ಮಂಗಳೂರು: ಕುಖ್ಯಾತ ದ್ವಿಚಕ್ರ ವಾಹನ ಕಳ್ಳರಿಬ್ಬರ ಬಂಧನ
Team Udayavani, Dec 10, 2021, 6:22 PM IST
ಮಂಗಳೂರು: ಬರ್ಕೆ ಪೊಲೀಸ್ ಠಾಣೆಯ ಪೊಲೀಸರು ಶುಕ್ರವಾರ ಇಬ್ಬರು ಬೈಕ್ ಕಳ್ಳರನ್ನು ಎರಡು ಬೈಕ್ ಗಳ ಸಮೇತ ಬಂಧಿಸಿದ್ದಾರೆ.
ಬಂಧಿತ ಆರೋಪಿಗಳು ಬೈಕಂಪಾಡಿಯ ಮೀನಕಳಿಯದ ಸುಮಂತ್ ಬರ್ಮನ್ (19) ಮತ್ತು ಪುತ್ತೂರು ತಾಲ್ಲೂಕಿನ ಮುಕ್ರಂಪ್ಪಾಡಿಯ ತಾರಾನಾಥ ಸಾಲಿಯಾನ್ ( 26) ಎನ್ನುವವರಾಗಿದ್ದಾರೆ.
ಆರೋಪಿಗಳಿಂದ ಹಿರೋ ಹೊಂಡಾ ಮತ್ತು ಹಿರೋ ಹೊಂಡಾ ಸ್ಪ್ಲೆಂಡರ್ ಬೈಕ್ ವಿವೋ ಕಂಪೆನಿಯ 02 ಟಚ್ ಸ್ರ್ಕೀನ್ ಮೊಬೈಲ್, ಜಿಯೋ ಕಂಪೆನಿಯ ಕೀ ಪ್ಯಾಡ್ ಮೊಬೈಲ್ ವಶಪಡಿಸಿಕೊಳ್ಳಲಾಗಿದ್ದು, ಸೊತ್ತುಗಳ ಅಂದಾಜು ಮೌಲ್ಯ 75,000 ಸಾವಿರ ರೂಪಾಯಿ ಎನ್ನಲಾಗಿದೆ.
ಬಂಧಿಸಿದ ಆರೋಪಿ ಸುಮಂತ್ ಬರ್ಮನ್ ವಿರುದ್ದ ಕಾವೂರು, ಪಣಂಬೂರು, ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಹಾಗೂ ಆರೋಪಿ ತಾರಾನಾಥ ಸಾಲಿಯಾನ್ ಮೇಲೆ ಮಂಗಳೂರು ಉತ್ತರ , ಸುರತ್ಕಲ್, ಉಳ್ಳಾಲ, ಮಂ. ದಕ್ಷಿಣ, ಮಂ. ಪೂರ್ವ ಹಾಗೂ ಪುತ್ತೂರು ನಗರ ಮತ್ತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಳ್ಳತನ, ದರೋಡೆ, ಮಾದಕ ವಸ್ತು ಗಾಂಜಾ ಮಾರಾಟ ಮಾಡಿದ ಬಗ್ಗೆ ಪ್ರಕರಣಗಳು ದಾಖಲಾಗಿರುವ ಬಗ್ಗೆ ಮಾಹಿತಿ ತಿಳಿದುಬಂದಿರುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ
U. T. Khader ಮಂಗಳೂರಿನಿಂದ ಹಜ್ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ
MUST WATCH
ಹೊಸ ಸೇರ್ಪಡೆ
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?