ಮಂಗಳೂರು ಪೊಲೀಸ್‌ ಬೀಟ್‌ ವ್ಯವಸ್ಥೆಗೆ ಹೊಸರೂಪ


Team Udayavani, Mar 12, 2023, 3:26 PM IST

police siren

ಮಂಗಳೂರು: ಮಂಗಳೂರು ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯ ಪೊಲೀಸ್‌ ಬೀಟ್‌ ವ್ಯವಸ್ಥೆಯನ್ನು ಇನ್ನಷ್ಟು ಪರಿಣಾಮಕಾರಿಗೊಳಿಸುವ ಉದ್ದೇಶದಿಂದ ಬೀಟ್‌ ಮೀಟಿಂಗ್‌ಗೆ ಆದ್ಯತೆ ನೀಡಲಾಗುತ್ತಿದ್ದು, ಇದು ಪೊಲೀಸ್‌ ಮತ್ತು ನಾಗರಿಕರ ನಡುವಿನ ಸಂಪರ್ಕ ಬಲಪಡಿಸುವ ನಿರೀಕ್ಷೆ ಮೂಡಿಸಿದೆ. ಈಗಾಗಲೇ ಈ ಹಿಂದಿನ ಬೀಟ್‌ ಸಿಸ್ಟಂ ಪ್ರಕಾರ, ಪ್ರತಿಯೊಂದು ಪೊಲೀಸ್‌ ಠಾಣೆಯ ಒಂದೊಂದು ನಿರ್ದಿಷ್ಟ ಏರಿಯಾದ ಹೊಣೆಯನ್ನು ಒಬ್ಬೊಬ್ಬ ಸಿಬಂದಿಗೆ ವಹಿಸಿಕೊಡಲಾಗಿತ್ತು.

ಅವರು ಆ ಏರಿಯಾಕ್ಕೆ (ಬೀಟ್‌) ಸಂಬಂಧಿ ಸಿದವರ ಜತೆ ನಿರಂತರ ಸಂಪರ್ಕ ಇಟ್ಟುಕೊಳ್ಳುತ್ತಿದ್ದರು. ಅದಕ್ಕಾಗಿ ವ್ಯಾಟ್ಸ್‌ಆ್ಯಪ್‌ ಗ್ರೂಪ್‌ಗಳನ್ನು ರಚಿಸುತ್ತಿದ್ದರು. ಅಗತ್ಯ ಬಿದ್ದಾಗ ನಿರ್ದಿಷ್ಟ ಪ್ರದೇಶದಲ್ಲಿ ಸಭೆ ನಡೆಸುತ್ತಿದ್ದರು. ಇದೀಗ ಈ ರೀತಿಯ ಬೀಟ್‌ ಸಭೆಗಳನ್ನು ಕಡ್ಡಾಯವಾಗಿ ನಡೆಸಲು ಸೂಚಿಸಲಾಗಿದೆ. ನೂತನ ಪೊಲೀಸ್‌ ಆಯುಕ್ತರು ಪ್ರತಿ ಬೀಟ್‌ನಲ್ಲಿ ತಿಂಗಳಿಗೆ ಕನಿಷ್ಠ 3 ಸಭೆಗಳು ನಡೆಯಬೇಕು ಎಂದು ಆದೇಶ ನೀಡಿದ್ದು, ಅದರಂತೆ ಬೀಟ್‌ಸಭೆಗಳು ನಡೆಯುತ್ತಿವೆ.

