ಮಂಗಳೂರು: ಕರ್ತವ್ಯ ನಿರತ ಪೊಲೀಸರ ಮೇಲೆ ಹಲ್ಲೆ; ಇಬ್ಬರ ಬಂಧನ
Team Udayavani, Jan 21, 2022, 8:49 PM IST
ಮಂಗಳೂರು: ಕರ್ತವ್ಯ ನಿರತ ಪೊಲೀಸ್ ಪೇದೆಗಳ ಮೇಲೆ ಹಲ್ಲೆ ನಡೆಸಿದ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಇಬ್ಬರು ಪೊಲೀಸರ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣದ ತನಿಖೆ ನಡೆಸಿ ಆರೋಪಿಗಳಾದ ಡಯಾನಿ ಪಾಲ್ (39) ಮತ್ತು ಮ್ಯಾಕ್ಸಿಮ್ ಜೋಸೆಫ್ ನೊರೊನ್ಹಾ (54) ಅವರನ್ನು ಬಂಧಿಸಿದ್ದಾರೆ.
ಜನವರಿ 18 ರಂದು ರಾತ್ರಿ ಪೊಲೀಸ್ ಪೇದೆಗಳಾದ ಬೀರೇಂದ್ರ ಎಸ್ ಮೇಟಿ ಮತ್ತು ಶಿವಾನಂದ ಡಿ ಟಿ ಅವರು ಕೆಲಸ ಮುಗಿಸಿ ಬೈಕ್ನಲ್ಲಿ ಮನೆಗೆ ಮರಳುತ್ತಿದ್ದಾಗ ಈ ಘಟನೆ ನಡೆದಿದೆ. ಆರೋಪಿಗಳು ಕಾರಿನಲ್ಲಿ (ಕೆಎ18-ಎಂಜಿ-0007) ಬಂದು ಯಯ್ಯಾಡಿ ಬಳಿ ಬೈಕನ್ನು ಅಡ್ಡಗಟ್ಟಿದ್ದಾರೆ. ನಂತರ, ಪಾಲ್ ಮತ್ತು ನೊರೊನ್ಹಾ ಇಬ್ಬರು ಕಾನ್ಸ್ಟೆಬಲ್ಗಳನ್ನು ನಕಲಿ ಪೊಲೀಸರು ಎಂದು ಹೇಳಿಕೊಂಡು ದೈಹಿಕವಾಗಿ ಮತ್ತು ಮೌಖಿಕವಾಗಿ ಹಲ್ಲೆ ಮಾಡಿದ್ದಾರೆ, ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ. ಪೊಲೀಸರು ಸಮವಸ್ತ್ರದಲ್ಲಿರುವಾಗಲೇ ಇದೆಲ್ಲ ನಡೆದಿದೆ ಎಂದು ಮಂಗಳೂರು ಪೂರ್ವ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
ಗಲಾಟೆಯಲ್ಲಿ ಕಾನ್ಸ್ಟೆಬಲ್ಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