ವಲಸಿಗರ ಬದುಕಿಗೆ ಭದ್ರತೆ :”ಗ್ರಾಮ ವಾಪಸಿ’ಯಾದ ಕುಟುಂಬಗಳ ಸಮೀಕ್ಷೆ


Team Udayavani, Dec 28, 2020, 7:10 AM IST

ವಲಸಿಗರ ಬದುಕಿಗೆ ಭದ್ರತೆ :”ಗ್ರಾಮ ವಾಪಸಿ’ಯಾದ ಕುಟುಂಬಗಳ ಸಮೀಕ್ಷೆ

ಬೆಂಗಳೂರು: ಕೊರೊನಾ ಕಾರಣ ನಗರ ತೊರೆದು “ನಮ್ಮ ಹಳ್ಳಿಯೇ ನಮಗೆ ಲೇಸು’ ಎಂದುಕೊಂಡು ಗ್ರಾಮಗಳಿಗೆ ಮರಳಿದವರ ಬದುಕಿಗೆ ಭದ್ರತೆ ಕಲ್ಪಿಸಲು ಸರಕಾರ ಮುಂದಾಗಿದ್ದು, ವಲಸಿಗ ಕುಟುಂಬಗಳ ಸಮೀಕ್ಷೆ ನಡೆಸಲು ತೀರ್ಮಾನಿಸಿದೆ.
ಗ್ರಾಮಗಳಿಗೆ ಮರಳಿದ ಕುಟುಂಬಗಳು ಮತ್ತವರ ಮಕ್ಕಳ ಆರೋಗ್ಯ, ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಪರಿಸ್ಥಿತಿ ಬಗ್ಗೆ ಮಾಹಿತಿ ಸಂಗ್ರಹಿಸಿ, ಅವರ ಆರೋಗ್ಯ, ಜೀವನೋಪಾಯ ಮತ್ತು ಸಾಮಾಜಿಕ ಭದ್ರತೆಗೆ ಯೋಜನೆ ರೂಪಿಸುವುದು ಇದರ ಮುಖ್ಯ ಉದ್ದೇಶ.

ಜೀವನೋಪಾಯಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗಿದ್ದವರು ಕೊರೊನಾ ಲಾಕ್‌ಡೌನ್‌ ಹೇರಿದ ಪರಿಣಾಮ 2020ರ ಎಪ್ರಿಲ್‌ನಿಂದ ಹಳ್ಳಿಗಳಿಗೆ ಮರು ವಲಸೆ ಆರಂಭಿಸಿದ್ದರು. ಈ ರೀತಿ “ಗ್ರಾಮ ವಾಪಸಿ’ ಆದವರ ಮಾಹಿತಿಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂ. ರಾಜ್‌ ಇಲಾಖೆ ಕಲೆ ಹಾಕಲು ಆರಂಭಿಸಿದೆ. ಪ್ರತೀ ಗ್ರಾ.ಪಂ. ವ್ಯಾಪ್ತಿಯಲ್ಲಿ ಪಂಚತಂತ್ರ ತಂತ್ರಾಂಶದ ಮೂಲಕ ಸಂಗ್ರಹಿಸಿದ ಅಂಕಿಅಂಶಗಳ ಪ್ರಕಾರ 3.84ರಿಂದ 4 ಲಕ್ಷ ಜನರು ಮರಳಿ ಬಂದಿ ದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ.

ಆ್ಯಪ್‌ ಸಮೀಕ್ಷೆ ಹೇಗೆ?
ಸಮೀಕ್ಷೆಗೆ ಕರ್ನಾಟಕ ವಲಸಿಗರ ಟ್ರ್ಯಾಕಿಂಗ್‌ ಮತ್ತು ಸಾಮಾಜಿಕ ಭದ್ರತೆ ಫ್ರೆಮ್‌ವರ್ಕ್‌ (ಕೆಎಂಟಿಎಸ್‌ಪಿಎಫ್) ಎಂಬ ಆ್ಯಪ್‌ ಅನ್ನು ಸಿದ್ಧಪಡಿಸಲಾಗಿದೆ. ಮರುವಲಸಿಗರ ಸಾಮಾನ್ಯ ಮಾಹಿತಿಗಳ ಜತೆಗೆ ಜತೆಗೆ ಇವರು ವಲಸೆ ಹೋದ ಸ್ಥಳದಲ್ಲಿ ಯಾವ ಕೆಲಸ ಮಾಡುತ್ತಿದ್ದರು, ಆದಾಯ ಎಷ್ಟಿತ್ತು, ಜೀವನಮಟ್ಟ ಹೇಗಿತ್ತು ಎಂಬ ಮಾಹಿತಿ ಪಡೆಯಲಾಗುತ್ತದೆ. ಈಗಿನ ಸ್ಥಿತಿಗತಿ, ಆರೋಗ್ಯ, ಕೌಶಲ ಮತ್ತು ಅವರ ನಿರೀಕ್ಷೆಗಳು, 18 ವರ್ಷ ಪೂರ್ಣಗೊಳ್ಳದ ಮಕ್ಕಳ ಶಿಕ್ಷಣದ ಬಗ್ಗೆ ಮಾಹಿತಿ ಸಂಗ್ರಹಿಸಲು ಸುಲಭವಾದ ಪ್ರಶ್ನೆಗಳನ್ನು ಸಿದ್ಧಪಡಿಸಲಾಗಿದೆ. ಸಮೀಕ್ಷೆಗೆ ಗ್ರಾ.ಪಂ. ಸಿಬಂದಿಯನ್ನು ನಿಯೋಜಿಸಲಾಗಿದೆ.

ಸಮೀಕ್ಷೆಯ ಉದ್ದೇಶ
– ಮರಳಿ ಬಂದ ಕುಟುಂಬಗಳ ಅಗತ್ಯಗಳನ್ನು ಗುರುತಿಸುವುದು.
– ಇಲಾಖೆಗಳು, ಸರಕಾರದ ಯೋಜನೆಗಳ ಮೂಲಕ ಅವುಗಳ ಈಡೇರಿಕೆಗೆ ಕ್ರಮ.
– ಸೌಲಭ್ಯ ವಂಚಿತರ ಮಾಹಿತಿ ದಾಖಲಿಸಿ, ತ್ವರಿತವಾಗಿ ಸೌಲಭ್ಯ ಒದಗಿಸುವ ವ್ಯವಸ್ಥೆ ರೂಪಿಸುವುದು.
– ಇದಕ್ಕಾಗಿ ಕೂಡಲೇ ಲಭ್ಯವಾಗುವಂತೆ (ಪುಶ್‌ ನೋಟಿಫಿಕೇಶನ್‌) ತಾಂತ್ರಿಕ ವ್ಯವಸ್ಥೆ ಅಳವಡಿಕೆ.
– ಶೈಕ್ಷಣಿಕ ಮಟ್ಟ, ತಾಂತ್ರಿಕ ಕೌಶಲ, ವೈಯಕ್ತಿಕ ಸಾಮರ್ಥ್ಯ, ಕೆಲಸದ ಅನುಭವ ಮತ್ತು ನಿರೀಕ್ಷಿಸುವ ಕೌಶಲ ತರಬೇತಿಗಳ ಮಾಹಿತಿ ಕ್ರೋಡೀಕರಣ.
– ಕಾರ್ಯಕ್ರಮ, ಯೋಜನೆಗಳು ಮತ್ತು ಸರಕಾರಿ ಮತ್ತು ಸರಕಾರೇತರ ಸಂಸ್ಥೆಗಳ ಸಂಪನ್ಮೂಲಗಳ ಸಮನ್ವಯಕ್ಕಾಗಿ ಕ್ರಿಯಾ ಯೋಜನೆ.
– ನರೇಗಾ, ಜಲ ಜೀವನ್‌ ಮಿಷನ್‌, ಪ್ರಧಾನಮಂತ್ರಿ ಗ್ರಾಮ ಸಡಕ್‌ ಯೋಜನೆ, ಸ್ವತ್ಛ ಭಾರತ್‌ ಮಿಷನ್‌ ಮತ್ತಿತರ ಅಭಿವೃದ್ಧಿ ಯೋಜನೆಗಳ ಮಾಹಿತಿ ಒದಗಣೆ; ಶಿಕ್ಷಣ, ಸಂವಹನ ಮುಂತಾದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ವ್ಯವಸ್ಥೆ ರೂಪಿಸುವುದು.

ಕೊರೊನಾ ಹಿನ್ನೆಲೆಯಲ್ಲಿ ಹಳ್ಳಿಗಳಿಗೆ ಮರಳಿದ ಕುಟುಂಬಗಳ ಆರೋಗ್ಯ, ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿಗಳನ್ನು ತಿಳಿದುಕೊಂಡು ಅವರಿಗೆ ಆರೋಗ್ಯ, ಜೀವನೋ ಪಾಯ ಮತ್ತು ಆರ್ಥಿಕ ಭದ್ರತೆ ಕಲ್ಪಿಸಲು ಕ್ರಿಯಾ ಯೋಜನೆ ಗಳನ್ನು ರೂಪಿಸಲು ಸಮೀಕ್ಷೆ ಕೈಗೊಳ್ಳಲಾಗುತ್ತಿದೆ.
– ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌, ಪಂ. ರಾಜ್‌ ಆಯುಕ್ತಾಲಯದ ಆಯುಕ್ತರು

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.