ಶಾಲೆ, ಅಂಗನವಾಡಿ, ಮೈದಾನ ಮೊದಲಾದೆಡೆ ಸಭೆಗಳನ್ನು ನಡೆಸಲಾಗುತ್ತಿದೆ. ಜನರೊಂದಿಗೆ ಸಂವಾದ ಸಾರ್ವಜನಿಕರ ಅಹವಾಲುಗಳನ್ನು ನೇರವಾಗಿ ಆಲಿಸಿ ಅದಕ್ಕೆ ಪರಿಹಾರ ದೊರಕಿಸಲು ಇಂತಹ ಸಭೆಗಳಿಂದ ಸಾಧ್ಯವಾಗುತ್ತಿದೆ. ಅಲ್ಲದೆ ಪೊಲೀಸರಿಗೆ ಅಗತ್ಯವಿರುವ ಸಲಹೆ ಮಾಹಿತಿ ಕೂಡ ಸಭೆಯಿಂದ ಲಭ್ಯವಾಗುತ್ತಿದೆ. ಸಭೆಗೆ ಕೇವಲ ನಿಯೋಜಿತ ಸಿಬಂದಿ ಮಾತ್ರವಲ್ಲದೆ ಆಗಾಗ್ಗೆ ಪೊಲೀಸ್‌ ಅಧಿಕಾರಿಗಳು ಕೂಡ ತೆರಳಿ ಮೇಲುಸ್ತುವಾರಿ ನೋಡಿಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ. ಸಿಬಂದಿ ಕೊರತೆ ಸಾಧ್ಯತೆ ಬೀಟ್‌ ವ್ಯವಸ್ಥೆ ಕಟ್ಟುನಿಟ್ಟು ಮಾಡಿರುವುದರಿಂದ ಪೊಲೀಸರ ಮೇಲಿನ ಒತ್ತಡವೂ ಹೆಚ್ಚಾಗಿದೆ. ಕೆಲವು ಠಾಣೆಗಳಲ್ಲಿ ಸಿಬಂದಿ, ಪಿಎಸ್‌ಐಗಳ ಕೊರತೆ ಇರುವುದರಿಂದ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು ಸ್ಥಳೀಯ ಠಾಣೆಗಳಿಗೆ ಸವಾಲಾಗಲಿದೆ.

ವೈಯಕ್ತಿಕ ನಿಗಾ ಪ್ರತಿಯೊಂದು ಪೊಲೀಸ್‌ ಠಾಣೆಯ 1 ಬೀಟ್‌ನಲ್ಲಿ ತಿಂಗಳಲ್ಲಿ ಕನಿಷ್ಠ 3 ಮೀಟಿಂಗ್‌ ಮಾಡಲು ಸೂಚನೆ ನೀಡಿ ದ್ದೇನೆ. ಅದರ ಬಗ್ಗೆ ನಾನು ವೈಯಕ್ತಿಕವಾಗಿ ಫಾಲೋ ಅಪ್‌ ಮಾಡುತ್ತೇನೆ. ಠಾಣೆಯ ಹಿರಿಯ ಅಧಿಕಾರಿಗಳು ಕೂಡ ಆಗಾಗ್ಗೆ ಬೀಟ್‌ ಮೀಟಿಂಗ್‌ಗೆ ಭೇಟಿ ನೀಡಿ ಸಾರ್ವಜನಿಕರೊಂದಿಗೆ ಸಂಪರ್ಕ ಇಟ್ಟುಕೊಳ್ಳುವಂತೆ ಸೂಚನೆ ನೀಡಿದ್ದೇನೆ.
– ಕುಲದೀಪ್‌ ಕುಮಾರ್‌.ಆರ್‌. ಜೈನ್‌, ಪೊಲೀಸ್‌ ಆಯುಕ್ತರು, ಮಂಗಳೂರು

ಎಲ್ಲೆಲ್ಲಿ ಎಷ್ಟೆಷ್ಟು?

ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ 42 ಬೀಟ್‌ ಏರಿಯಾಗಳಿವೆ. ಉಳ್ಳಾಲದಲ್ಲಿ 47, ಕಂಕನಾಡಿ ನಗರದಲ್ಲಿ 64, ಪಣಂಬೂರಿನಲ್ಲಿ 41, ಕಾವೂರಿನಲ್ಲಿ 44, ಬಜಪೆಯಲ್ಲಿ 42, ಸುರತ್ಕಲ್‌ನಲ್ಲಿ 45, ಮುಲ್ಕಿಯಲ್ಲಿ 16, ಮೂಡುಬಿದಿರೆಯಲ್ಲಿ 38, ಮಂಗಳೂರು ಉತ್ತರ ಠಾಣಾ ವ್ಯಾಪ್ತಿಯಲ್ಲಿ 63, ದಕ್ಷಿಣ ಠಾಣೆಯಲ್ಲಿ 64, ಬರ್ಕೆ ಠಾಣಾ ವ್ಯಾಪ್ತಿಯಲ್ಲಿ 44 ಬೀಟ್‌ ಏರಿಯಾಗಳಿವೆ.

~ಸಂತೋಷ್‌ ಬೊಳ್ಳೆಟ್ಟು

ಟಾಪ್ ನ್ಯೂಸ್

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.