ಸಾಮೂಹಿಕ ಫೋನ್ ಕರೆ: ಲಕ್ಷ ಕಾರ್ಯಕರ್ತರ ಜತೆ ಹೆಚ್ ಡಿಕೆ ಮಾತುಕತೆ

ರಾಜ್ಯದಲ್ಲಿ ಇಂಥ ಪ್ರಯೋಗ ಇದೇ ಮೊದಲು

Team Udayavani, Feb 19, 2023, 3:30 PM IST

1-sadsadsad

ಬೆಂಗಳೂರು: ಜೆಡಿಎಸ್ ಸಂಘಟನೆ ಹಾಗೂ ಚುನಾವಣೆಗೆ ಭರದಿಂದ ಸಿದ್ಧತೆ ನಡೆಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ನಾಳೆ (ಫೆ.20, ಸೋಮವಾರ) ಪಕ್ಷದ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರ ಜತೆ ನೇರವಾಗಿ ಫೋನ್ ಕರೆಯಲ್ಲಿ ಮಾತನಾಡಲಿದ್ದಾರೆ.

ಸ್ವತಃ ಈ ವಿಷಯವನ್ನು ಮಾಧ್ಯಮಗಳಿಗೆ ತಿಳಿಸಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ , ನಾಳೆ ಬೆಳಗ್ಗೆ 11ರಿಂದ 12 ಗಂಟೆಗೆ ಬೆಂಗಳೂರಿನಲ್ಲಿ ಕಾರ್ಯಕರ್ತರ ಜತೆ ಕಾನ್ಫರೆನ್ಸ್ ಕಾಲ್ ಮೂಲಕ ಮಾತನಾಡುವುದಾಗಿ ಹೇಳಿದರು. ನಾನು ಮಾತನಾಡಲಿರುವ ಎಲ್ಲರೂ ಬೂತ್ ಮಟ್ಟದ ಕಾರ್ಯಕರ್ತರಾಗಿದ್ದು, ಪಂಚರತ್ನ ರಥಯಾತ್ರೆ ಕಾರಣದಿಂದ ಎಲ್ಲರನ್ನೂ ವೈಯಕ್ತಿಕವಾಗಿ ಭೇಟಿ ಮಾಡಲು ಆಗುತ್ತಿಲ್ಲ. ಹೀಗಾಗಿ ಮೊಬೈಲ್ ಮೂಲಕ ಎಲ್ಲರನ್ನೂ ಸಂಪರ್ಕಿಸುವ ಕೆಲಸ ಮಾಡುತ್ತಿದ್ದೇನೆ ಎಂದರು.

ಈಗಾಗಲೇ ಪಂಚರತ್ನ ರಥಯಾತ್ರೆ ಮೂಲಕ 67 ದಿನಗಳಲ್ಲಿ ರಾಜ್ಯದ 65 ಕ್ಷೇತ್ರಗಳನ್ನು ಕ್ರಮಿಸಿದ್ದೇನೆ. ಪ್ರತಿ ಕ್ಷೇತ್ರದಲ್ಲಿಯೂ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರನ್ನು ನೇರವಾಗಿ ಸಂಪರ್ಕ ಮಾಡಿ ಅವರ ಸಮಸ್ಯೆಗಳನ್ನು ಆಲಿಸಿದ್ದೇನೆ. ಆವರ ಸವಾಲುಗಳಿಗೆ ಪರಿಹಾರವನ್ನೂ ಸೂಚಿಸಿದ್ದೇನೆ ಎಂದರು.

