ಮಂಗಳೂರು : ಹೆಡ್ ಕಾನ್ಸ್ ಟೇಬಲ್ ಮೇಲೆ ಹಲ್ಲೆ ಪ್ರಕರಣ : ಓರ್ವ ಪೊಲೀಸರ ವಶಕ್ಕೆ
Team Udayavani, Dec 17, 2020, 1:14 PM IST
ಮಂಗಳೂರು : ಕರ್ತವ್ಯನಿರತರಾಗಿದ್ದ ಪೊಲೀಸ್ ಹೆಡ್ಕಾನ್ಸ್ಟೆಬಲ್ ಓರ್ವರಿಗೆ ದುಷ್ಕರ್ಮಿಯೋರ್ವ ಕತ್ತಿಯಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿ ಪೊಲೀಸರು ಓರ್ವನನ್ನು ವಶಕ್ಕೆ ಪಡೆದಿದ್ದಾರೆ.
ಮಂಗಳೂರು ಉತ್ತರ ಪೊಲೀಸ್ ಠಾಣೆಯ ಹೆಡ್ಕಾನ್ಸ್ಟೆಬಲ್ ಗಣೇಶ್ ಕಾಮತ್ ಅವರು ನ್ಯೂ ಚಿತ್ರ ಜಂಕ್ಷನ್ ಬಳಿ ಇಬ್ಬರು ಮಹಿಳಾ ಸಿಬಂದಿಯೊಂದಿಗೆ ಚೆಕ್ಪೋಸ್ಟ್ನಲ್ಲಿ ವಾಹನಗಳ ತಪಾಸಣೆ ನೆಡೆಸುತ್ತಿದ್ದ ವೇಳೆ ಬೆಳಗ್ಗೆ 11.30ರ ಸುಮಾರಿಗೆ ಅಳಕೆ ಕಡೆಯಿಂದ ಸ್ಕೂಟರ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳ ಪೈಕಿ ಸ್ಕೂಟರ್ ಸವಾರ ಸಹ ಸವಾರನನ್ನು ಇಳಿಸಿದ್ದಾನೆ. ಸಹಸವಾರ ಗಣೇಶ್ ಕಾಮತ್ ಅವರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ.
ಹಲ್ಲೆಯಿಂದ ಗಣೇಶ್ ಕಾಮತ್ ಅವರ ಬಲಕೈಗೆ ಗಂಭೀರ ಸ್ವರೂಪದ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಹಲ್ಲೆ ನಡೆದ ಪಕ್ಕದಲ್ಲೇ ಇದ್ದ ಸಿಸಿ ಕ್ಯಾಮೆರಾದಲ್ಲಿ ಘಟನೆ ನಡೆದ ಚಿತ್ರಣ ದಾಖಲಾಗಿದ್ದು ಪೊಲೀಸರು ಓರ್ವನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ:ಕೌನ್ ಬನೇಗಾ ಕರೋಡ್ ಪತಿ: ಅನಮಯಗೆ 1 ಕೋಟಿ ಮಿಸ್ ಆಗಲು “ಮಹಾಭಾರತದ ಈ ಪ್ರಶ್ನೆ” ಕಾರಣ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
ಮತದಾರರ ಚೀಟಿಯಲ್ಲಿ ಕ್ಯುಆರ್ ಕೋಡ್! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ
Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