ಇಂದು “ಮನ್‌ ಕಿ ಬಾತ್‌ 100” ಸಮಾವೇಶ

ಉಪರಾಷ್ಟ್ರಪತಿ ಜಗದೀಪ್‌ ಧನ್‌ಕರ್‌ ಚಾಲನೆ

Team Udayavani, Apr 26, 2023, 7:36 AM IST

man ki bath

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ “ಮನ್‌ ಕಿ ಬಾತ್‌” ಬಾನುಲಿ ಕಾರ್ಯಕ್ರಮ 100ನೇ ಆವೃತ್ತಿಯನ್ನು ಪೂರ್ಣಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಬುಧವಾರ ಪ್ರಸಾರ ಭಾರತಿ ನವದೆಹಲಿಯಲ್ಲಿ “ಮನ್‌ ಕಿ ಬಾತ್‌ 100 ಸಮಾವೇಶ” ವನ್ನು ಆಯೋಜಿಸಿದೆ. ಉಪರಾಷ್ಟ್ರಪತಿ ಜಗದೀಪ್‌ ಧನ್‌ಕರ್‌ ಅವರು ಒಂದು ದಿನದ ಈ ಸಮಾವೇಶಕ್ಕೆ ಚಾಲನೆ ನೀಡಲಿದ್ದಾರೆ.

ಸಮಾರೋಪ ಸಮಾರಂಭದಲ್ಲಿ ಮಾತನಾಡಲಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು, ಮನ್‌ ಕಿ ಬಾತ್‌ 100ನೇ ಆವೃತ್ತಿಯ ಸ್ಮರಣಾರ್ಥ ನಾಣ್ಯ ಮತ್ತು ಅಂಚೆ ಚೀಟಿಯನ್ನು ಬಿಡುಗಡೆ ಮಾಡಲಿದ್ದಾರೆ. ಪ್ರಧಾನಿ ಮೋದಿ ಅವರು ಬಾನುಲಿ ಕಾರ್ಯಕ್ರಮದಲ್ಲಿ ಪ್ರಸ್ತಾಪಿಸಿದ ಪ್ರಮುಖ ವಿಚಾರಗಳಾದ ನಾರಿ ಶಕ್ತಿ, ವಿರಾಸತ್‌ ಕಾ ಉತ್ಥಾನ್‌(ಪರಂಪರೆಯ ಮೇಲಿನ ಹೆಮ್ಮೆ), ಜನ ಸಂವಾದದಿಂದ ಆತ್ಮನಿರ್ಭರತೆ ಮತ್ತು ಆವಾಹನೆಯಿಂದ ಆಂದೋಲನದ ಬಗ್ಗೆ ಚರ್ಚೆ, ವಿಚಾರ ಸಂಕಿರಣ ನಡೆಯಲಿದೆ.

ಯಾರೆಲ್ಲ ಭಾಗಿ?
ಬಾಲಿವುಡ್‌ ತಾರೆಯರಾದ ಆಮೀರ್‌ ಖಾನ್‌, ರವೀನಾ ಟಂಡನ್‌, ಪುದುಚೇರಿ ನಿವೃತ್ತ ಲೆ.ಗವರ್ನರ್‌ ಕಿರಣ್‌ ಬೇಡಿ, ಸಂಗೀತ ಸಂಯೋಜಕ ರಿಕಿ ಕೇಜ್‌, ಕ್ರೀಡಾಳುಗಳಾದ ನಿಖತ್‌ ಝರೀನ್‌, ದೀಪಾ ಮಲಿಕ್‌, ಉದ್ಯಮಿ ಟಿ.ವಿ.ಮೋಹನ್‌ದಾಸ್‌ ಪೈ ಸೇರಿದಂತೆ ಮನ್‌ ಕಿ ಬಾತ್‌ನ ವಿವಿಧ ಆವೃತ್ತಿಗಳಲ್ಲಿ ಪ್ರಸ್ತಾಪಿಸಲ್ಪಟ್ಟ 100ಕ್ಕೂ ಅಧಿಕ ವ್ಯಕ್ತಿಗಳು ಪಾಲ್ಗೊಳ್ಳಲಿದ್ದಾರೆ.

ಮದರಸಾ, ದರ್ಗಾಗಳಲ್ಲಿ ಪ್ರಸಾರ:
ಮುಂದಿನ ಲೋಕಸಭೆ ಚುನಾವಣೆ ವೇಳೆಗೆ ಮುಸ್ಲಿಂ ಮತದಾರರನ್ನು ಸೆಳೆಯುವ ಉದ್ದೇಶದಿಂದ ಮೋದಿಯವರ ಮನ್‌ ಕಿ ಬಾತ್‌ನ 100ನೇ ಆವೃತ್ತಿಯನ್ನು ಮುಸ್ಲಿಂ ಬಾಹುಳ್ಯದ ಪ್ರದೇಶಗಳಲ್ಲಿ ಪ್ರಸಾರ ಮಾಡಲು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಸಿದ್ಧತೆ ನಡೆಸಿದೆ. ಮದರಸಾಗಳು, ದರ್ಗಾಗಳು, ಮುಸ್ಲಿಂ ಸಾಂಸ್ಕೃತಿಕ ಕೇಂದ್ರಗಳು ಸೇರಿ ಒಟ್ಟು 2,150 ಸ್ಥಳಗಳಲ್ಲಿ ಇದನ್ನು ಪ್ರಸಾರ ಮಾಡಲಾಗುತ್ತದೆ ಎಂದು ಮೋರ್ಚಾ ಅಧ್ಯಶ್ರ ಜಮಾಲ್‌ ಸಿದ್ದಿಕಿ ತಿಳಿಸಿದ್ದಾರೆ.

ಕಾಂಗ್ರೆಸ್‌ ಲೇವಡಿ:
ಈ ನಡುವೆ, ಮಂಗಳವಾರ ಮನ್‌ ಕಿ ಬಾತ್‌ ಕುರಿತು ಲೇವಡಿ ಮಾಡಿರುವ ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್‌, “ಅದಾನಿ, ಚೀನಾ, ಸತ್ಯಪಾಲ್‌ ಮಲಿಕ್‌ ಹೇಳಿಕೆ, ಸಣ್ಣ ಉದ್ಯಮಗಳ ನಾಶ ಸೇರಿದಂತೆ ಹಲವು ಪ್ರಮುಖ ವಿಚಾರಗಳಿಗೆ ಬಂದಾಗ ಪ್ರಧಾನಿ ಮೋದಿಯವರದ್ದು “ಮೌನ್‌ ಕಿ ಬಾತ್‌” ಮಾತ್ರ. ಅವರ ಬಲುದೊಡ್ಡ ಪ್ರಚಾರ ಸಂಸ್ಥೆಗಳು ಏ.30ರಂದು ಪ್ರಸಾರವಾಗಲಿರುವ ಮನ್‌ ಕಿ ಬಾತ್‌ನ 100ನೇ ಅಧ್ಯಾಯ ಹೆಚ್ಚು ಜನಪ್ರಿಯತೆ ಪಡೆಯಲಿ ಎಂದು ಕೆಲಸ ಮಾಡುತ್ತಿವೆ” ಎಂದು ಟ್ವೀಟ್‌ ಮಾಡಿದ್ದಾರೆ.

ಟಾಪ್ ನ್ಯೂಸ್

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.