ಮಂಡ್ಯದಲ್ಲಿ ಪ್ರತ್ಯೇಕ ಪ್ರಕರಣ: ಬೈಕ್ ಸವಾರರನ್ನು ಅಡ್ಡಗಟ್ಟಿ ಚಿನ್ನದ ಸರ, ಹಣ ದೋಚಿದ ಕಳ್ಳರು
Team Udayavani, Nov 3, 2020, 10:11 PM IST
ಮಂಡ್ಯ: ಎರಡು ಪ್ರತ್ಯೇಕ ಪ್ರಕರಣದಲ್ಲಿ ಬೈಕ್ನಲ್ಲಿ ಬರುತ್ತಿದ್ದವರನ್ನು ಅಡ್ಡೆ ಹಾಕಿ ಚಿನ್ನದ ಸರ, ನಗದು ದೋಚಿರುವ ಘಟನೆ ಸೋಮವಾರ ರಾತ್ರಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ.
ಬೆಂಗಳೂರು-ಮೈಸೂರು ಹೆದ್ದಾರಿಯ ತಾಲೂಕಿನ ಇಂಡುವಾಳು ಗೇಟ್ ಮತ್ತು ಬ್ಯಾಡರಹಳ್ಳಿ ಕ್ರಾಸ್ ಬಳಿ ಸೋಮವಾರ ರಾತ್ರಿ ಬೈಕ್ನಲ್ಲಿ ಬರುತ್ತಿದ್ದವರನ್ನು ಅಡ್ಡ ಹಾಕಿ ಚಿನ್ನದ ಸರ, ನಗದನ್ನು ದೋಚಲಾಗಿದೆ.
ನಗರದ ಗುತ್ತಲು ಬಡಾವಣೆಯ ಶಿವರಾಜು ಮತ್ತು ತಾಲೂಕಿನ ತೂಬಿನಕೆರೆ ಗ್ರಾಮದ ಸಂತೋಷ್ ಚಿನ್ನ ಕಳೆದುಕೊಂಡವರು. ಅಂಗಡಿ ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಶಿವರಾಜು ಎಂಬುವರನ್ನು ಇಂಡುವಾಳು ಸಮೀಪ ಅಡ್ಡೆ ಹಾಕಲಾಗಿದೆ. ಬಳಿಕ ಹಲ್ಲೆ ನಡೆಸಿ ಚಿನ್ನದ ಸರ ಕಸಿದುಕೊಂಡು ಪರಾರಿಯಾಗಿದ್ದಾರೆ.
ಇದನ್ನೂ ಓದಿ:ಬೈಕುಗಳ ನಡುವೆ ಭೀಕರ ಅಪಘಾತ: ನಾಲ್ವರ ಸಾವು, ಇಬ್ಬರಿಗೆ ಗಂಭೀರ ಗಾಯ
ಅಂತೆಯೇ ಸಂತೋಷ್ನನ್ನು ಬ್ಯಾಡರಹಳ್ಳಿ ಕ್ರಾಸ್ನಲ್ಲಿ ಅಡ್ಡ ಹಾಕಿ ಚಿನ್ನದ ಸರದ ಜತೆಗೆ ಹಣವನ್ನು ಕಿತ್ತು ಪರಾರಿಯಾಗಿದ್ದಾರೆ.
ಈ ಎರಡು ಕೃತ್ಯವನ್ನು ಒಂದೇ ತಂಡ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಇನ್ನು ರಾತ್ರಿ ಪೊಲೀಸರು ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹುಡುಕಾಡಿದ್ದು, ಕಳ್ಳರು ಪತ್ತೆಯಾಗಿಲ್ಲ. ಘಟನೆ ಸಂಬoಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು