ಕೇರಳ: ಪಾಲಕ್ಕಾಡ್ ಕ್ಷೇತ್ರದಲ್ಲಿ ಮೆಟ್ರೋ ಮ್ಯಾನ್, BJP ಅಭ್ಯರ್ಥಿ ಇ.ಶ್ರೀಧರನ್ ಗೆ ಮುನ್ನಡೆ
ಇ.ಶ್ರೀಧರನ್ ಅವರು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡು, ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸಿದ್ದರು.
Team Udayavani, May 2, 2021, 2:03 PM IST
ತಿರುವನಂತಪುರಂ:ಕೇರಳ ವಿಧಾನಸಭಾ ಚುನಾವಣೆಯ ಮತಎಣಿಕೆ ಬಿರುಸಿನಿಂದ ಮುಂದುವರಿದಿದ್ದು, ಆಡಳಿತಾರೂಢ ಎಲ್ ಡಿಎಫ್ ಮೈತ್ರಿಕೂಟ 90 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಏತನ್ಮಧ್ಯೆ ಭಾರತೀಯ ಜನತಾ ಪಕ್ಷದಿಂದ ಸ್ಪರ್ಧಿಸಿದ್ದ ಮೆಟ್ರೋ ಮ್ಯಾನ್ ಇ.ಶ್ರೀಧರನ್ ಕೇರಳದ ಪಾಲಕ್ಕಾಡ್ ವಿಧಾನಸಭಾ ಕ್ಷೇತ್ರದಲ್ಲಿ ಏಳು ಸಾವಿರ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.
ಇದನ್ನೂ ಓದಿ:ಆಕ್ಸಿಜನ್ ಖರೀದಿಗಾಗಿ ತನ್ನ ನೆಚ್ಚಿನ ಬೈಕ್ ಸೇಲಿಗಿಟ್ಟ ಫಿದಾ ನಟ
ಪಾಲಕ್ಕಾಡ್ ಕ್ಷೇತ್ರದ ಹಾಲಿ ಕಾಂಗ್ರೆಸ್ ಶಾಸಕ ಶಫಿ ಪರಂಬಿಲ್ ಅವರ ವಿರುದ್ಧ ಬಿಜೆಪಿ ಇ.ಶ್ರೀಧರನ್ ಅವರನ್ನು ಕಣಕ್ಕಿಳಿಸಿತ್ತು. ಸಿಪಿಐ(ಎಂ)ನಿಂದ ಸಿಪಿ ಪ್ರಮೋದ್ ಪ್ರತಿಸ್ಪರ್ಧಿಯಾಗಿದ್ದಾರೆ. ದೇಶದಲ್ಲಿನ ಮೆಟ್ರೋ ಯೋಜನೆಯ ರೂವಾರಿಯಾಗಿದ್ದ ಇ.ಶ್ರೀಧರನ್ ಅವರು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡು, ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸಿದ್ದರು.
ಬಿಜೆಪಿಯ ಮುಖ್ಯಮಂತ್ರಿಯ ಅಭ್ಯರ್ಥಿ ಹೆಸರನ್ನು ಘೋಷಿಸದೇ ಇ.ಶ್ರೀಧರನ್ ಅವರನ್ನು ಚುನಾವಣಾ ಅಖಾಡಕ್ಕಿಳಿಸುವ ಮೂಲಕ ಹೆಚ್ಚಿನ ಲಾಭವಾಗಬಹುದು ಎಂದು ಬಿಜೆಪಿ ಲೆಕ್ಕಾಚಾರ ಹಾಕಿತ್ತು. ಬಿಜೆಪಿ ಪಕ್ಷ ತನ್ನನ್ನು ಮುಖ್ಯಮಂತ್ರಿ ಎಂದು ಘೋಷಿಸಿದರೂ ಆ ಸ್ಥಾನ ಸ್ವೀಕರಿಸುವುದಾಗಿ ಇ.ಶ್ರೀಧರನ್ ಈ ಮೊದಲು ತಿಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ
Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು