ಅಡಕೆ ಬೆಳೆ ಹೇಳಿಕೆ ವಿವಾದ: ಸ್ಪಷ್ಟನೆ ನೀಡಿದ ಸಚಿವ ಆರಗ ಜ್ಞಾನೇಂದ್ರ


Team Udayavani, Dec 31, 2022, 12:45 PM IST

araga-jnanendra

ಬೆಂಗಳೂರು: ಸಾಂಪ್ರದಾಯಿಕ ಪ್ರದೇಶದಲ್ಲಿ ಬೆಳೆಯುತ್ತಿರುವ ಅಡಕೆ ರೈತರ ಹಿತ ರಕ್ಷಣೆ ಬಗ್ಗೆ ಸದನದಲ್ಲಿ ಮಾತನಾಡಿದ್ದನ್ನು ತಿರುಚಿ ನನ್ನ ವಿರುದ್ಧ ಅಪಪ್ರಚಾರ ನಡೆಸಲಾಗುತ್ತಿದೆ. ಇದನ್ನು ಖಂಡಿಸುತ್ತೇನೆ. ನನ್ನ ವಿರುದ್ಧ ಆರೋಪ ಮಾಡಲು, ಬೇರೆ ಏನೂ ಇಲ್ಲದ ರಾಜಕೀಯ ವಿರೋಧಿಗಳು ಮಲೆನಾಡು ಹಾಗೂ ಕರಾವಳಿ ಪ್ರದೇಶದ ಅಡಕೆ ಬೆಳೆಗಾರರ ಪರವಾಗಿ ಮಾತನಾಡಿದ್ದನ್ನು ಟೀಕೆ ಮಾಡಿದ್ದಾರೆ. ಸದನದಲ್ಲಿ ನಾನು ಮಾತನಾಡಿದ ಒಟ್ಟು ಭಾಷಣದ ಅರ್ಥವನ್ನು ಗ್ರಹಿಸದೆ ನನ್ನ ಹೇಳಿಕೆಯನ್ನೇ ತಪ್ಪಾಗಿ ಬಿಂಬಿಸಿ ಅಪಪ್ರಚಾರ ಹಾಗೂ ಸುಳ್ಳನ್ನು ಬಿತ್ತುವ ಹತಾಶ ಪ್ರಯತ್ನ ಮಾಡುತ್ತಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದ್ದಾರೆ.

ಅಡಕೆ ಬೆಳೆಗಾರರ ಭವಿಷ್ಯವನ್ನೇ ಹೊಸಕಿ ಹಾಕುವ ಪ್ರಯತ್ನದಲ್ಲಿ ಇವರು ಸುಪ್ರೀಂ ಕೋರ್ಟ್ ನಲ್ಲಿ ಅಡಕೆ ಕ್ಯಾನ್ಸರ್ ಕಾರಕ ಎಂದು ಅಫಿಡವಿಟ್       ಸಲ್ಲಿಸಿದ್ದನ್ನು ಯಾರೂ ಮರೆತಿಲ್ಲ. ಇದನ್ನು ವಿರೋಧಿಸಿ ಅಡಕೆ ಕ್ಯಾನ್ಸರ್ ಕಾರಕ ಅಲ್ಲ, ಅದೊಂದು ಆರೋಗ್ಯವರ್ಧಕ ಎಂದು ಯಶಸ್ವಿಯಾಗಿ ವಾದ ಮಂಡಿಸಿ, ರೈತರ ಮೇಲಿದ್ದ ತೂಗು ಕತ್ತಿಯನ್ನು ನಿವಾರಣಾ ಮಾಡುವಲ್ಲಿ ವಿಶೇಷ ಪ್ರಯತ್ನ ಮಾಡಿದ್ದನ್ನು, ಇಲ್ಲಿ ಸ್ಮರಿಸ ಬಯಸುತ್ತೇನೆ.

