ವಿಧಾನ-ಕದನ 2023: ಅನುದಾನದ ವರ ಕೊಟ್ಟವರಿಗೆ ಈಗ ಮತಗಳ ವರ ಬೇಕು


Team Udayavani, Apr 1, 2023, 7:11 AM IST

vote

ಅಭಿವೃದ್ಧಿಗೆ ಅನುದಾನ ಬೇಕು. ಅಭ್ಯರ್ಥಿ ಗೆಲ್ಲುವುದಕ್ಕೆ ಮತಗಳು ಬೇಕು. ಅದಕ್ಕೇ ಹಾಲಿ ಶಾಸಕರು, ಪಕ್ಷ ಸ್ಥಳೀಯ ಸಂಸ್ಥೆಯ ಸದಸ್ಯರಿಗೆ ಗುರಿ ನಿಗದಿಪಡಿಸಿದ್ದಾರೆ.

ಉಡುಪಿ: ವಿಧಾನಸಭಾ ಚುನಾವಣೆಗೆ ಮುಹೂರ್ತ ನಿಗದಿಯಾಗಿದ್ದು, ಈವರೆಗೂ ಒಂದು ರೀತಿಯ ತಂತ್ರಗಾರಿಕೆಯಲ್ಲಿದ್ದ ರಾಜ ಕೀಯ ಪಕ್ಷಗಳು, ಈಗ ಗೆಲ್ಲಲು ವಿಭಿನ್ನ ತಂತ್ರ ರೂಪಿಸುತ್ತಿವೆ.

ವಿಪಕ್ಷದಲ್ಲೂ ಕಾರ್ಯನಿರ್ವಹಣೆಯ ತಂತ್ರ ಗಾರಿಕೆ ಕಡಿಮೆ ಇರದು. ಎಲ್ಲ ಪಕ್ಷಗಳ ಅಂತಿಮ ಅಜೆಂಡಾ ಗೆಲುವು. ಅದಕ್ಕಾಗಿ ಹತ್ತಾರು ಬಗೆಯ ಕಾರ್ಯ ಯೋಜನೆಗಳನ್ನು ಸಿದ್ಧಪಡಿಸಿಟ್ಟಿವೆ. ಸನ್ನಿವೇಶ ಹಾಗೂ ಸಂದರ್ಭಕ್ಕೆ ತಕ್ಕಂತೆ ಅದನ್ನು ಬಳಸುತ್ತಾರೆ. ಈಗ ಪಕ್ಷಗಳ ಬತ್ತಳಿಕೆಯಿಂದ ಬಳಕೆಯಾಗುತ್ತಿರುವ ಬಾಣ “ಅನುದಾನ ಕೊಟ್ಟಿದ್ದೇವೆ, ಮತಗಳನ್ನು ಕೊಡಿಸಿ” ಎಂಬುದು.

ಇಂಥದೊಂದು ಗುರಿಯನ್ನು ಪಕ್ಷಗಳುಹಾಗೂ ಹಾಲಿ ಜನಪ್ರತಿನಿಧಿಗಳು ಸ್ಥಳೀಯ ಸಂಸ್ಥೆಗಳ ಸದಸ್ಯರಿಗೆ ನಿಗದಿ ಗೊಳಿಸಿದ್ದಾರೆ. ರಾಜ್ಯ, ಕೇಂದ್ರ ಸರಕಾರದ ಯೋಜನೆಗಳ ಫ‌ಲಾನುಭವಿಗಳು ಎಲ್ಲ ಕ್ಷೇತ್ರದಲ್ಲೂ ಇದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲ ಗ್ರಾ.ಪಂ.ಗಳ ಮತಗಟ್ಟೆವಾರು ಮಾಹಿತಿಯನ್ನು ಕ್ರೋಡೀಕರಿಸಲಾಗಿದೆ. ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್‌ಗಳಿಗೂ ಇದೇ ಮಾದರಿಯನ್ನು ಅನ್ವಯಿಸಲಾಗಿದೆ.
ನೀತಿ ಸಂಹಿತೆ ಜಾರಿಗೂ ಮೊದಲೇ ಸರ ಕಾರದಿಂದ ಎಲ್ಲ ಜಿಲ್ಲೆಗಳಲ್ಲೂ ಫ‌ಲಾನುಭವಿಗಳ ಸಮಾವೇಶ ನಡೆಸಲಾಗಿದೆ.

