MI V/s CSK: ಜೈ ಹೇಳಲು ಕಾದಿವೆ ಮುಂಬೈ-ಚೆನ್ನೈ


Team Udayavani, May 6, 2023, 7:56 AM IST

MI CSK

ಚೆನ್ನೈ: ಐಪಿಎಲ್‌ನ ಅತ್ಯಂತ ಯಶಸ್ವಿ ತಂಡಗಳಾದ ಮುಂಬೈ ಇಂಡಿಯನ್ಸ್‌ ಮತ್ತು ಚೆನ್ನೈ ಸೂಪರ್‌ ಕಿಂಗ್ಸ್‌ ಶನಿವಾರ ಮತ್ತೂಮ್ಮೆ ಅದೃಷ್ಟ ಪರೀಕ್ಷೆಗೆ ಇಳಿಯಲಿವೆ. “ವಾಂಖೇಡೆ’ಯಲ್ಲಿ ಆಡಿ ಮುಂಬೈಯನ್ನು 7 ವಿಕೆಟ್‌ಗಳಿಂದ ಮಣಿಸಿ ಬಂದ ಚೆನ್ನೈ ತವರಲ್ಲೂ ಮೇಲುಗೈ ಸಾಧಿಸೀತೇ ಅಥವಾ ರೋಹಿತ್‌ ಪಡೆ ಸೇಡು ತೀರಿಸಿಕೊಂಡೀತೇ ಎಂಬ ಕುತೂಹಲ ಕ್ರಿಕೆಟ್‌ ಅಭಿಮಾನಿಗಳದ್ದು.

ಇದು 4 ವರ್ಷಗಳ ಬಳಿಕ ಇತ್ತಂಡ ಗಳ ನಡುವೆ ಚೆನ್ನೈಯಲ್ಲಿ ನಡೆಯುವ ಮುಖಾಮುಖೀ. ಚೆನ್ನೈಯಲ್ಲಿ ನಡೆದ 2019ರ ಎರಡೂ ಮೇಲಾಟದಲ್ಲಿ ಮುಂಬೈ ಜಯ ಸಾಧಿಸಿತ್ತು. ಹೀಗಾಗಿ ಚೆನ್ನೈ ಅಭಿಮಾನಿಗಳಿಗೆ ಧೋನಿ ಪಡೆ ಗೆಲುವನ್ನು ಕಾಣುವ ಕಾತರ ಸಹಜ.

ಆದರೀಗ ಧೋನಿ ಪಡೆಯ ನಸೀಬು ಅಷ್ಟೇನೂ ಚೆನ್ನಾಗಿಲ್ಲ. ಕಳೆದ 3 ಪಂದ್ಯಗಳಲ್ಲಿ ಗಳಿಸಲು ಸಾಧ್ಯವಾದದ್ದು ಒಂದು ಅಂಕ ಮಾತ್ರ. ಶನಿವಾರದ ಲಕ್ನೋ ಎದುರಿನ ಪಂದ್ಯವನ್ನು ಮಳೆ ನುಂಗಿತ್ತು. ಎ. 30ರ ಪಂಜಾಬ್‌ ಕಿಂಗ್ಸ್‌ ಎದುರಿನ ಪಂದ್ಯವನ್ನು ಕೊನೆಯ ಎಸೆತದಲ್ಲಿ ಕಳೆದುಕೊಂಡಿತ್ತು. ಇದಕ್ಕೂ ಮೊದಲು ರಾಜಸ್ಥಾನ್‌ ರಾಯಲ್ಸ್‌ಗೆ
32 ರನ್ನುಗಳಿಂದ ಶರಣಾಗಿತ್ತು.ಒಟ್ಟಾರೆ ಧೋನಿ ಪಡೆಗೆ ತುರ್ತಾಗಿ ಗೆಲುವೊಂದರ ಅಗತ್ಯವಿದೆ.

