ಕಸದ ಜೊತೆ ಇದ್ದ ಮಾಂಗಲ್ಯ ಸರವನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರ ಕಾರ್ಮಿಕರು
Team Udayavani, Feb 11, 2021, 9:40 PM IST
ವಿಜಯಪುರ : ಪೌರಕಾರ್ಮಿಕರು ಗೃಹಿಣಿಯೊಬ್ವರು ಕಸದಲ್ಲಿ ಎಸೆದಿದ್ದ ಚಿನ್ನದ ಮಾಂಗಲ್ಯ ಸರವನ್ನು ಹುಡುಕಿ, ಮರಳಿಸುವ ಮೂಲಕ ಪ್ರಾಮಾಣಿಕತೆ ಮೆರೆದ ಘಟನೆ ಜರುಗಿದೆ.
ನಗರದ 22ನೇ ವಾರ್ಡ್ ನಿವಾಸಿ ಗೃಹಿಣಿ ಶಂಕರ್ ಚವ್ಹಾಣ ಎಂಬವರ ಪತ್ನಿ ನಿರ್ಲಕ್ಷ್ಯದಿಂದ ಸುಮಾರು 1 ಲಕ್ಷ ರೂ. ಮೌಲ್ಯದ 20 ಗ್ರಾಂ ಚಿನ್ನದ ಮಾಂಗಲ್ಯವನ್ನು ಕಸದಲ್ಲಿ ಗೂಡಿಸಿ, ಡಬ್ಬಕ್ಕೆ ಹಾಕಿದ್ದರು. ಬಳಿಕ ಕಸ ಸಂಗ್ರಹಕ್ಕೆ ಮನೆಗೆ ಬಂದಿದ್ದ ಪಾಲಿಕೆಯ ಪೌರ ಕಾರ್ಮಿಕರಿಗೆ ಕಸದ ಡಬ್ಬ ನೀಡಿದ್ದರು
ಚಿನ್ನದ ಮಾಂಗಲ್ಯ ಕಳೆದುಕೊಂಡಿದ್ದು ತಡವಾಗಿ ಅರಿವಿಗೆ ಬರುತ್ತಲೇ ಶಂಕರ್ ಚವ್ಹಾಣ ಅವರು ತಮ್ಮ ಮನೆಯ ಕಸ ಸಂಗ್ರಹಿಸಿದ ಪೌರ ಕಾರ್ಮಿಕರಾದ ಗಿರೀಶ ಚಿಮ್ಮಲಗಿ ಹಾಗೂ ವಿಜಯ ಕಾಖಂಡಕಿ ಇವರಿಗೆ ವಿಷಯ ತಿಳಿಸಿದ್ದಾರೆ.
ಇದನ್ನೂ ಓದಿ:ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಲು ಆಗ್ರಹಿಸಿ ರಕ್ತದಲ್ಲಿ ಮುಖ್ಯಮಂತ್ರಿಗೆ ಪತ್ರ
ವಿಷಯ ತಿಳಿದ ಈ ಇಬ್ಬರು ಪೌರ ಕಾರ್ಮಿಕರು ತಾವು ತಂದು ಸುರಿದ ಕಸದ ರಾಶಿಯಲ್ಲಿ ಹುಡುಕಿದಾಗ ಚಿನ್ನದ ಮಾಂಗಲ್ಯ ಸರ ಸಿಕ್ಕಿದೆ.
ಕೂಡಲೇ ಲಕ್ಷಾಂತರ ರೂ. ಮೌಲ್ಯದ ಮಾಂಗಲ್ಯ ಸರವನ್ನು ಶಂಕರ ಚವ್ಹಾಣ ಅವರ ಪತ್ನಿಗೆ ಹಸ್ತಾಂತರ ಮಾಡುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ಈ ಇಬ್ಬರು ಪೌರ ಕಾರ್ಮಿಕರ ಪ್ರಾಮಾಣಿಕತೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