ದ.ಕ.ದಲ್ಲಿ ನಡೆದ ಸಮಾವೇಶಕ್ಕೆ ಖುದ್ದು ಮುಖ್ಯಮಂತ್ರಿಯವರು ಆಗಮಿಸಿದ್ದರು. ಉಡುಪಿಯಲ್ಲೂ ದೊಡ್ಡ ಸಂಖ್ಯೆಯಲ್ಲೇ ಸಮಾವೇಶ ಸಂಪನ್ನಗೊಂಡಿತ್ತು. ಸಮಾವೇಶದ ಬಳಿಕ ಸರಕಾರ ಅಥವಾ ಇಲಾಖೆಯಿಂದ ಫ‌ಲಾನುಭವಿಗಳನ್ನು ನಿರ್ವಹಿಸುವುದು ಕಷ್ಟ. ನಿರಂತರ ಸಂಪರ್ಕ ಇಟ್ಟುಕೊಂಡು ಮತದಾನದ ದಿನದಂದು ತಮ್ಮ ಪಕ್ಷದ ಪರವಾಗಿ ಮತಗಳನ್ನಾಗಿಸುವ ಹೊಣೆಯನ್ನು ಸ್ಥಳೀಯ ಸಂಸ್ಥೆಗಳ ಸದಸ್ಯರಿಗೆ, ಪಕ್ಷದ ಪ್ರತಿನಿಧಿಗಳ ಹೆಗಲಿಗೆ ವಹಿಸಲಾಗಿದೆ.

ಪಕ್ಷ ಅಧಿಕಾರದಲ್ಲಿದ್ದಾಗ ಅನುದಾನ ನೀಡಿದ್ದೇವೆ, ಬಳಸಿಕೊಂಡಿದ್ದೀರಿ, ಚುನಾವಣೆ ದಿನಾಂಕ ನಿಗದಿಯಾಗಿದೆ ಮತ್ತೂಮ್ಮೆ ಪಕ್ಷವನ್ನು ಅಧಿಕಾರಕ್ಕೆ ತರಬೇಕಿದೆ. ಇದಕ್ಕಾಗಿ ಮತದಾರರನ್ನು ನಿರಂತರ ಭೇಟಿ ಮಾಡಿ, ನಾವು ಗೆದ್ದರೆ ಮಾತ್ರ ಅನುದಾನ ಪುನರ್‌ ಕೇಳಲು ಸಾಧ್ಯ. ಹೀಗಾಗಿ ಮತ ತನ್ನಿ, ಅಭ್ಯರ್ಥಿ ಗೆಲ್ಲಿಸಿ, ಪುನರ್‌ ಅನುದಾನ ಕೇಳಿ ಎಂದು ಹೇಳಲಾಗುತ್ತಿದೆ.

ಹಾಗಾಗಿ ಸ್ಥಳೀಯ ಸಂಸ್ಥೆಗಳ ಸದಸ್ಯರೂ ತಮ್ಮ ಪ್ರದೇಶದ ಮತದಾರರ ಮತಗಳನ್ನು ಪಕ್ಷದ ಅಭ್ಯರ್ಥಿಗೆ ಕೊಡಿಸಲು ಶ್ರಮಿಸಲೇಬೇಕಾದ ಅನಿವಾರ್ಯತೆ ಎದುರಾಗಿದೆ. ಅದರಲ್ಲೂ ಮುಖ್ಯವಾಗಿ ಎಲ್ಲ ಪಕ್ಷಗಳೂ ಸ್ಥಳೀಯ ಸಭೆ, ಸಮಾರಂಭಕ್ಕಿಂತ ಮನೆ ಮನೆ ಭೇಟಿಗೆ ಆದ್ಯತೆ ನೀಡಿವೆ. ಆದ ಕಾರಣ ಸ್ಥಳೀಯವಾಗಿ ಪಕ್ಷದ ಪರ ಅಲೆ ರೂಪಿಸುವ ಹೊಣೆಗಾರಿಕೆಯೂ ಸ್ಥಳೀಯ ಸದಸ್ಯರ ಮೇಲಿದೆ.

