ಪ್ರತಿಸ್ಪರ್ಧಿಗಳ ಮೇಲೆ ಕಣ್ಣು; ಸಿಬಿಐ ವಿಚಾರಣೆಗೆ ಕೇಂದ್ರ ಅನುಮತಿ: ಸಿಸೋಡಿಯಾ ಕಿಡಿ
Team Udayavani, Feb 22, 2023, 2:23 PM IST
ನವದೆಹಲಿ: ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ವಿರುದ್ಧ ಪ್ರತಿಸ್ಪರ್ಧಿ ಪಕ್ಷಗಳ ಮೇಲೆ ಕಣ್ಣಿಟ್ಟಿರುವ ಆರೋಪದ ಮೇಲೆ ತನಿಖೆ ನಡೆಸಲು ಸಿಬಿಐಗೆ ಕೇಂದ್ರವು ಅನುಮತಿ ನೀಡಿದೆ.
ಈಗಾಗಲೇ ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಸಿಬಿಐ ತನಿಖೆಯನ್ನು ಎದುರಿಸುತ್ತಿರುವ ಸಿಸೋಡಿಯಾ, ಇತ್ತೀಚಿನ ಬೆಳವಣಿಗೆಗೆ ಕಟುವಾಗಿ ತಿರುಗೇಟು ನೀಡಿದ್ದು, ಪ್ರತಿಸ್ಪರ್ಧಿಗಳ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸುವುದು ದುರ್ಬಲ ಮತ್ತು ಹೇಡಿ ವ್ಯಕ್ತಿಗಳ ಸಂಕೇತವಾಗಿದೆ ಎಂದು ಹೇಳಿದ್ದಾರೆ. ಆಮ್ ಆದ್ಮಿ ಪಕ್ಷ ಬೆಳೆದಂತೆ ಇಂತಹ ಇನ್ನಷ್ಟು ಪ್ರಕರಣಗಳು ದಾಖಲಾಗಲಿವೆ ಎಂದಿದ್ದಾರೆ.
ಮದ್ಯ ನೀತಿ ಪ್ರಕರಣದಲ್ಲಿ ಸಿಬಿಐ ಕಳೆದ ಭಾನುವಾರ ಸಿಸೋಡಿಯಾರನ್ನು ವಿಚಾರಣೆಗೆ ಕರೆದಿತ್ತು, ಆದರೆ ಅವರು ಹೆಚ್ಚಿನ ಸಮಯ ಕೇಳಿದ್ದರು, ಅವರು ಹಣಕಾಸು ಖಾತೆಯನ್ನು ಹೊಂದಿದ್ದು ಬಜೆಟ್ ಸಿದ್ಧಪಡಿಸುತ್ತಿದ್ದೇನೆ ಎಂದು ಹೇಳಿದ್ದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿ, , ಸಿಬಿಐ ತನ್ನನ್ನು ಬಂಧಿಸುತ್ತದೆ ಮತ್ತು ಬಜೆಟ್ ಸಿದ್ಧತೆಗಳನ್ನು ಹಳಿತಪ್ಪಿಸುತ್ತದೆ ಎಂಬ ಭಯವಿದೆ ಎಂದಿದ್ದರು.
ಇತ್ತೀಚಿನ ಪ್ರಕರಣದಲ್ಲಿ, ದೆಹಲಿ ಸರಕಾರದ ವಿಜಿಲೆನ್ಸ್ ವಿಭಾಗದ ಮುಖ್ಯಸ್ಥರಾಗಿರುವ ಸಿಸೋಡಿಯಾ ವಿರುದ್ಧ ಎಫ್ಐಆರ್ ದಾಖಲಿಸಲು ಸಿಬಿಐ ಅನುಮತಿ ಕೋರಿತ್ತು. ವಿಜಿಲೆನ್ಸ್ ಇಲಾಖೆಯ ಅಡಿಯಲ್ಲಿ 2015 ರಲ್ಲಿ ಎಎಪಿ ಸರ್ಕಾರವು ಸ್ಥಾಪಿಸಿದ ಪ್ರತಿಕ್ರಿಯೆ ಘಟಕವನ್ನು ಸಚಿವಾಲಯಗಳು, ವಿರೋಧ ಪಕ್ಷಗಳು, ಘಟಕಗಳು ಮತ್ತು ವ್ಯಕ್ತಿಗಳ ಮೇಲೆ ಕಣ್ಣಿಡಲು ಬಳಸಲಾಗಿದೆ ಎಂದು ಆರೋಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