ವಾಂಖೇಡೆ ಮೇಲಾಟದಲ್ಲಿ ಮುಂಬೈ 8 ವಿಕೆಟಿಗೆ ಕೇವಲ 157 ರನ್‌ ಗಳಿಸಿತ್ತು. ಚೆನ್ನೈ 18.1 ಓವರ್‌ಗಳಲ್ಲಿ 3 ವಿಕೆಟಿಗೆ 159 ರನ್‌ ಬಾರಿಸಿ ಗೆದ್ದು ಬಂದಿತ್ತು. ಮುಂಬಯಿಯವರೇ ಆದ ಅಜಿಂಕ್ಯ ರಹಾನೆ ಸಿಡಿದು ನಿಂತು 27 ಎಸೆತಗಳಿಂದ 61 ರನ್‌ ಬಾರಿಸಿ (7 ಬೌಂಡರಿ, 3 ಸಿಕ್ಸರ್‌) ರೋಹಿತ್‌ ಪಡೆಗೆ ನೀರು ಕುಡಿಸಿದ್ದನ್ನು ಮರೆಯುವಂತಿಲ್ಲ.

ಚೆನ್ನೈ ಓಪನರ್ ಅಮೋಘ ಫಾರ್ಮ್ ನಲ್ಲಿದ್ದಾರೆ. ಡೇವನ್‌ ಕಾನ್ವೇ ಸತತ ಅರ್ಧ ಶತಕ ಬಾರಿಸುತ್ತ ಈಗಾಗಲೇ 414 ರನ್‌ ರಾಶಿ ಹಾಕಿದ್ದಾರೆ. ರುತುರಾಜ್‌ ಗಾಯಕ್ವಾಡ್‌ 354 ರನ್‌ ಗಳಿಸಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಅಜಿಂಕ್ಯ ರಹಾನೆ, ಶಿವಂ ದುಬೆ ಅವರನ್ನು ನಂಬಿಕೊಳ್ಳಬಹುದು. ಆದರೆ ಅಂಬಾಟಿ ರಾಯುಡು, ಮೊಯಿನ್‌ ಅಲಿ ಪ್ರಯತ್ನ ಸಾಲದು. ಜಡೇಜ-ಧೋನಿ ಜೋಡಿಯಿಂದಲೂ ಹೆಚ್ಚೇ ನಿರೀಕ್ಷಿಸಲಾಗಿದೆ.
ಬೌಲಿಂಗ್‌ ವಿಭಾಗದಲ್ಲಿ ತುಷಾರ್‌ ದೇಶಪಾಂಡೆ (17 ವಿಕೆಟ್‌), ಲಂಕೆಯ ಜೋಡಿಯಾದ ಮಹೀಶ ತೀಕ್ಷಣ, ಮತೀಶ ಪತಿರಣ ಎದುರಾಳಿ ಪಾಲಿಗೆ ಕಗ್ಗಂಟಾಗುತ್ತಿದ್ದಾರೆ.

ಚೇತರಿಸಿದೆ ಮುಂಬೈ
ಮುಂಬೈ ಆರಂಭಿಕ ಆಘಾತದಿಂದ ಹಂತ ಹಂತವಾಗಿ ಚೇತರಿಸಿಕೊಂಡು 9 ಪಂದ್ಯಗಳಲ್ಲಿ ಐದನ್ನು ಗೆದ್ದಿದೆ. ಕೊನೆಯ ಪಂದ್ಯದಲ್ಲಿ ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ 4 ವಿಕೆಟಿಗೆ 214 ರನ್‌ ಬಾರಿಸಿ ಜಯಭೇರಿ ಮೊಳಗಿಸಿದ್ದರಿಂದ ಮುಂಬೈ ಆತ್ಮವಿಶ್ವಾಸ ಬಹಳಷ್ಟು ಎತ್ತರ ತಲುಪಿದೆ. ನಾಯಕ ರೋಹಿತ್‌ ಶರ್ಮ ಹೊರತುಪಡಿಸಿ ಉಳಿದವರೆಲ್ಲ ಚೆನ್ನಾಗಿಯೇ ಬ್ಯಾಟ್‌ ಬೀಸುತ್ತಿದ್ದಾರೆ. ಇಶಾನ್‌ ಕಿಶನ್‌, ಕ್ಯಾಮರಾನ್‌ ಗ್ರೀನ್‌, ಸೂರ್ಯಕುಮಾರ್‌ ಯಾದವ್‌, ತಿಲಕ್‌ ವರ್ಮ, ಟಿಮ್‌ ಡೇವಿಡ್‌ ಸೇರಿಕೊಂಡು ರಾಜಸ್ಥಾನ್‌ ದಾಳಿಯನ್ನು ಪುಡಿಗಟ್ಟಿದ್ದರು.

ಟಾಪ್ ನ್ಯೂಸ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.