ಲಾಕ್‌ಡೌನ್‌ ಬೆನ್ನಲ್ಲೇ ವಿದ್ಯುತ್‌ ದರ ಏರಿಕೆ ಶಾಕ್‌! ದರ ಹೆಚ್ಚಳಕ್ಕೆ ಮೆಸ್ಕಾಂ ಬೇಡಿಕೆ

ಯೂನಿಟ್‌ಗೆ 1.67 ರೂ. ಹೆಚ್ಚಳಕ್ಕೆ ಮೆಸ್ಕಾಂ ಬೇಡಿಕೆ

Team Udayavani, May 29, 2021, 7:27 PM IST

ಲಾಕ್‌ಡೌನ್‌ ಬೆನ್ನಲ್ಲೇ ವಿದ್ಯುತ್‌ ದರ ಏರಿಕೆ ಶಾಕ್‌!

ಮಂಗಳೂರು : ಕೊರೊನಾ ಸಂಕಷ್ಟದ ನಡುವೆಯೇ ವಿದ್ಯುತ್‌ ದರ ಏರಿಕೆಯ ಸಾಧ್ಯತೆ ನಿಚ್ಚಳವಾಗಿದೆ. ಸಾಮಾನ್ಯವಾಗಿ ಪ್ರತೀ ವರ್ಷ ಎಪ್ರಿಲ್‌ 1ರಿಂದ ಅನ್ವಯವಾಗುವಂತೆ ರಾಜ್ಯದಲ್ಲಿ ವಿದ್ಯುತ್‌ ದರ ಪರಿಷ್ಕರಣೆಯಾಗುತ್ತಿದ್ದು ಈ ಬಾರಿ ಕೊರೊನಾ, ಲಾಕ್‌ಡೌನ್‌ ಕಾರಣದಿಂದ ಪ್ರಕ್ರಿಯೆ ಅರ್ಧಕ್ಕೆ ನಿಂತಿದೆ.

ಈಗಾಗಲೇ ಎಲ್ಲ ಎಸ್ಕಾಂಗಳ ವ್ಯಾಪ್ತಿಯಲ್ಲಿ ವಿಚಾರಣೆ ಪೂರ್ಣಗೊಳಿಸಿರುವ ಕರ್ನಾಟಕ ವಿದ್ಯುತ್ಛಕ್ತಿ ಆಯೋಗ(ಕೆಇಆರ್‌ಸಿ)ವು ಲಾಕ್‌ಡೌನ್‌ ಅಂತ್ಯಗೊಂಡ ಕೂಡಲೇ ಪ್ರಸಕ್ತ ವರ್ಷದ ದರ ಪರಿಷ್ಕರಣೆಗೆ ಸರಕಾರಕ್ಕೆ ಶಿಫಾರಸು ಮಾಡುವ ಸಾಧ್ಯತೆಯಿದೆ. ಕಳೆದ ವರ್ಷವೂ ಮಾರ್ಚ್‌ನಿಂದ ಏಳು ತಿಂಗಳ ಕಾಲ ಲಾಕ್‌ಡೌನ್‌ ಜಾರಿಯಲ್ಲಿತ್ತು. ಲಾಕ್‌ಡೌನ್‌ ಮುಗಿಯುತ್ತಿದ್ದಂತೆ ಎಪ್ರಿಲ್‌ನಿಂದಲೇ ಅನ್ವಯವಾಗುವಂತೆ ಪ್ರತೀ ಯೂನಿಟ್‌ ಮೇಲೆ 40 ಪೈಸೆ ಏರಿಕೆ ಮಾಡಲಾಗಿತ್ತು.

ಪ್ರಕಟನೆಯಷ್ಟೇ ಬಾಕಿ
2021-22ನೇ ಸಾಲಿನ ದರ ಪರಿಷ್ಕರಣೆಗೆ ಸಂಬಂಧಿಸಿದಂತೆ ಮಂಗಳೂರು ವಿದ್ಯುತ್‌ ಸರಬರಾಜು ಕಂಪೆನಿ (ಮೆಸ್ಕಾಂ) ಸಹಿತ ಎಲ್ಲ ಎಸ್ಕಾಂಗಳು ಕೆಇಆರ್‌ಸಿಗೆ ಪ್ರಸ್ತಾವನೆ ಸಲ್ಲಿಸಿದ್ದು, ಎಷ್ಟು ಪ್ರಮಾಣದಲ್ಲಿ ಏರಿಕೆಗೆ ಅನುಮತಿಸಲಾಗಿದೆ ಎನ್ನುವುದರ ಪ್ರಕಟನೆಯಷ್ಟೇ ಬಾಕಿಯಿದೆ. ಸದ್ಯ ಲಾಕ್‌ಡೌನ್‌ ಜಾರಿಯಲ್ಲಿದ್ದರೂ ನಿರ್ಬಂಧಗಳು ಕಳೆದ ವರ್ಷದಷ್ಟು ಕಠಿನವಾಗಿಲ್ಲ. ಆರ್ಥಿಕ ಸಂಕಷ್ಟವನ್ನು ಮನಗಂಡು ಸರಕಾರ ಸಡಿಲಿಕೆ ಮಾಡಿದೆ. ಆದ್ದರಿಂದ ವಿದ್ಯುತ್‌ ದರ ಏರಿಕೆಯ ಪ್ರಸ್ತಾವವನ್ನು ಕೂಡ ಸರಕಾರ ದೀರ್ಘ‌ ಕಾಲ ಮುಂದೂಡುವ ಸಾಧ್ಯತೆ ಇಲ್ಲ ಎಂಬ ಅಭಿಪ್ರಾಯ ಕೇಳಿಬರುತ್ತಿವೆ. ಜನರು ದರ ಏರಿಕೆಯನ್ನು ಎದುರಿಸಲು ಸಿದ್ಧರಾಗಬೇಕಿದೆ.

