ಮಣಿಪಾಲ KMC ಆಸ್ಪತ್ರೆ: ಮೊದಲ ಬಾರಿಗೆ ನವೀನ ಎಂಡೋಸ್ಕೋಪಿ ಚಿಕಿತ್ಸೆ


Team Udayavani, Jun 7, 2023, 7:58 AM IST

ENDOSCOPY

ಮಣಿಪಾಲ: ಗ್ಯಾಸ್ಟ್ರೋ ಎಂಟರಾಲಜಿ ಮತ್ತು ಹೆಪಟಾಲಜಿ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ| ಶಿರನ್‌ ಶೆಟ್ಟಿ ನೇತೃತ್ವದ ವೈದ್ಯರ ತಂಡ ಡಾ| ಗಣೇಶ್‌ ಭಟ್‌, ಡಾ| ಅತಿಶ್‌ ಶೆಟ್ಟಿ, ಡಾ| ಬಾಲಾಜಿ, ಡಾ| ಸಂದೇಶ್‌ ಶೇಟ್‌ (ಅರಿವಳಿಕೆ) ಅವರು ಎಂಡೋಅಲ್ಟ್ರಾಸೌಂಡ್‌ ಗೈಡೆಡ್‌ ಗ್ಯಾಸ್ಟ್ರೋಜೆಜುನೋಸ್ಟೋಮಿ ಎಂಬ ಸಂಕೀರ್ಣ ವಿನೂತನ ಎಂಡೋಸ್ಕೋಪಿ ಚಿಕಿತ್ಸೆ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಇತ್ತೀಚೆಗೆ ನಡೆಸಿದರು.

ಕ್ಯಾನ್ಸರ್‌ನಿಂದಾಗಿ ಗ್ಯಾಸ್ಟ್ರಿಕ್‌ ಔಟ್ಲೆಟ್‌ ಅಡಚಣೆ ಹೊಂದಿರುವ ವ್ಯಕ್ತಿಗೆ ಯಶಸ್ವಿಯಾಗಿ ಈ ಚಿಕಿತ್ಸೆ ನಡೆಸಿದರು. ಈ ವಿಧಾನವು ಶಸ್ತ್ರಚಿಕಿತ್ಸೆಗಿಂತ ಕಡಿಮೆ ಗಾಯವನ್ನುಂಟುಮಾಡುವ ಮತ್ತು ಯಾವುದೇ ಶಸ್ತ್ರಚಿಕಿತ್ಸೆ ನಡೆಸಲು ಸಾಧ್ಯವಾಗದ ರೋಗಿಗಳಿಗೆ ಇದು ಸೂಕ್ತ ವಿಧಾನವಾಗಿದೆ. ಎಂಡೋಸ್ಕೋಪಿಯ ಮರುದಿನವೇ ಆಸ್ಪತ್ರೆಯಿಂದ ಬಿಡುಗಡೆ ಮಾಡಬಹುದು ಮತ್ತು ಇದನ್ನು ಶಸ್ತ್ರಚಿಕಿತ್ಸೆಗಿಂತ ಕಡಿಮೆ ವೆಚ್ಚದಲ್ಲಿ ಮಾಡಬಹುದು.

ಪ್ಯಾಂಕ್ರಿಯಾಟಿಕ್‌ ಕ್ಯಾನ್ಸರ್‌ ಮತ್ತು ಗ್ಯಾಸ್ಟ್ರಿಕ್‌ ಔಟ್ಲೆಟ್‌ ಅಡಚಣೆಯೊಂದಿಗೆ ನಿರಂತರ ವಾಂತಿ ಮಾಡುತ್ತಿದ್ದ 55 ವರ್ಷ ವಯಸ್ಸಿನ ಪುರುಷನನ್ನು ಮತ್ತೂಂದು ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲಕ್ಕೆ ಕಳುಹಿಸಿದ್ದರು. ವೈದ್ಯರ ತಂಡ ಮತ್ತು ರೋಗಿಯ ಸಂಬಂಧಿಕರೊಂದಿಗೆ ಮಾತುಕತೆ ಮತ್ತು ಚರ್ಚೆಯ ಅನಂತರ, ಆಹಾರದ ಸುಲಭ ಮಾರ್ಗಕ್ಕಾಗಿ ಯುಎಸ್‌ -ಗ್ಯಾಸ್ಟ್ರೋಜೆಜುನೋಸ್ಟೊಮಿ (ಹೊಟ್ಟೆ ಮತ್ತು ಸಣ್ಣ ಕರುಳಿನ ನಡುವಿನ ಸಂಪರ್ಕ) ಎಂಬ ವಿಶಿಷ್ಟ ಎಂಡೋಸ್ಕೋಪಿಕ್‌ ಚಿಕಿತ್ಸೆ ನಿರ್ವಹಿಸಲು ನಿರ್ಧರಿಸಲಾಯಿತು. ಚಿಕಿತ್ಸೆಯ ಬಳಿಕ ರೋಗಿಯು ಬಾಯಿಯ ಮೂಲಕ ಆಹಾರ ತೆಗೆದುಕೊಳ್ಳಲು ಸಮರ್ಥರಾದರು.

ಹೊಸ ತಂತ್ರಜ್ಞಾನದಿಂದಾಗಿ ವಿವಿಧ ಸಂಕೀರ್ಣ ರೋಗಗಳಿಗೆ ಎಂಡೋಸ್ಕೋಪಿ ಮೂಲಕವೇ ಹೆಚ್ಚಿನ ಚಿಕಿತ್ಸೆ ನೀಡಲು ಸಾಧ್ಯವಾಗುತ್ತಿದೆ ಮತ್ತು ಇದು ರೋಗಿ ಸ್ನೇಹಿ ಹಾಗೂ ಅತ್ಯಂತ ಕಡಿಮೆ ವೆಚ್ಚದಲ್ಲಿ ನಿರ್ವಹಿಸಬಹುದಾಗಿದೆ. ಗ್ರಾಮೀಣ ಬಡ ರೋಗಿಗಳ ನಿರ್ವಹಣೆಗಾಗಿ ಇಂತಹ ಹೊಸ ಎಂಡೋಸ್ಕೋಪಿ ತಂತ್ರಜ್ಞಾನ ಬಳಸಿಕೊಳ್ಳುವ ಭಾರತದ ಮೊದಲ ವೈದ್ಯಕೀಯ ಕಾಲೇಜು, ಆಸ್ಪತ್ರೆಗಳಲ್ಲಿ ಮಣಿಪಾಲ ಒಂದಾಗಿದೆ ಎಂದು ಡಾ| ಶಿರನ್‌ ಶೆಟ್ಟಿ , ಮುಖ್ಯ ನಿರ್ವಹಣಾಧಿಕಾರಿ ಡಾ| ಆನಂದ್‌ ವೇಣುಗೋಪಾಲ್‌, ವೈದ್ಯಕೀಯ ಅಧೀಕ್ಷಕ ಡಾ| ಅವಿನಾಶ್‌ ಶೆಟ್ಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.