ಊಹಾಪೋಹಗಳಿಗೆ ತೆರೆ : ಮತ್ತೆ ತ್ರಿಪುರಾ ಸಿಎಂ ಹುದ್ದೆಗೆ ಮಾಣಿಕ್ ಸಹಾ
Team Udayavani, Mar 6, 2023, 9:38 PM IST
ಅಗರ್ತಲಾ: ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದ ಬಿಜೆಪಿ ಸೋಮವಾರ ಮಾಣಿಕ್ ಸಹಾ ಅವರು ತ್ರಿಪುರಾದ ಮುಖ್ಯಮಂತ್ರಿಯಾಗಿ ಮರಳಲಿದ್ದಾರೆ ಎಂದು ಘೋಷಿಸಿದ್ದು, ಪಕ್ಷದ ಶಾಸಕಾಂಗ ಘಟಕ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿದೆ.
ಕಳೆದ ವರ್ಷ ಬಿಪ್ಲಬ್ ಕುಮಾರ್ ದೇಬ್ ಅವರನ್ನು ಹಠಾತ್ ಪದಚ್ಯುತಗೊಳಿಸಿದ ನಂತರ ಸಿಎಂಗೆ ಅಚ್ಚರಿಯ ಆಯ್ಕೆಯಾಗಿದ್ದ ಸಹಾ ಯಾವುದೇ ವಿರೋಧವನ್ನು ಎದುರಿಸಲಿಲ್ಲ.
ಮಾರ್ಚ್ 2 ರಂದು ಪ್ರಕಟವಾದ ಫಲಿತಾಂಶಗಳಲ್ಲಿ ಬಿಜೆಪಿಯು 60 ರಲ್ಲಿ 32 ಸ್ಥಾನಗಳನ್ನು ಗೆದ್ದು ಸರಳ ಬಹುಮತ ಪಡೆದು ಅಧಿಕಾರಕ್ಕೆ ಮರಳಿತ್ತು. ಪಕ್ಷವು ಚುನಾವಣೆ ವೇಳೆ ಮತಗಳನ್ನು ಕೇಳುವಾಗ ಸಹಾ ತನ್ನ ಮುಖ್ಯಮಂತ್ರಿ ಮುಖ ಎಂದು ಅದು ಸ್ಪಷ್ಟವಾಗಿ ಹೇಳಿರಲಿಲ್ಲ.
ಧನಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿರುವ ಕೇಂದ್ರ ಸಾಮಾಜಿಕ ಸಬಲೀಕರಣ ಮತ್ತು ನ್ಯಾಯ ಖಾತೆ ರಾಜ್ಯ ಸಚಿವೆ ಪ್ರತಿಮಾ ಭೂಮಿಕ್ ಅವರನ್ನು ಬಿಜೆಪಿಯ ಮಹಿಳಾ ಕೇಂದ್ರಿತ ಅಭಿಯಾನದ ಭಾಗವಾಗಿ ಸಂಭಾವ್ಯ ಸಿಎಂ ಎಂದು ಬಿಂಬಿಸಲಾಗಿದ್ದರೂ ಸೋಮವಾರ ಸಹಾ ಅವರ ಹೆಸರನ್ನು ಪ್ರತಿಮಾ ಅವರೇ ಪ್ರಸ್ತಾಪಿಸಿದವರು.
ಸಹಾ ರಾಜ್ಯದಲ್ಲಿ ಸರಕಾರ ರಚನೆಗೆ ಹಕ್ಕು ಮಂಡಿಸಲು ರಾಜ್ಯಪಾಲ ಸತ್ಯದೇವ್ ನಾರಾಯಣ್ ಆರ್ಯ ಅವರನ್ನು ಭೇಟಿಯಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