ಸಾಂಪ್ರದಾಯಿಕ ವಾಗಿ ಅಡಕೆ ಬೆಳೆಯುತ್ತಿರುವ ಪ್ರದೇಶದಲ್ಲಿ ಮಾತ್ರ, ಬಂದಿರುವ, ಹಾಗೂ ರೈತರಿಗೆ ಮಾರಕ ವಾಗಿರುವ, ಎಲೆ ಚುಕ್ಕೆ ರೋಗ ನಿಯಂತ್ರಣಕ್ಕೆ ಔಷಧ ಸಿಂಪರಣೆಗೆ ಸರಕಾರದಿಂದ ಅನುದಾನ ಬಿಡುಗಡೆ ಗೊಳಿಸಿದ್ದೇನೆ. ಎಲೆ ಚುಕ್ಕೆ ರೋಗಕ್ಕೆ ಕಾರಣವಾದ ಅಂಶಗಳ ಮೇಲೆ ಸಂಶೋಧನೆ ನಡೆಸಲು ಕೇಂದ್ರ ಸರಕಾರದ ಮೇಲೆ ಒತ್ತಡ ತಂದ ಪರಿಣಾಮವಾಗಿ ಕೇಂದ್ರ ಸಂಶೋಧಕರ ಹಾಗೂ ವಿಜ್ಞಾನಿಗಳ ತಂಡ ಬಂದಿದೆ ಎಂದಿದ್ದಾರೆ.

ಇದನ್ನೂ ಓದಿ:ಅಪಘಾತದ ವೇಳೆ ಪಂತ್ ಗೆ ಸಹಾಯ ಮಾಡಿದವರಿಗೆ ಸರ್ಕಾರದಿಂದ ಗೌರವ

ಮಾರುಕಟ್ಟೆಯಲ್ಲಿ ಅಡಕೆ ಬೆಳೆ ಧಾರಣೆಗೆ ಸ್ತಿರತೆ ಒದಗಿಸಲು ಅನುಕೂಲವಾಗುವಂತೆ, ಕೇಂದ್ರ ಸರಕಾರದ ಮೇಲೆ ಒತ್ತಡ ತಂದ ಪರಿಣಾಮವಾಗಿ ಅಡಕೆ ಬೆಳೆಯ ಕನಿಷ್ಠ ಉತ್ಪಾದನಾ ವೆಚ್ಚದರ ಹೆಚ್ಚಳಕ್ಕೆ ಸರಕಾರ ಒಪ್ಪಿಕೊಂಡಿದೆ. ಇಷ್ಟರಲ್ಲಿಯೇ ಈ ಸಂಬಂಧ ಆದೇಶ ಹೊರ ಬರಲಿದೆ.  ಅಡಕೆ ಬೆಳೆಗಾರರ ಹಿತ ಕಾಪಾಡಲು, ಕಟಿಬದ್ದ ವಾಗಿರುವ ನನ್ನ ಮೇಲೆ ಗೂಬೆ ಕೂರಿಸುವ ವ್ಯರ್ಥ ಪ್ರಯತ್ನ ನಡೆಸುತ್ತಿದ್ದಾರೆ.

ಒಂದು ಕಾಲದಲ್ಲಿ, ಅಡಕೆ ಧಾರಣೆ ಕ್ವಿಂಟಾಲ್ ಗೆ ಎಂಬತ್ತು ಸಾವಿರ ರೂಪಾಯಿವರೆಗೂ ಹೋಗಿತ್ತು, ಅದರ ಪರಿಣಾಮವಾಗಿ ಅಡಕೆ ಬೆಳೆ ಅಸಂಪ್ರದಾಯಿಕ ಪ್ರದೇಶಗಳಲ್ಲಿಯೂ, ವ್ಯಾಪಕವಾಗಿ ವಿಸ್ತಾರ ಗೊಂಡ ಪರಿಣಾಮ, ನಂತರದ ದಿನಗಳಲ್ಲಿ 25 ರಿಂದ 30 ಸಾವಿರಕ್ಕೂ ಬಂದಿದ್ದನ್ನು ಮರೆಯಬಾರದು. ಈ ಕಾರಣದಿಂದಲೇ ಮಲೆನಾಡು ಹಾಗೂ ಕರಾವಳಿ ಪ್ರದೇಶಗಳನ್ನು ಬಿಟ್ಟು, ಬೇರೆ ಪ್ರದೇಶದಲ್ಲಿ ಅಡಕೆ ಬೆಳೆಗೆ  ಹೆಚ್ಚಿನ ಪ್ರೋತ್ಸಾಹ ಕೊಡಬಾರದು ಎಂದು ಅಭಿಪ್ರಾಯ ಪಟ್ಟಿದ್ದೇನೆ ಎಂದು ಆರಗ ಜ್ಞಾನೇಂದ್ರ  ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.