Forbes List: ನಿರ್ಮಲಾ ಸೀತಾರಾಮನ್‌ ಸೇರಿ ಭಾರತದ ನಾಲ್ವರು ಜಗತ್ತಿನ ಪ್ರಭಾವಶಾಲಿ ಮಹಿಳೆಯರು

ಜಗತ್ತಿನ ಅತ್ಯಂತ ಪ್ರಭಾವಿ ಮಹಿಳೆಯರ 2023ರ ವಾರ್ಷಿಕ ಪಟ್ಟಿ ರಿಲೀಸ್

Team Udayavani, Dec 6, 2023, 6:04 PM IST

Forbes List: ನಿರ್ಮಲಾ ಸೀತಾರಾಮನ್‌ ಸೇರಿ ಭಾರತದ ನಾಲ್ವರು ಜಗತ್ತಿನ ಪ್ರಭಾವಶಾಲಿ ಮಹಿಳೆಯರು

ನವದೆಹಲಿ: ಜಗತ್ತಿನ ಅತ್ಯಂತ ಪ್ರಭಾವಿ ಮಹಿಳೆಯರ 2023ರ ವಾರ್ಷಿಕ ಪಟ್ಟಿಯನ್ನು ಪೋರ್ಬ್ಸ್‌ ಬ್ಯುಸಿನೆಸ್‌ ಮ್ಯಾಗಜೀನ್‌ ಬಿಡುಗಡೆ ಮಾಡಿದ್ದು, ಇದರಲ್ಲಿ ಭಾರತದ ನಾಲ್ವರು ಸ್ಥಾನ ಪಡೆದುಕೊಂಡಿದ್ದಾರೆ.

ಇದನ್ನೂಓದಿ:Halim Seeds: ಪೌಷ್ಠಿಕಾಂಶದ ಶಕ್ತಿ ಕೇಂದ್ರ… ಹಲೀಮ್‌ ಬೀಜಗಳ ಪ್ರಯೋಜನವೇನು?

ಈ ನಾಲ್ವರು ಮಹಿಳೆಯರು ಭಾರತ ಮಾತ್ರವಲ್ಲದೇ, ಜಾಗತಿಕವಾಗಿಯೂ ಪ್ರಭಾವ ಶಾಲಿಯಾಗಿದ್ದಾರೆ ಎಂದು ಪೋರ್ಬ್ಸ್‌ ಬಣ್ಣಿಸಿದೆ. ಪೋರ್ಬ್ಸ್‌ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಭಾರತೀಯ ಜನತಾ ಪಕ್ಷದ ಹಿರಿಯ ನಾಯಕಿ ನಿರ್ಮಲಾ ಸೀತಾರಾಮನ್‌ 32ನೇ ಸ್ಥಾನ ಪಡೆದಿದ್ದು, ಎಚ್‌ ಸಿಎಲ್‌ ಟೆಕ್ನಾಲಜೀಸ್‌ ನ ರೋಶ್ನಿ ನಾಡಾರ್‌ ಮಲ್ಹೋತ್ರಾ 60ನೇ ಸ್ಥಾನ ಪಡೆದಿದ್ದಾರೆ.

ಇನ್ನುಳಿದಂತೆ ಸ್ಟೀಲ್‌ ಅಥಾರಿಟಿ ಆಫ್‌ ಇಂಡಿಯಾದ ಅಧ್ಯಕ್ಷೆ ಸೋಮ ಮಂಡಲ್‌ 70ನೇ Rank ಪಡೆದಿದ್ದು, ಬೆಂಗಳೂರು ಬಯೋಕಾನ್‌ ಲಿಮಿಟೆಡ್‌ ಸ್ಥಾಪಕ ಅಧ್ಯಕ್ಷೆ ಕಿರಣ್‌ ಮಜೂಂದಾರ್‌ ಶಾ 76ನೇ ಸ್ಥಾನ ಪಡೆದಿದ್ದಾರೆ.

ನಿರ್ಮಲಾ ಸೀತಾರಾಮನ್‌ (64ವರ್ಷ) ಭಾರತೀಯ ಜನತಾ ಪಕ್ಷದ ಹಿರಿಯ ನಾಯಕಿಯಾಗಿದ್ದು, 2019ರಿಂದ ಹಣಕಾಸು ಮತ್ತು ಕಾರ್ಪೋರೇಟ್‌ ವ್ಯವಹಾರಗಳ ಸಚಿವೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. 2017ರಿಂದ 2019ರವರೆಗೆ ನಿರ್ಮಲಾ ಸೀತಾರಾಮನ್‌ ರಕ್ಷಣಾ ಸಚಿವರಾಗಿದ್ದರು. ಈ ಮೂಲಕ ಇಂದಿರಾ ಗಾಂಧಿ ನಂತರ ದೇಶದ 2ನೇ ಮಹಿಳಾ ರಕ್ಷಣಾ ಸಚಿವೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. 2022ರಲ್ಲಿ ನಿರ್ಮಲಾ ಅವರು ಜಗತ್ತಿನ 36ನೇ ಪ್ರಭಾವಿಶಾಲಿ ಮಹಿಳೆಯಾಗಿದ್ದು, 2023ರಲ್ಲಿ 32ನೇ ಸ್ಥಾನ ಪಡೆದಿದ್ದಾರೆ.

