ವಿಧಾನ ಕದನ 2023: ಸಿದ್ದು , ಡಿಕೆಶಿ ಪಕ್ಷ ಕಟ್ಟುವವರಲ್ಲ ,ಸಿಎಂ ಹುದ್ದೆಗೆ ಬಡಿದಾಡುವವರು!

ಈಶ್ವರಪ್ಪ ಕಿಡಿನುಡಿ

Team Udayavani, Mar 15, 2023, 7:07 AM IST

eeshwarappa

ಮಣಿಪಾಲ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯಮಂತ್ರಿ ಗಾದಿಗಾಗಿ ಒಳಗೊಳಗೆ ಬಡಿದಾಡಿಕೊಳ್ಳುತ್ತಿದ್ದಾರೆ. ಅವರಿಬ್ಬರೂ ಸಿಎಂ ಸ್ಥಾನ ನೀಡುವುದಿಲ್ಲ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಹೇಳಿದಾಕ್ಷಣ ಪಕ್ಷ ಬಿಟ್ಟು ಓಡಿ ಹೋಗಲಿದ್ದಾರೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್‌. ಈಶ್ವರಪ್ಪ ವಾಗ್ಧಾಳಿ ನಡೆಸಿದರು.

ಕರ್ನಾಟಕದಲ್ಲಿ ರಾಜಕೀಯ ಪಕ್ಷವೊಂದು ಬದುಕಿದ್ದರೆ ಅದು ಬಿಜೆಪಿ ಮಾತ್ರ. ಕಾಂಗ್ರೆಸ್‌ನಲ್ಲಿ ಡಿ.ಕೆ. ಶಿವಕುಮಾರ್‌, ಸಿದ್ದರಾಮಯ್ಯ ಕುರ್ಚಿಗಾಗಿ ಹೊಡೆದಾಡಿಕೊಳ್ಳುವ ಸ್ಥಿತಿಯಲ್ಲಿದ್ದಾರೆ. ಮುಖ್ಯಮಂತ್ರಿ ಸ್ಥಾನದ ಪೈಪೋಟಿ ಬಿಟ್ಟು ಪಕ್ಷ ಸಂಘಟನೆ ಮಾಡಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಅವರಿಬ್ಬರಿಗೂ ಹೇಳಿದಾಕ್ಷಣವೇ ಪಾರ್ಟಿ ಬಿಟ್ಟು ಓಡುತ್ತಿರುತ್ತಾರೆ. ಯಾವ ಪಕ್ಷಕ್ಕೆ ಹೋಗುತ್ತಾರೆ ಎಂದು ಹೇಳಲು ಸಾಧ್ಯವಿಲ್ಲ. ಅಂತಹ ಪರಿಸ್ಥಿತಿಯಲ್ಲಿದ್ದಾರೆ ಎಂದು ಮಣಿಪಾಲದಲ್ಲಿ ಮಂಗಳವಾರ “ಉದಯವಾಣಿ”ಯೊಂದಿಗೆ ನಡೆಸಿದ ಚಿಟ್‌ಚಾಟ್‌ನಲ್ಲಿ ಈಶ್ವರಪ್ಪ ಹೇಳಿದರು.

ಬಿಜೆಪಿ ಬೂತ್‌ ಮಟ್ಟದಿಂದ ಪೇಜ್‌ ಪ್ರಮುಖರ ತನಕ ಪಕ್ಷ ಸಂಘಟನೆ ಮಾಡುತ್ತಿದೆ. ಕಾರ್ಯಕರ್ತರ ಶ್ರಮ, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವ, ಅಭಿವೃದ್ಧಿ ಕಾರ್ಯಗಳು, ಭಾರತೀಯ ಸಂಸ್ಕೃತಿ, ದೇಶ ರಕ್ಷಣೆಗೆ ಆದ್ಯತೆ ನೀಡುತ್ತಿದ್ದೇವೆ. ಬಿಜೆಪಿಯ ಮೇಲೆ ಜನರಿಗೆ ವಿಶ್ವಾಸವಿದೆ. ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದ್ದೇವೆ ಎಂದರು.

ನೇರ ನುಡಿ ವಿವಾದವೇ?
ಇದ್ದ ವಿಚಾರವನ್ನು ಅಥವಾ ಜನ ಸಾಮಾನ್ಯರು ಏನು ಮಾತನಾಡಿಕೊಳ್ಳುತ್ತಿದ್ದಾರೋ ಅದನ್ನು ನೇರವಾಗಿ ಹೇಳುತ್ತೇನೆ. ನೇರ ನುಡಿಯೇ ವಿವಾದವಾಗಿ ಕಾಣುತ್ತದೆ. ಅದಕ್ಕೆ ಏನೂ ಮಾಡಲು ಸಾಧ್ಯವಿಲ್ಲ. ನಂಬಿದ ಸಿದ್ಧಾಂತವನ್ನು ಬಿಟ್ಟು ಬದುಕುವ, ಮಾತನಾಡುವ ಪ್ರಶ್ನೆಯೇ ಇಲ್ಲ. ಚುನಾವಣೆಗಾಗಿ ರಾಜಕಾರಣ ಮಾಡುತ್ತಿಲ್ಲ. ಸಮಾಜವನ್ನು ಜಾಗೃತಗೊಳಿಸಿ ರಾಷ್ಟ್ರನಿಷ್ಠೆ ತರಲು ರಾಜಕಾರಣ ಮಾಡುತ್ತಿದ್ದೇವೆ. ನಾನು ಮುಸ್ಲಿಂ ವಿರೋಧಿಯಲ್ಲ. ನನ್ನ ಹೇಳಿಕೆಯನ್ನು ರಾಷ್ಟ್ರವಾದಿ ಮುಸ್ಲಿಮರು ಒಪ್ಪುತ್ತಾರೆ. ಪಿಎಫ್ಐ, ಎಸ್‌ಡಿಪಿಐ ಅನುಯಾಯಿಗಳು ಈಶ್ವರಪ್ಪ ಅವರು ಮುಸ್ಲಿಂ ವಿರೋಧಿ ಎಂದು ಬಿಂಬಿಸುತ್ತಿದ್ದಾರೆ. ನನಗೆ ಅದರಿಂದ ಯಾವ ಭಯವೂ ಇಲ್ಲ ಎಂದರು.

