠಿಣ ಕ್ರಮ ಕೈಗೊಳ್ಳದ ಪೊಲೀಸರ ವಿರುದ್ಧ ಪಟ್ಟಣದ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್
ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು
ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…
Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ
MUST WATCH
ಹೊಸ ಸೇರ್ಪಡೆ
ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!
Pan India: ಯಶ್ ʼಟಾಕ್ಸಿಕ್ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್