ರೋಶ್ನಿ ನಾಡಾರ್‌ ಮಲ್ಹೋತ್ರಾ(42ವರ್ಷ) ಎಚ್‌ ಸಿಎಲ್‌ ಟೆಕ್ನಾಲಜೀಸ್‌ ಅಧ್ಯಕ್ಷೆಯಾಗಿರುವ ಇವರು ಭಾರತದ ಶ್ರೀಮಂತ ಉದ್ಯಮಿ ಹಾಗೂ ದಾನಿಯಾಗಿದ್ದಾರೆ. ಭಾರತದ ಐಟಿ ಕಂಪನಿಯನ್ನು ಮುನ್ನಡೆಸಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆ ಇವರದ್ದಾಗಿದೆ. ಮಲ್ಹೋತ್ರಾ 2019ರಲ್ಲಿ ಪೋರ್ಬ್ಸ್‌ ಪಟ್ಟಿಯಲ್ಲಿ 54ನೇ ಸ್ಥಾನ, 2020ರಲ್ಲಿ 55ನೇ ಸ್ಥಾನ ಹಾಗೂ 2023ರಲ್ಲಿ 60ನೇ ಸ್ಥಾನ ಪಡೆದಿದ್ದಾರೆ.

ಸೋಮ ಮಂಡಲ್‌ (60ವರ್ಷ) ಪ್ರಸ್ತುತ ಸ್ಟೀಲ್‌ ಅಥಾರಿಟಿ ಆಫ್‌ ಇಂಡಿಯಾದ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. 2021ರ ಜನವರಿಯಲ್ಲಿ ಅಧ್ಯಕ್ಷೆ ಹುದ್ದೆಗೇರುವ ಮೂಲಕ ಕಂಪನಿಯ ಇತಿಹಾಸದಲ್ಲಿ ಈ ಹುದ್ದೆ ಅಲಂಕರಿಸಿದ ಮೊದಲ ಮಹಿಳೆ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ. ಭುವನೇಶ್ವರದಲ್ಲಿ ಜನಿಸಿರುವ ಮಂಡಲ್‌, 1984ರಲ್ಲಿ ಎಲೆಕ್ಟ್ರಿಕಲ್‌ ಎಂಜಿನಿಯರಿಂಗ್‌ ಪದವಿ ಪಡೆದಿದ್ದರು. ಕೈಗಾರಿಕಾ ಕ್ಷೇತ್ರದಲ್ಲಿ 35 ವರ್ಷಕ್ಕೂ ಅಧಿಕ ಅನುಭವ ಹೊಂದಿದ್ದಾರೆ.

ಕಿರಣ್‌ ಮಜುಂದಾರ್‌ ಶಾ (70ವರ್ಷ) ಬಯೋಕಾನ್‌ ಲಿಮಿಟೆಡ್‌ ನ ಮುಖ್ಯಸ್ಥರಾಗಿದ್ದು, ಶ್ರೀಮಂತ ಉದ್ಯಮಿಗಳಲ್ಲಿ ಒಬ್ಬರಾಗಿದ್ದಾರೆ. ಇಂಡಿಯನ್‌ ಇನ್ಸ್‌ ಟಿಟ್ಯೂಟ್‌ ಆಫ್‌ ಮ್ಯಾನೇಜ್‌ ಮೆಂಟ್‌ ನ ಮಾಜಿ ಅಧ್ಯಕ್ಷರಾಗಿದ್ದಾರೆ. ವಿಜ್ಞಾನ ಮತ್ತು ರಸಾಯನ ಶಾಸ್ತ್ರಕ್ಕೆ ನೀಡಿದ ಕೊಡುಗೆಗಾಗಿ ಹಲವಾರು ಪ್ರಶಸ್ತಿಗೆ ಶಾ ಭಾಜನರಾಗಿದ್ದಾರೆ.

ಟಾಪ್ ನ್ಯೂಸ್

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

2-thirthahalli

ಪ್ರಜ್ವಲ್ ರೇವಣ್ಣ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಮಹಿಳಾ ಕಾಂಗ್ರೆಸ್ ಘಟಕ ಆಗ್ರಹ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.