ಇದನ್ನೂ ಓದಿ :ಕೇರಳದಲ್ಲಿ ಮತ್ತೆ ಹತ್ತು ದಿನಗಳ ಕಾಲ ಲಾಕ್ ಡೌನ್ ವಿಸ್ತರಣೆ, ಹೆಚ್ಚುವರಿ ನಿರ್ಬಂಧ ತೆರವು

ಮೆಸ್ಕಾಂ ವ್ಯಾಪ್ತಿಯಲ್ಲಿ ಕೆಇಆರ್‌ಸಿ ಸಾರ್ವಜನಿಕ ವಿಚಾರಣೆಯನ್ನು ಈಗಾಗಲೇ ಮುಗಿಸಿದೆ. ನಮ್ಮ ಬೇಡಿಕೆ ಮಂಡಿಸಿದ್ದೇವೆ. ದರ ಪರಿಷ್ಕರಣೆ 2021ರ ಎಪ್ರಿಲ್‌ 1ರಿಂದ ಜಾರಿಯಾಗಬೇಕಾಗಿತ್ತು. ಇದುವರೆಗೆ ಕೆಇಆರ್‌ಸಿ ಅಥವಾ ಸರಕಾರದಿಂದ ಯಾವುದೇ ಆದೇಶ ಬಂದಿಲ್ಲ.
– ಪ್ರಶಾಂತ್‌ ಕುಮಾರ್‌ ಮಿಶ್ರಾ, ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ

ಹೆಚ್ಚಲ್ಲ; ಕಡಿಮೆ ಮಾಡಿ ಎಂಬುದು ಜನಾಗ್ರಹ!
ಯೂನಿಟ್‌ ಒಂದಕ್ಕೆ 1.67 ರೂ.ನಂತೆ ಏರಿಸಬೇಕೆಂಬುದು ಕೆಇಆರ್‌ಸಿಗೆ ಮೆಸ್ಕಾಂನ ಮನವಿ. ಈ ಹಿನ್ನೆಲೆಯಲ್ಲಿ ಫೆ. 19ರಂದು ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಇಆರ್‌ಸಿ ಏರ್ಪಡಿಸಿದ್ದ ಸಾರ್ವಜನಿಕ ವಿಚಾರಣೆ ಸಭೆಯಲ್ಲಿ ಸಾರ್ವಜನಿಕ ವಲಯದಿಂದ ವಿರೋಧದ ಜತೆಗೆ “ದರ ಹೆಚ್ಚಳ ಬೇಡ; ಈಗಿರುವುದನ್ನೇ ಕಡಿಮೆ ಮಾಡಬೇಕು’ ಎಂಬ ಆಗ್ರಹ ವ್ಯಕ್ತವಾಗಿತ್ತು. ಮೆಸ್ಕಾಂನ ವಾದ ಮತ್ತು ಸಾರ್ವಜನಿಕರ ಅಹವಾಲು-ಆಕ್ಷೇಪಗಳನ್ನು ಆಲಿಸಿದ ಕೆಇಆರ್‌ಸಿ ಅಧ್ಯಕ್ಷ ಶಂಭು ದಯಾಳ್‌ ಮೀನಾ ಮುಂದಿನ ದಿನಗಳಲ್ಲಿ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದ್ದರು.

ಹೆಚ್ಚಳ ಎಷ್ಟಿರಬಹುದು?

ಇಸವಿ ಬೇಡಿಕೆ   ಜಾರಿ
2019-20  1.38 ರೂ. 25ರಿಂದ 33 ಪೈಸೆ
2020-21 62 ಪೈಸೆ 40 ಪೈಸೆ
2021-22 1.67 ರೂ. ?

 

ಟಾಪ್ ನ್ಯೂಸ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.