ಕಾಂಗ್ರೆಸ್ ಹೈಕಮಾಂಡ್ ಮಹತ್ವದ ಆದೇಶ: ಎಂ.ಬಿ.ಪಾಟೀಲ್ ಗೆ ಪ್ರಚಾರ ಸಾರಥ್ಯ
Team Udayavani, Jan 25, 2022, 12:50 PM IST
MB patil appointed as chairman of campaign committee, KPCC, ಕೆಪಿಸಿಸಿ, ಪ್ರಚಾರ ಸಮಿತಿ ಅಧ್ಯಕ್ಷ, ಎಂ.ಬಿ ಪಾಟೀಲ್,
ಬೆಂಗಳೂರು : ಮಾಜಿ ಸಚಿವ ಎಂ.ಬಿ.ಪಾಟೀಲ್ ಅವರನ್ನು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ಆದೇಶ ಹೊರಡಿಸಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮಂಗಳವಾರ ಈ ಮಹತ್ವದ ಆದೇಶ ಹೊರಡಿಸಿದ್ದು, ಚುನಾವಣಾ ವರ್ಷದಲ್ಲಿ ಕಾಂಗ್ರೆಸ್ ಲಿಂಗಾಯಿತ ಮತಬ್ಯಾಂಕ್ ಓಲೈಕೆಗೆ ಮುಂದಾಗಿದೆ.
ಚುನಾವಣಾ ವರ್ಷದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಮಹತ್ವದ ಸ್ಥಾನವಿದೆ. ಪ್ರಬಲ ಲಿಂಗಾಯಿತ ಸಮುದಾಯಕ್ಕೆ ಸೇರಿದ ಎಂ.ಬಿ.ಪಾಟೀಲ್ ಗೆ ಈ ಸ್ಥಾನ ನೀಡಿರುವುದರಿಂದ ಈಗ ಉತ್ತರ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ ಗೆ ಚಲನಶಕ್ತಿ ದೊರೆತಂತಾಗಿದೆ.
ಸಮನ್ವಯ :
ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತ ವಲಯದಲ್ಲಿರುವ ಎಂ.ಬಿ.ಪಾಟೀಲ್ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮೊದಲಿನಿಂದಲೂ ಎಣ್ಣೆ ಶೀಗೆಕಾಯಿ ಸಂಬಂಧ ಹೊಂದಿದ್ದಾರೆ. ಲಿಂಗಾಯಿತ ಪ್ರತ್ಯೇಕ ಧರ್ಮ ಹೋರಾಟದಲ್ಲಿ ಪಾಟೀಲ್ ಮುಂಚೂಣಿಯಲ್ಲಿದ್ದರು. ಆದರೆ ಈ ಹೋರಾಟಕ್ಕೆ ಕಾಂಗ್ರೆಸ್ ಕೈ ಹಾಕಬಾರದಿತ್ತು ಎಂದು ಶಿವಕುಮಾರ್ ರಂಬಾಪುರಿ ಶ್ರೀಗಳ ಎದುರು ಹೇಳಿ ಎಂ.ಬಿ.ಪಾಟೀಲ್ ಹಾಗೂ ಸಿದ್ದರಾಮಯ್ಯ ಕೆಂಗಣ್ಣಿಗೆ ಗುರಿಯಾಗಿದ್ದರು.
ಶಿವಕುಮಾರ್ ಅಧ್ಯಕ್ಷ ರಾದ ಬಳಿಕ ಪಕ್ಷದ ಚಟುವಟಿಕೆಗಳಿಂದ ಬಹುಪಾಲು ದೂರ ಉಳಿದಿದ್ದ ಎಂ.ಬಿ.ಪಾಟೀಲ್ ಅವರಿಗೆ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನ ನೀಡಲಾಗಿದ್ದು ಕಾಂಗ್ರೆಸ್ ಒಳ ರಾಜಕೀಯದ ಸ್ವರೂಪ ಇನ್ನಷ್ಟು ಬಿಗಡಾಯಿಸುತ್ತದೆಯೇ ? ಅಥವಾ ಎಲ್ಲರೂ ಒಟ್ಟಿಗೆ ಚುನಾವಣೆ ಎದುರಿಸುತ್ತಾರೆಯೋ ಎಂಬ ಕುತೂಹಲ ಸೃಷ್ಟಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?