ಮಂಗಳೂರು ವಿಮಾನ ನಿಲ್ದಾಣ; ಕಸ್ಟಮ್ಸ್ ಅಧಿಕಾರಿಗಳಿಂದ 1 ಕೆಜಿ 625 ಗ್ರಾಂ ಚಿನ್ನ ವಶ
ಗುದನಾಳದಲ್ಲಿ ಅಡಗಿಸಿಟ್ಟು ಸಾಗಾಟ ; 6 ಲಕ್ಷ ರೂ. ಮೌಲ್ಯದ ವಿದೇಶಿ ನೋಟುಗಳೂ ವಶಕ್ಕೆ
Team Udayavani, Feb 20, 2023, 2:02 PM IST
ಮಂಗಳೂರು : ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಫೆಬ್ರವರಿಯಲ್ಲಿ ಭಾರಿ ಚಿನ್ನ ಕಳ್ಳಸಾಗಣೆ ಯತ್ನವನ್ನು ವಿಫಲಗೊಳಿಸಿದ್ದು,1 ಕೆಜಿ 625 ಗ್ರಾಂ ಚಿನ್ನ ವಶಕ್ಕೆ ಪಡೆದಿದ್ದಾರೆ.
ಫೆ.01ರಿಂದ 15ರ ವರೆಗೆ ನಡೆಸಿದ ಕಾರ್ಯಾಚರಣೆಗಳಲ್ಲಿ ಅಧಿಕಾರಿಗಳು ದುಬೈ ಮತ್ತು ಬಹ್ರೇನ್ ನಿಂದ ಆಗಮಿಸಿದ ಐವರು ಪುರುಷ ಪ್ರಯಾಣಿಕರಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಈ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ.
ವಶಪಡಿಸಿಕೊಳ್ಳಲಾದ ಚಿನ್ನದ ಮಾರುಕಟ್ಟೆ ಮೌಲ್ಯ 91ಲಕ್ಷದ 35 ಸಾವಿರದ 850 ರೂ.ಆಗಿದೆ. ಚಿನ್ನ ಮಾತ್ರವಲ್ಲದೆ ಭಾರತೀಯ ರೂಪಾಯಿ 6ಲಕ್ಷದ 54 ಸಾವಿರದ 750ರೂ. ಮೌಲ್ಯದ ವಿದೇಶಿ ನೋಟುಗಳನ್ನು ಓರ್ವ ಪ್ರಯಾಣಿಕನಿಂದ ವಶಕ್ಕೆ ಪಡೆಯಲಾಗಿದೆ.
ಚಿನ್ನವನ್ನು ಪೇಸ್ಟ್ ರೂಪದಲ್ಲಿ ಘನ ಗಮ್ನೊಂದಿಗೆ ಬೆರೆಸಿ ಅಂಡಾಕಾರದ ಪ್ಯಾಕೆಟ್ಗಳಾಗಿ ಮಾಡಿ ಗುದನಾಳದಲ್ಲಿ ಮರೆಮಾಚಿ, ಟ್ರಾಲಿ ಬ್ಯಾಗ್ ನ ಹ್ಯಾಂಡಲ್ ನಲ್ಲಿ ಮರೆಮಾಚಿದ್ದು, ರಟ್ಟಿನ ಪೆಟ್ಟಿಗೆಯಲ್ಲಿ ಪೇಸ್ಟ್ ರೂಪದಲ್ಲಿ ಮರೆಮಾಚಿದ್ದು ಸೇರಿ ವಿವಿಧ ರೂಪದಲ್ಲಿ ಚಿನ್ನವನ್ನು ಕಳ್ಳ ಸಾಗಾಣಿಕೆ ಮಾಡಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಧಿಕಾರಿಗಳು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