ಖಾಸಗೀಕರಣದ ಹೆಸರಿನಲ್ಲಿ ಮಂಗಳೂರು ವಿಮಾನ ನಿಲ್ದಾಣದ ನಿರ್ಲಕ್ಷ್ಯ : ಐವನ್‌ ಡಿ’ಸೋಜಾ ಆರೋಪ


Team Udayavani, Apr 15, 2021, 6:55 PM IST

ಖಾಸಗೀಕರಣದ ಹೆಸರಿನಲ್ಲಿ ಮಂಗಳೂರು ವಿಮಾನ ನಿಲ್ದಾಣದ ನಿರ್ಲಕ್ಷ್ಯ : ಐವನ್‌ ಡಿ’ಸೋಜಾ ಆರೋಪ

ಮಂಗಳೂರು : ಮಂಗಳೂರಿನಿಂದ ಹಲವಾರು ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನ ಯಾನಗಳನ್ನು ಕಡಿತಗೊಳಿಸಲಾಗಿದ್ದು ಖಾಸಗೀಕರಣದ ಹೆಸರಿನಲ್ಲಿ ವಿಮಾನ ನಿಲ್ದಾಣವನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ವಿಧಾನ ಪರಿಷತ್‌ ಮಾಜಿ ಸದಸ್ಯ ಐವನ್‌ ಡಿ’ಸೋಜಾ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣದ ಪ್ರಗತಿ ಕುಂಠಿತವಾಗಿದ್ದು ಸೌಲಭ್ಯಗಳನ್ನು ಕಡಿತಗೊಳಿಸಲಾಗಿದೆ. ದಿಲ್ಲಿಗೆ ಇದ್ದ ನೇರ ಮತ್ತು ಮೈಸೂರು ಸಂಪರ್ಕದ ವಿಮಾನಯಾನ ರದ್ದುಪಡಿಸಲಾಗಿದ್ದರೆ ಮುಂಬಯಿಗೆ ಯಾನ ಸಂಖ್ಯೆ ಕಡಿತಗೊಳಿಸಲಾಗಿದೆ. ಗೋ-ಏರ್‌ ಮುಂಬಯಿ ಮತ್ತು ಇತರ ಪ್ರದೇಶಗಳಿಗೆ ಸೇವೆ ಆರಂಭಿಸಲು ಮುಂದೆ ಬಂದಿದ್ದರೂ ಕಾರ್ಯಾರಂಭವಾಗಿಲ್ಲ. ಬೆಂಗಳೂರು, ದಿಲ್ಲಿಗೆ ರಾತ್ರಿ 11, 11.30ಕ್ಕೆ ವಿಮಾನಯಾನವಿದ್ದರೆ ಅದರಲ್ಲಿ ಯಾರು ಪ್ರಯಾಣಿಸುತ್ತಾರೆ ಎಂದು ಐವನ್‌ ಪ್ರಶ್ನಿಸಿದರು.

ಮನ್ನಣೆ ಕಳೆದುಕೊಳ್ಳುವ ಭೀತಿ
ಮಂಗಳೂರು ವಿಮಾನ ನಿಲ್ದಾಣ ಅಂತಾರಾಷ್ಟ್ರೀಯ ಮನ್ನಣೆ ಪಡೆದು 16 ವರ್ಷಗಳಾದರೂ ಗಲ್ಫ್ ಹೊರತು ಬೇರೆ ಯಾವುದೇ ಪ್ರವಾಸೋದ್ಯಮ ರಾಷ್ಟ್ರಗಳಿಗೆ ವಿಮಾನಯಾನ ಆರಂಭಿಸಿಲ್ಲ. ತಿರುಪತಿ, ಶಿರ್ಡಿ ಮೊದಲಾದೆಡೆಗೆ ಅನೇಕ ಮಂದಿ ಹೋಗುವವರಿದ್ದರೂ ನೇರ ಸೇವೆ ಇಲ್ಲ. ಹೀಗಾಗಿ ಅಂತಾರಾಷ್ಟ್ರೀಯ ಮನ್ನಣೆ ಕಳೆದುಕೊಳ್ಳುವ ಸ್ಥಿತಿ ಉಂಟಾಗಿದೆ ಎಂದರು.

