ರಾಜ್ಯ ಸಾರಿಗೆ ನೌಕರರಿಗೆ ಗರಿಷ್ಠ ವೇತನ ಪರಿಷ್ಕರಣೆ ಕೊಡುಗೆ?
Team Udayavani, Apr 5, 2021, 7:00 AM IST
ಬೆಂಗಳೂರು: ಗರಿಷ್ಠ ಪ್ರಮಾಣದ ವೇತನ ಪರಿಷ್ಕರಣೆ ಪ್ರಸ್ತಾವವನ್ನು ಮುಷ್ಕರ ನಿರತ ಸಾರಿಗೆ ನೌಕರರ ಮುಂದಿರಿಸಿ ಮನವೊಲಿಸಲು ಸರಕಾರ ಚಿಂತನೆ ನಡೆಸಿದೆ. ಶೇ. 15ರಿಂದ ಶೇ. 18ರ ವರೆಗೂ ವೇತನ ಹೆಚ್ಚಳದ ಬಗ್ಗೆ ಲೆಕ್ಕಾಚಾರ ನಡೆದಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
6ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸಿದರೆ ಆರ್ಥಿಕ ಹೊರೆ ಆಗಲಿದ್ದು, ಪರ್ಯಾಯವಾಗಿ ಈ ಕ್ರಮ ಅನುಸರಿಸುವ ಚಿಂತನೆ ಇದೆ. ಪ್ರಸ್ತುತ 4 ವರ್ಷಗಳಿಗೊಮ್ಮೆ ವೇತನ ಪರಿಷ್ಕರಣೆ ಮಾಡಲಾಗುತ್ತಿದೆ. 2020ರ ಜನವರಿಯಲ್ಲಿ ಆಗಬೇಕಿದ್ದ ವೇತನ ಪರಿಷ್ಕರಣೆ ಕೊರೊನಾ ಮತ್ತಿತರ ಕಾರಣಗಳಿಂದ ಆಗಿರಲಿಲ್ಲ. ಈಗ ಪೂರ್ವಾನ್ವಯ ಆಗುವಂತೆ ವೇತನ ಪರಿಷ್ಕರಿಸಿ, ಹಿಂಬಾಕಿಯನ್ನೂ ಪಾವತಿಸಿ ನೌಕರರ ಮನವೊಲಿಕೆ ಯತ್ನ ನಡೆಯಲಿದೆ.
6ನೇ ವೇತನ ಆಯೋಗ ಶಿಫಾರಸುಗಳ ಅನ್ವಯಕ್ಕೆ ಸಂಬಂಧಿಸಿ ಕೆಲವು ತಾಂತ್ರಿಕ ಸಮಸ್ಯೆಗಳಿವೆ. ವೇತನ ಪರಿಷ್ಕರಣೆ ಮಾಡಿದರೂ ಎಷ್ಟು ಮಾಡಬೇಕು, ಅದು ಪ್ರಸ್ತುತ ಸಂದರ್ಭದಲ್ಲಿ ಸಾಧ್ಯವೇ ಇತ್ಯಾದಿ ಹಲವು ಅಂಶಗಳನ್ನು ಗಮನದಲ್ಲಿ ಇರಿಸಿಕೊಂಡು ಸರಕಾರ ಸೂಕ್ತ ತೀರ್ಮಾನ ಕೈಗೊಳ್ಳಲಿದೆ ಎಂದು ಕೆಎಸ್ಸಾರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