ಟಿಕೆಟ್‌ಗಾಗಿ ಗೂಟ ಹೊಡೆದು ಕೂತಿಲ್ಲ. ಪಕ್ಷ ಟಿಕೆಟ್‌ ಕೊಟ್ಟರೆ ಸ್ಪರ್ಧೆ ಮಾಡುವೆ, ಇಲ್ಲವಾದರೆ ಇಲ್ಲ. ಸಚಿವ ಸ್ಥಾನಕ್ಕಾಗಿಯೂ ಸರಕಾರ ಅಥವಾ ಪಕ್ಷಕ್ಕೆ ಕಿರಿಕಿರಿ ಮಾಡಿಲ್ಲ; ಮಾಡುವುದೂ ಇಲ್ಲ ಎಂದು ಹೇಳಿದರು.

ಟಾಪ್ ನ್ಯೂಸ್

Building ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಜಿಲ್ಲಾ ಬಂದ್‌

Building ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಜಿಲ್ಲಾ ಬಂದ್‌

Cauvery water dispute ತಟ್ಟದ ಬಂದ್‌ ಬಿಸಿ; ಜೀವನ, ವಾಹನ ಸಂಚಾರ ಯಥಾಸ್ಥಿತಿ

Cauvery water dispute ತಟ್ಟದ ಬಂದ್‌ ಬಿಸಿ; ಜೀವನ, ವಾಹನ ಸಂಚಾರ ಯಥಾಸ್ಥಿತಿ

Dakshina Kannada ಬಿರುಸಿನ ಮಳೆ; ಮೀನುಗಾರರಿಗೆ ಮುನ್ನೆಚ್ಚರಿಕೆ

Dakshina Kannada ಬಿರುಸಿನ ಮಳೆ; ಮೀನುಗಾರರಿಗೆ ಮುನ್ನೆಚ್ಚರಿಕೆ

Malpe ಭಾರೀ ಗಾಳಿ: ದಡದತ್ತ ಧಾವಿಸಿದ ಬೋಟ್‌ಗಳು

Malpe ಭಾರೀ ಗಾಳಿ: ದಡದತ್ತ ಧಾವಿಸಿದ ಬೋಟ್‌ಗಳು

Ullal: ಕಡಲ್ಕೊರೆ‌ತ; ಅಪಾಯದಲ್ಲಿ ಮನೆಗಳು

Ullal: ಕಡಲ್ಕೊರೆ‌ತ; ಅಪಾಯದಲ್ಲಿ ಮನೆಗಳು

Udupi ಮಹಿಳಾ ದೌರ್ಜನ್ಯಕ್ಕೆ ಕಡಿವಾಣ: ಡಿಸಿ ಸೂಚನೆ

Udupi ಮಹಿಳಾ ದೌರ್ಜನ್ಯಕ್ಕೆ ಕಡಿವಾಣ: ಡಿಸಿ ಸೂಚನೆ

TrainMangaluru-Mumbai;ವಂದೇ ಭಾರತ್‌ ರೈಲು: ಶಾಸಕ ಸುನಿಲ್‌ರಿಂದ ಕೇಂದ್ರ ರೈಲ್ವೇ ಸಚಿವರಿಗೆ ಪತ್ರ

Mangaluru-Mumbai;ವಂದೇ ಭಾರತ್‌ ರೈಲು: ಶಾಸಕ ಸುನಿಲ್‌ರಿಂದ ಕೇಂದ್ರ ರೈಲ್ವೇ ಸಚಿವರಿಗೆ ಪತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

ಹೊಸ ಸೇರ್ಪಡೆ

Building ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಜಿಲ್ಲಾ ಬಂದ್‌

Building ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಜಿಲ್ಲಾ ಬಂದ್‌

Cauvery water dispute ತಟ್ಟದ ಬಂದ್‌ ಬಿಸಿ; ಜೀವನ, ವಾಹನ ಸಂಚಾರ ಯಥಾಸ್ಥಿತಿ

Cauvery water dispute ತಟ್ಟದ ಬಂದ್‌ ಬಿಸಿ; ಜೀವನ, ವಾಹನ ಸಂಚಾರ ಯಥಾಸ್ಥಿತಿ

rbi

RD ಬಡ್ಡಿ ದರ ಶೇ. 6.7ಕ್ಕೆ ಏರಿಕೆ

SIDDU IMP

Karnataka: ಏಳನೇ ವೇತನ ಆಯೋಗದ ಅಧ್ಯಕ್ಷ , ಸದಸ್ಯರ ಜತೆ ಸಿಎಂ ಸಭೆ

Dakshina Kannada ಬಿರುಸಿನ ಮಳೆ; ಮೀನುಗಾರರಿಗೆ ಮುನ್ನೆಚ್ಚರಿಕೆ

Dakshina Kannada ಬಿರುಸಿನ ಮಳೆ; ಮೀನುಗಾರರಿಗೆ ಮುನ್ನೆಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.