ಇದನ್ನೂ ಓದಿ :ಉಡುಪಿ-ಮಣಿಪಾಲವನ್ನು ದೇಶಕ್ಕೆ ಮಾದರಿ ನಗರವನ್ನಾಗಿಸಲು ಯತ್ನ : ಅನುಮೋದನೆಯೊಂದೇ ಬಾಕಿ

ಜನಸ್ನೇಹಿಯಾಗದ ನಿಲ್ದಾಣ
ಮಂಗಳೂರು ವಿಮಾನ ನಿಲ್ದಾಣ ಜನಸ್ನೇಹಿಯಾಗಿಲ್ಲ. ಪ್ರವಾಸೋದ್ಯಮ / ಪ್ರೇಕ್ಷಣೀಯ ಸ್ಥಳಗಳ ಮಾಹಿತಿಗೆ ಮಾಹಿತಿ ಕೇಂದ್ರವಿಲ್ಲ. ನಿಲ್ದಾಣದಿಂದ ನಗರಕ್ಕೆ ಬರಲು ಬಸ್‌ ವ್ಯವಸ್ಥೆ ಇಲ್ಲ. ನಿಲ್ದಾಣದಲ್ಲಿ ಪ್ರತ್ಯೇಕ ಆಗಮನ ಮತ್ತು ನಿರ್ಗಮನ ವ್ಯವಸ್ಥೆಗೆ 2 ವರ್ಷಗಳಿಂದ ಕಾಮಗಾರಿ ನಡೆಸಿದರೂ ಪೂರ್ಣವಾಗಿಲ್ಲ ಎಂದು ಐವನ್‌ ಆರೋಪಿಸಿದರು.

ಏರ್‌ಪೋರ್ಟ್‌ ಉಳಿಸಿ ಚಳವಳಿ
ಈ ಹಿಂದೆ ಇದ್ದ ವಿಮಾನಯಾನದ ಜತೆಗೆ, ಹೊಸ ಪ್ರದೇಶಗಳಿಗೆ ಯಾನ ಆರಂಭ, ನಿಲ್ದಾಣದ ಅಭಿವೃದ್ಧಿ ಮೊದಲಾದ ಬೇಡಿಕೆಗಳ ಬಗ್ಗೆ ವಿಮಾನಯಾನ ಸಚಿವರು ಕೂಡಲೇ ಗಮನಹರಿಸಬೇಕು. ಇಲ್ಲದಿದ್ದಲ್ಲಿ “ಏರ್‌ಪೋರ್ಟ್‌ ಉಳಿಸಿ’ ಚಳವಳಿ ಆರಂಭಿಸಲಾಗುವುದು ಎಂದು ಐವನ್‌ ಹೇಳಿದರು.

ಅದಾನಿ ಹೆಸರು ಅಳಿಸಲು ಗಡುವು
ಅದಾನಿ ಸಂಸ್ಥೆಯು ಗುತ್ತಿಗೆ ನಿಯಮಗಳನ್ನು ಉಲ್ಲಂಘಿಸಿ ವಿಮಾನ ನಿಲ್ದಾಣಕ್ಕೆ “ಅದಾನಿ ಏರ್‌ಪೋರ್ಟ್‌’ ಎಂದು ನಾಮಕರಣ ಮಾಡಿದೆ. ಇದು ಕಾನೂನಿಗೆ ವಿರುದ್ಧವಾದುದು. ಬದಲಾಯಿಸಿರುವ ಹೆಸರನ್ನು 15 ದಿನಗಳೊಳಗೆ ತೆಗೆಯಬೇಕು. ಇಲ್ಲದಿದ್ದರೆ ನಾಮಫ‌ಲಕಕ್ಕೆ ಮಸಿ ಬಳಿದು ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.

ಸ್ಪಷ್ಟನೆ ನೀಡಿ
ಮಂಗಳೂರಿನಿಂದ ವಿವಿಧ ಕಡೆಗಳಿಗೆ ವಿಮಾನಯಾನ ಒದಗಿಸಲು ವಿಫ‌ಲವಾಗಿರುವ ಬಗ್ಗೆ ನಿಲ್ದಾಣ ಪ್ರಾಧಿಕಾರ ಸ್ಪಷ್ಟನೆ ನೀಡಬೇಕು. “ಉಡಾನ್‌’ ಯೋಜನೆಯಡಿ ಉಡುಪಿಯಲ್ಲಿ ವಿಮಾನ ನಿಲ್ದಾಣ ಆರಂಭಿಸಲು ಅವಕಾಶವಿದೆ. ಆದರೆ ಸಂಸದರ ರಾಜಕೀಯ ಇಚ್ಛಾಶಕ್ತಿಯ ಕೊರತೆ ಕಾಣುತ್ತಿದೆ ಎಂದು ಐವನ್‌ ಹೇಳಿದರು.

ಮನಪಾ ಸದಸ್ಯ ಎ.ಸಿ. ವಿನಯರಾಜ್‌, ಕಾಂಗ್ರೆಸ್‌ ಪ್ರಮುಖರಾದ ವಿವೇಕ್‌ರಾಜ್‌, ಶುಭೋದಯ ಆಳ್ವ, ಸಾಹುಲ್‌ ಹಮೀದ್‌, ಲುಕ್ಮಾನ್‌ ಬಂಟ್ವಾಳ, ಆಲಿಸ್ಟರ್‌ ಡಿ’ಕುನ್ಹಾ, ಅಪ್ಪಿ, ಭಾಸ್ಕರ್‌ ರಾವ್‌, ಸುಹಾನ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.