ಮಂಗಳೂರು: ಮಾರಕಾಯುಧ ಝಳಪಿಸಿ 3 ಗೋವುಗಳ ಕಳ್ಳತನ
Team Udayavani, Dec 3, 2021, 12:34 PM IST
ಮಂಗಳೂರು: ಶುಕ್ರವಾರ ಮುಂಜಾನೆ ಬಂಗ್ರಕೂಳೂರಿನಲ್ಲಿ ದನ ಕಳ್ಳರ ಅಟ್ಟಹಾಸ ಮೆರೆದಿದ್ದು, ನಸುಕಿನ 4 ಗಂಟೆಯ ವೇಳೆ ಗೋಲ್ಡ್ ಫಿಂಚ್ ಮುಂಭಾಗದಲ್ಲಿ ಮಾರಕಾಯುಧಗಳನ್ನು 3 ದನಗಳನ್ನು ಕದ್ದೊಯ್ದಿದ್ದಾರೆ.
ಕದ್ದ 2 ದನಗಳು ಉಮೇಶ್ ಮಲರಾಯಸಾನ ಮತ್ತು 1ದನ ಉದಯ ಶೆಟ್ಟಿ ಇವರದ್ದಾಗಿದೆ.
ಕಪ್ಪು ಬಣ್ಣದ ಸ್ಕೋರ್ಪಿಯೋ ವಾಹನದಲ್ಲಿ ಬಂದ ಗೋಕಳ್ಳರು ಮಾರಕಾಯುಧಗಳನ್ನು ಝಳಪಿಸಿ ದನಗಳನ್ನು ಕದ್ದುಕೊಂಡು ಹೋಗಿರುತ್ತಾರೆ.
ಈ ಕೃತ್ಯವನ್ನು ವಿಶ್ವ ಹಿಂದೂ ಪರಿಷತ್ ಬಜರಂಗದಳ ಕಾವೂರು ಪ್ರಖಂಡವು ತೀವ್ರವಾಗಿ ಖಂಡಿಸಿದೆ. ಈ ಘಟನೆಯ ಹಿಂದೆ ಒಂದು ದೊಡ್ಡ ಜಾಲವೇ ಕಾರ್ಯಾಚರಿಸುತ್ತಿರುವ ಶಂಕೆಯಿದ್ದು, ಪೊಲೀಸ್ ಇಲಾಖೆ ಇದರ ಬಗ್ಗೆ ಸೂಕ್ತ ತನಿಖೆ ನಡೆಸಿ ಅಪರಾಧಿಗಳನ್ನು ಆದಷ್ಟು ಬೇಗ ಪತ್ತೆಹಚ್ಚಿ ಶಿಕ್ಷಿಸಬೇಕೆಂದು ಆಗ್ರಹಿಸಿದೆ.
ಮೂರು ದಿನಗಳ ಹಿಂದೆ ತೀರ್ಥಹಳ್ಳಿಯಲ್ಲಿ ಗೋ ಕಳ್ಳರು ಇಬ್ಬರು ಗೋ ರಕ್ಷಕರ ಮೇಲೆ ವಾಹನ ಹರಿಸಿ ಅಟ್ಟಹಾಸ ಮೆರೆದಿದ್ದರು. ಇಬ್ಬರು ಗಾಯಾಳುಗಳಿಗೆ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಮಾ. 20 – 24 ಕೆಲವೆಡೆ ಸಾಮಾನ್ಯ ಮಳೆ ಸಾಧ್ಯತೆ
Lok Sabha Election 2024: ಗಡಿ ಭಾಗಗಳಲ್ಲಿ ತಪಾಸಣೆ ಬಿರುಸು
ಜೆಡಿಎಸ್ನಲ್ಲಿದ್ದು ಬಿಜೆಪಿಗೆ ಬೆಂಬಲ, ಸ್ವತಂತ್ರ ಸ್ಪರ್ಧೆ ಶೀಘ್ರ ನಿರ್ಧಾರ: ಮೊದಿನ್ ಬಾವಾ
ಕಲಾವಿದರ ಮೇಲೆ ದಬ್ಬಾಳಿಕೆಗೆ ಖಂಡನೆ; ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಮನವಿ
“ಬಿಜೆಪಿಯಲ್ಲಿರುವವರ ಮೇಲೆ ಐಟಿ ದಾಳಿ ಯಾಕಿಲ್ಲ’: ನಟ ಪ್ರಕಾಶ್ ರಾಜ್