ಮಣಿಪುರ ಭೂಕುಸಿತ- ಸಾವಿನ ಸಂಖ್ಯೆ ಏರಿಕೆ: 18 ಯೋಧರು ಸೇರಿದಂತೆ 24 ಮಂದಿ ಸಾವು
ಟೆರಿಟೋರಿಯಲ್ ಆರ್ಮಿಯ 13 ಸಿಬ್ಬಂದಿ ಹಾಗೂ ಐವರು ನಾಗರಿಕರನ್ನು ರಕ್ಷಿಸಲಾಗಿದೆ.
Team Udayavani, Jul 2, 2022, 10:48 AM IST
ಇಂಫಾಲ್: ಮಣಿಪುರದ ನೋನೆ ಜಿಲ್ಲೆಯ ಟುಫುಲ್ ಯಾರ್ಡ್ ನ ರೈಲ್ವೆ ಕಾಮಗಾರಿ ಸ್ಥಳದಲ್ಲಿ ಸಂಭವಿಸಿದ ಭೂ ಕುಸಿತದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ ಶನಿವಾರ (ಜುಲೈ 02) 24ಕ್ಕೆ ಏರಿಕೆಯಾಗಿದ್ದು, ಇದರಲ್ಲಿ 18 ಮಂದಿ ಯೋಧರು ಸೇರಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಚಿತ್ರದುರ್ಗ: ಶಾಲಾ ವಾಹನಕ್ಕೆ ಬೈಕ್ ಢಿಕ್ಕಿಯಾಗಿ ಶಿಕ್ಷಕ ಸ್ಥಳದಲ್ಲೇ ಸಾವು
ರಕ್ಷಣಾ ಕಾರ್ಯಾಚರಣೆಯಲ್ಲಿ ಈವರೆಗೆ ಟೆರಿಟೋರಿಯಲ್ ಆರ್ಮಿಯ 13 ಸಿಬ್ಬಂದಿ ಹಾಗೂ ಐವರು ನಾಗರಿಕರನ್ನು ರಕ್ಷಿಸಲಾಗಿದೆ. ಸುಮಾರು 33 ಮಂದಿ ನಾಪತ್ತೆಯಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಭೂ ಕುಸಿತದಿಂದಾಗಿ ಅವಶೇಷಗಳಡಿ ಹಲವಾರು ಮಂದಿ ಸಿಲುಕಿದ್ದು, ಭಾರತೀಯ ಸೇನೆ, ಅಸ್ಸಾಂ ರೈಫಲ್ಸ್, ಟೆರಿಟೋರಿಯಲ್ ಆರ್ಮಿ ಮತ್ತು ಕೇಂದ್ರ, ರಾಜ್ಯ ವಿಪತ್ತು ನಿರ್ವಹಣಾ ತಂಡ ಅವಿರತವಾಗಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದೆ ಎಂದು ಅಧಿಕಾರಿಗಳು ಬಿಡುಗಡೆಗೊಳಿಸಿರುವ ಪ್ರಕಟಣೆಯಲ್ಲಿ ತಿಳಿಸಿದೆ.
ಭಾರೀ ಮಳೆ ಮತ್ತು ಇನ್ನಿತರ ಕಾರಣಗಳಿಂದ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯುಂಟಾಗಿದೆ. ಭೂಕುಸಿತದಿಂದಾಗಿ ಅವಶೇಷಗಳಡಿ ಸಿಲುಕಿರುವ ದೇಹಗಳ ಪತ್ತೆಗಾಗಿ ವಾಲ್ ರೇಡಾರ್ ಅನ್ನು ಬಳಸಲಾಗುತ್ತಿದೆ ಎಂದು ವರದಿ ವಿವರಿಸಿದೆ.
ಇದೇ ವೇಳೆ ಅಸ್ಸಾಂನಲ್ಲಿಯೂ ಪ್ರವಾಹ ಸ್ಥಿತಿ ಮುಂದುವರಿದಿದೆ. ರಾಜ್ಯದಲ್ಲಿ ಗುರುವಾರ 8 ಮಂದಿ ಸಾವನ್ನಪ್ಪಿದ್ದು, ಏಪ್ರಿಲ್ ನಿಂದ ಈವರೆಗೆ ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ 159ಕ್ಕೆ ಏರಿಕೆಯಾಗಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