ಉಜಿರೆಯ ವೈದ್ಯರ ಟ್ವಿಟರ್ ಹ್ಯಾಕ್ : ಹಿಜಾಬ್ ವಿರೋಧಿ ಪೋಸ್ಟ್
Team Udayavani, Feb 17, 2022, 11:53 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ವೈದ್ಯರೊಬ್ಬರು ತಮ್ಮ ಟ್ವಿಟರ್ ಖಾತೆಯನ್ನು ದುಷ್ಕರ್ಮಿಗಳು ಹ್ಯಾಕ್ ಮಾಡಿ ಅದರಲ್ಲಿ ಹಿಜಾಬ್ ವಿರೋಧಿ ಪೋಸ್ಟ್ ಅನ್ನು ಅಪ್ಲೋಡ್ ಮಾಡಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ.
ಉಜಿರೆಯ ಮಕ್ಕಳ ತಜ್ಞ ಡಾ.ಶಾಂತನು ಆರ್ ಪ್ರಭು ಅವರು ತಮ್ಮ ಖಾತೆಯಲ್ಲಿ ಹಿಜಾಬ್ ವಿರುದ್ಧದ ಟ್ವೀಟ್ ಕಾಣಿಸಿಕೊಂಡಿದ್ದು, ಇದು ತಮ್ಮ ಇಮೇಜ್ ಹಾಳು ಮಾಡುವ ಉದ್ದೇಶದಿಂದ ಬಂದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮಹಿಳೆಯರು ಮತ್ತು ಹುಡುಗಿಯರು ಹಿಜಾಬ್ ಧರಿಸುವುದನ್ನು ಅವರು ಬಯಸುವುದಿಲ್ಲ ಎಂದು ಟ್ವೀಟ್ ನಲ್ಲಿ ಬರೆಯಲಾಗಿದೆ . “ಇದು ತಾಲಿಬಾನ್ ರಾಜ್ಯ, ಸೌದಿ ಅರೇಬಿಯಾ ಅಥವಾ ಮದ್ರಸಾ ಅಲ್ಲ ಮತ್ತು ಹಿಜಾಬ್ ಅನಗತ್ಯ. ನೀವು ಹಿಜಾಬ್ ಧರಿಸಬೇಕಾದರೆ ಮದರಸಾಕ್ಕೆ ಹೋಗಿ” ಎಂದು ಬರೆಯಲಾಗಿದೆ.
ವೈದ್ಯರು ಮಗುವನ್ನು ಕೈಯಲ್ಲಿ ಹಿಡಿದಿರುವ ಸ್ಕ್ರೀನ್ಶಾಟ್ ಅನ್ನು ಟ್ವೀಟ್ನೊಂದಿಗೆ ಅಪ್ಲೋಡ್ ಮಾಡಲಾಗಿದೆ ಎಂದು ಡಾ.ಶಾಂತನು ಆರ್ ಪ್ರಭು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. ಈ ಪೋಸ್ಟ್ ಅನ್ನು ಬಳಸಿಕೊಂಡು ಕೆಲವರು ಅವರು ಕೆಲಸ ಮಾಡುವ ಆಸ್ಪತ್ರೆಯ ವಿರುದ್ಧ ದುರುದ್ದೇಶಪೂರಿತ ಅಪಪ್ರಚಾರ ಮಾಡಲು ಪ್ರಾರಂಭಿಸಿದ್ದಾರೆ ಎಂದು ವೈದ್ಯರು ಆರೋಪಿಸಿದ್ದಾರೆ. “ಇದು ನನ್ನ ಇಮೇಜ್ ಹಾಳು ಮಾಡುವ ಪ್ರಯತ್ನ. ಅಲ್ಪಸಂಖ್ಯಾತರು ನಡೆಸುತ್ತಿರುವ ವೈದ್ಯಕೀಯ ಕಾಲೇಜಿನಲ್ಲಿ ಓದಿರುವ ನನಗೆ ಹಿಜಾಬ್ ಎಂದರೇನು ಎಂಬುದು ಗೊತ್ತಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