ಕಾರ್ಯಕರ್ತರು ಪಕ್ಷದ ಆಸ್ತಿ. ಅವರ ಜತೆ ಸದಾ ನಿಲ್ಲುವುದು ನನ್ನ ಕರ್ತವ್ಯ. ಈ ಚುನಾವಣೆ ಬಹಳ ಮುಖ್ಯವಾಗಿದ್ದು, ರಾಜ್ಯ ರಾಜಕಾರಣಕ್ಕೆ ಮಹತ್ವದ ತಿರುವು ಕೊಡಲಿದೆ ಎನ್ನುವುದು ನನ್ನ ಖಚಿತ ಅಭಿಪ್ರಾಯ. ಈಗಾಗಲೇ ಅನೇಕ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ನಮ್ಮ ಕಾರ್ಯಕರ್ತರಿಗೆ ಅನಗತ್ಯ ಕಿರುಕುಳ ನೀಡುತ್ತಿವೆ. ಆಡಳಿತ ಪಕ್ಷ ಬಿಜೆಪಿಯಂತೂ ನಮ್ಮ ಕಾರ್ಯಕರ್ತರ ಮೇಲೆ ಸುಳ್ಳು ಕೇಸುಗಳನ್ನು ಹಾಕಿ ಬೆದರಿಕೆ ಹಾಕುವ ವ್ಯರ್ಥ ತಂತ್ರ ನಡೆಸುತ್ತಿದೆ. ಇದಕ್ಕೆಲ್ಲಾ ಚರಮಗೀತೆ ಹಾಡಬೇಕು ಹಾಗೂ ಕಾರ್ಯಕರ್ತರ ಜತೆ ಬಲವಾಗಿ ನಿಲ್ಲಬೇಕು ಎನ್ನುವುದು ನನ್ನ ಉದೇಶ. ಈ ಕಾರಣಕ್ಕಾಗಿ ಈ ಫೋನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕುಮಾರಸ್ವಾಮಿ ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಬೂತ್ ಮಟ್ಟದಲ್ಲಿ ಪಕ್ಷ ಬಲವಾಗಿದೆ. ಕಾರ್ಯಕರ್ತರು ಸಕ್ರಿಯವಾಗಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಮತ್ತಷ್ಟು ಶಕ್ತಿ ತುಂಬುವ ಹಾಗೂ ಅವರ ಆತ್ಮ ವಿಶ್ವಾಸ ಹೆಚ್ಚಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.

ಹೊಸ ಪ್ರಯೋಗ

ಏಕಕಾಲಕ್ಕೆ ಒಂದು ಲಕ್ಷ ಕಾರ್ಯಕರ್ತರ ಜತೆ ಸಂಪರ್ಕ ಸಾಧಿಸಿ ಮೊಬೈಲ್ ಮೂಲಕ ಮಾತನಾಡುವ ಈ ಪ್ರಯೋಗ ರಾಜ್ಯ ರಾಜಕಾರಣದಲ್ಲಿ ಇದೇ ಮೊದಲು ಎಂದಿರುವ ಮಾಜಿ ಮುಖ್ಯಮಂತ್ರಿಗಳು, ನಮ್ಮ ಪಕ್ಷ ಸಂಘಟನಾತ್ಮಕವಾಗಿ ಹೇಗೆ ಕೆಲಸ ಮಾಡುತ್ತಿದೆ ಎನ್ನುವುದಕ್ಕೆ ಇದು ಸಾಕ್ಷಿ ಎಂದರು.

ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ವಿಧಾನ ಪರಿಷತ್ ಸದಸ್ಯ ಶ್ರೀ ಕೆಎನ್ ತಿಪ್ಪೇಸ್ವಾಮಿ, ಇಂಚರ ನಾರಾಯಣಸ್ವಾಮಿ, ಮಾಜಿ ಸದಸ್ಯ ಚೌಡರೆಡ್ಡಿ ತೂಪಲ್ಲಿ, ಕೋಲಾರದ ಅಭ್ಯರ್ಥಿ ಸಿ.ಎಂ.ಆರ್.ಶ್ರೀನಾಥ್, ಮುಳಬಾಗಿಲು ಅಭ್ಯರ್ಥಿ ಸಮೃದ್ಧಿ ಮಂಜುನಾಥ್, ಬಂಗಾರಪೇಟೆ ಅಭ್ಯರ್ಥಿ ಮಲ್ಲೇಶ್ ಬಾಬು, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಪ್ರಕಾಶ್ ಇತರರು ಹಾಜರಿದ್ದರು.

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.