ಎಂ.ಬಿ.ಪಾಟೀಲ್ ಹೇಳಿಕೆಯೇ ಮುಖ್ಯ,ನೋ ಕಾಮೆಂಟ್ಸ್ : ಸಿದ್ದರಾಮಯ್ಯ ಕಿಡಿ
ಸಿಎಂಗೇ ಫ್ರೀ ಹ್ಯಾಂಡ್ ಇಲ್ಲ. ಇನ್ನು ಅಧಿಕಾರಿಗಳಿಗೆ ಹೇಗೆ ?
Team Udayavani, May 11, 2022, 5:46 PM IST
ಮೈಸೂರು : ಸಚಿವ ಅಶ್ವತ್ಥ ನಾರಾಯಣ್ ಭೇಟಿ ವಿಚಾರಕ್ಕೆ ಸಂಬಂಧಿಸಿ ಎಂ.ಬಿ.ಪಾಟೀಲ್ ಹೇಳಿಕೆಯೇ ಮುಖ್ಯ, ಅವರೇ ಸ್ಪಷಪಡಿಸಿದ್ದಾರೆ. ಎಂ ಬಿ ಪಾಟೀಲ್ ಹೇಳಿದ ಮೇಲೆ ಈ ಬಗ್ಗೆ ನೋ ಕಾಮೆಂಟ್ಸ್. ಮತ್ತೆ ಏಕೆ ಅವರು ಈ ಬಗ್ಗೆ ಕೇಳುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಐಪಿಎಸ್ ಅಧಿಕಾರಿ ಡಾ ರವೀಂದ್ರನಾಥ್ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿ,ಇದೊಂದು ಅತ್ಯಂತ ದುರ್ಬಲ ಹಾಗೂ ಭ್ರಷ್ಟ ಸರ್ಕಾರ. ಪೊಲೀಸ್ ಅಧಿಕಾರಿಗಳಿಗೆ ಫ್ರೀ ಹ್ಯಾಂಡ್ ಇಲ್ಲ. ಸಿಎಂಗೂ ಆಡಳಿತ ನಡೆಸಲು ಮುಕ್ತ ಅವಕಾಶ ಇಲ್ಲ. ಇನ್ನು ಅಧಿಕಾರಿಗಳಿಗೆ ಫ್ರೀ ಹ್ಯಾಂಡ್ ಹೇಗೆ ಕೊಡುತ್ತಾರೆ. ನಕಲಿ ಜಾತ್ರಿ ಪತ್ರದ ಬಗ್ಗೆ ತನಿಖೆ ನಡೆಸುತ್ತಿದ್ದರು. ಇದಕ್ಕಾಗಿ ವರ್ಗಾವಣೆ ಆರೋಪ ಕೇಳಿ ಬಂದಿದೆ. ಇದು ನಿಜವಾಗಿದ್ದರೆ ಇದು ಮಹಾ ಅಪರಾಧ ಎಂದರು.
ಇದನ್ನೂ ಓದಿ : ಎಂ.ಬಿ.ಪಾಟೀಲ್ ಒಬ್ಬ ಕಟ್ಟಾ ಕಾಂಗ್ರೆಸ್ಸಿಗ : ಡಿಕೆಶಿಗೆ ರಮ್ಯಾ ತಿರುಗೇಟು!
ರಾಜಕೀಯ ಮೀಸಲಾತಿ ಇಲ್ಲದೆ ಚುನಾವಣೆಯೇ ನಡೆಸಬಾರದು.ಸರ್ಕಾರ ಬೇಜವಾಬ್ದಾರಿತನ ತೋರುತ್ತಿದೆ. ಈಗಾಗಲೇ ಈ ಬಗ್ಗೆ ಕ್ರಮವಹಿಸಬಹುದಿತ್ತು. ಬೇರೆ ರಾಜ್ಯಗಳ ತೀರ್ಪು ಬಂದಾಗಲೂ ಸರ್ಕಾರ ಏನು ಮಾಡಿಲ್ಲ. ಒಂದು ವೇಳೆ ರಾಜಕೀಯ ಮೀಸಲಾತಿ ಇಲ್ಲದೆ ಚುನಾವಣೆ ನಡೆದರೆ ಅದು ಅನ್ಯಾಯ. ಇದಕ್ಕೆ ನಮ್ಮ ವಿರೋಧ ಇದೆ ಎಂದರು.
ಪಿಎಸ್ಐ ನೇಮಕಾತಿ ಹಗರಣದಿಂದ ರಕ್ಷಣೆ ಕೋರಿ ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಅವರು ಪಕ್ಷದ ಪ್ರಬಲ ನಾಯಕ ಎಂ.ಬಿ ಪಾಟೀಲ್ ಅವರನ್ನು ಭೇಟಿ ಮಾಡಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಆರೋಪಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?