ಮರವಂತೆ : ಅಲೆಗಳ ಹೊಡೆತಕ್ಕೆ ದೋಣಿ ಪಲ್ಟಿ , ನಾಲ್ಕು ಮಂದಿ ಮೀನುಗಾರರು ಪಾರು
Team Udayavani, Aug 26, 2020, 5:23 PM IST
ಉಪ್ಪುಂದ: ಮರವಂತೆ ರಾ.ಹೆದ್ದಾರಿ 66ರ ಬಳಿಯ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ದೋಣಿಯೊಂದು ಅಲೆಗಳ ಹೊಡೆತಕ್ಕೆ ಸಿಲುಕಿ ಮಗುಚಿದ ಘಟನೆ ಬುಧುವಾರ ಮಧ್ಯಾಹ್ನ ಸಂಭವಿಸಿದೆ.
ಮಾರಸ್ವಾಮಿಯ ಗಂಗಾಧರೇಶ್ವರ ದೇವಸ್ಥಾನದ ಸಮೀಪದ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಒಂಟಿದೋಣಿ (ಡಿಂಗಿ) ಅಲೆಗಳಿಗೆ ಸಿಲುಕಿದ ಪರಿಣಾಮ ದೋಣಿಯು ಮೀನುಗಾರರ ನಿಯಂತ್ರಣ ತಪ್ಪಿದ್ದು, ದೋಣಿಯಲ್ಲಿದ್ದ ನಾಲ್ವರು ಅದೃಷ್ಟವಶಾತ್ ಜೀವಾಪಾಯದಿಂದ ಪಾರಾದರು.
ಗಂಗೊಳ್ಳಿಯ ಗುಡ್ಡೆಕೇರಿ ಶ್ರೀನಿವಾಸ ಖಾರ್ವಿ ಅವರಿಗೆ ಸೇರಿದ ಆದಿ ಆಂಜನೇಯ ಹೆಸರಿನ ಎರಡು ಎಂಜಿನ್ಗಳ ದೋಣಿಯಲ್ಲಿ ಗಂಗೊಳ್ಳಿಯ ಸುಬ್ಬ ಖಾರ್ವಿ, ಮಗ ರಾಮ ಖಾರ್ವಿ, ಶೇಷ ಖಾರ್ವಿ ಅವರ ಮಗ ಶಂಕರ ಖಾರ್ವಿ, ನಾರಾಯಣ ಖಾರ್ವಿ ಅವರ ಮಗ ಕೃಷ್ಣ ಖಾರ್ವಿ ಮತ್ತು ಕುಂದಾಪುರ ಕೋಡಿಯ ಲಕ್ಷ್ಮಣ ಖಾರ್ವಿ ಅವರ ಮಗ ಸುಭಾಸ್ ಖಾರ್ವಿ ಎಂದಿನಂತೆ ಬಲೆಬಿಟ್ಟು ಮೀನು ಹಿಡಿಯುತ್ತಿದ್ದಾಗ ಏಕಾಏಕ್ಕಿ ಭಾರೀ ಗಾತ್ರದ ಅಲೆಯೊಂದು ಬಂದು ದೋಣಿಗೆ ಅಪ್ಪಳಿಸಿತ್ತು. ಅಲೆಗಳ ರಭಸಕ್ಕೆ ದೋಣಿ ಪಲ್ಟಿ ಹೊಡೆದು ಎರಡು ಚುರಾಯಿತು. ತಕ್ಷಣ ಮೀನುಗಾರರು ಈಜಿ ಹತ್ತಿರದ ದೋಣಿಗಳನ್ನು ಆಶ್ರಯಿಸಿದರಿಂದ ದುರಂತವೊಂದು ತಪ್ಪಿದೆ.
ದೋಣಿ ಸಂಪೂರ್ಣ ಒಡೆದು ಹೋಗಿದ್ದು , 10 ಅಶ್ವಶಕ್ತಿಯ ಎರಡು ಯಮಾಹ ಔಟ್ಬೋರ್ಡ್ ಎಂಜಿನ್ ಮತ್ತು ಬಲೆ ಸಮದ್ರ ಪಾಲಾಗಿದೆ. ಒಟ್ಟು ರೂ 10 ಲಕ್ಷ ನಷ್ಟ ಆಗಿದೆ ಎಂದು ಅಂದಾಜಿಸಲಾಗಿದೆ. ದಡಕ್ಕೆ ತೇಲಿಬಂದ ದೋಣಿಯ ಅವಶೇಷವನ್ನು ಮೇಲೆತ್ತಲಾಗಿದೆ.
ಘಟನಾ ಸ್ಥಳಕ್ಕೆ ಗಂಗೊಳ್ಳಿ ಎಸ್ಐ ಭೀಮಾಶಂಕರ ಎಸ್ ಮತ್ತು ಸಿಬ್ಬಂದಿ ಬಂದು ಪರಿಶೀಲನೆ ನಡೆಸಿದ್ದಾರೆ. ಘಟನ ಸ್ಥಳಕ್ಕೆ ನೂರಾರು ಸಾರ್ವಜನಿಕರು ಜಮಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!