ಟಾಪ್ ನ್ಯೂಸ್

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ

WTC Final 2023: ತೆಂಡೂಲ್ಕರ್, ದ್ರಾವಿಡ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ

WTC Final 2023: ತೆಂಡೂಲ್ಕರ್, ದ್ರಾವಿಡ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ

tdy-3

VIDEO: ಅಂತರ್ಜಾತಿ ವಿವಾಹವಾದ ಸಹೋದರಿಯನ್ನು ಗಂಡನ ಮನೆಯಿಂದ ಬಲವಂತವಾಗಿ ಎಳೆದೊಯ್ದ ಸಹೋದರರು

Gujarat: ಕ್ರಿಕೆಟ್‌ ಬಾಲ್‌ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

Gujarat: ಕ್ರಿಕೆಟ್‌ ಬಾಲ್‌ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

2-saidapura

Saidapur: ನಿಂತಿದ್ದ ಲಾರಿಗೆ ಕ್ರೂಷರ್ ಢಿಕ್ಕಿ; ಐದು ಮಂದಿ ಸ್ಥಳದಲ್ಲೇ ಮೃತ್ಯು

Indore: ಚಾಕ್ಲೇಟ್‌,ಆಟಿಕೆ ಕೇಳಿದ್ದಕ್ಕೆ 8 ವರ್ಷದ ಮಗಳನ್ನು ಭೀಕರವಾಗಿ ಹತ್ಯೆಗೈದ ಪಾಪಿ ತಂದೆ

Indore: ಚಾಕ್ಲೇಟ್‌,ಆಟಿಕೆ ಕೇಳಿದ್ದಕ್ಕೆ 8 ವರ್ಷದ ಮಗಳನ್ನು ಭೀಕರವಾಗಿ ಹತ್ಯೆಗೈದ ಪಾಪಿ ತಂದೆ

Institution Ranking: ಬೆಂಗಳೂರಿನ ಐಐಎಸ್‌ಸಿ ದ್ವಿತೀಯ

Institution Ranking: ಬೆಂಗಳೂರಿನ ಐಐಎಸ್‌ಸಿ ದ್ವಿತೀಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಹೊಸ ಸೇರ್ಪಡೆ

Balasore Train Tragedy ಸಂತ್ರಸ್ತರಿಗೆ ರಿಲಯನ್ಸ್ ಫೌಂಡೇಷನ್ ಹತ್ತು ಅಂಶಗಳ ನೆರವು

Balasore Train Tragedy ಸಂತ್ರಸ್ತರಿಗೆ ರಿಲಯನ್ಸ್ ಫೌಂಡೇಷನ್ ಹತ್ತು ಅಂಶಗಳ ನೆರವು

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ

WTC Final 2023: ತೆಂಡೂಲ್ಕರ್, ದ್ರಾವಿಡ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ

WTC Final 2023: ತೆಂಡೂಲ್ಕರ್, ದ್ರಾವಿಡ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ

tdy-3

VIDEO: ಅಂತರ್ಜಾತಿ ವಿವಾಹವಾದ ಸಹೋದರಿಯನ್ನು ಗಂಡನ ಮನೆಯಿಂದ ಬಲವಂತವಾಗಿ ಎಳೆದೊಯ್ದ ಸಹೋದರರು

Gujarat: ಕ್ರಿಕೆಟ್‌ ಬಾಲ್‌ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

Gujarat: ಕ್ರಿಕೆಟ್‌ ಬಾಲ್‌ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