ಸರ್ಕಾರಿ ವೈದ್ಯರ ಪ್ರತಿಭಟನೆ ಕೈ ಬಿಡಲು ಸಚಿವ ಬಿ ಶ್ರೀರಾಮುಲು ಮನವಿ
Team Udayavani, Sep 15, 2020, 1:16 PM IST
ಬೆಂಗಳೂರು: ಕೋವಿಡ್-19 ಸಮಯಲ್ಲಿ ಎಲ್ಲಾ ವೈದ್ಯರು ಉತ್ತಮವಾಗಿ ಕೆಲಸ ಮಾಡಿದ್ದಾರೆ. ಈ ಸಮಯದಲ್ಲಿ ಮುಷ್ಕರಕ್ಕೆ ಹೋದರೆ ಜನರಿಗೆ ಸಮಸ್ಯೆ ಆಗುತ್ತದೆ. ವೈದ್ಯರ ಸಂಘದ ಅಧ್ಯಕ್ಷರ ಜೊತೆ ಮಾತಾಡಿದ್ದೇನೆ. ವೈದ್ಯರು ಮುಷ್ಕರ ಕೈ ಬಿಡಬೇಕು ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದರು.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಂಬಳ ಜಾಸ್ತಿ ಮಾಡಬೇಕು ಎನ್ನುವುದು ವೈದ್ಯರ ಪ್ರಮುಖ ಬೇಡಿಕೆಯಾಗಿದೆ. ಈಗಾಗಲೇ ಈ ವಿಚಾರವನ್ನು ಸಿಎಂ ಯಡಿಯೂರಪ್ಪನವರ ಗಮನಕ್ಕೆ ತಂದಿದ್ದೇವೆ. ಇಂದು ಮಧ್ಯಾಹ್ನ 3 ಗಂಟೆಗೆ ಸಂಘದ ಪ್ರಮುಖರ ಜೊತೆ ಸಭೆ ಮಾಡುತ್ತೇವೆ. ವೈದ್ಯರ ಎಲ್ಲಾ ಬೇಡಿಕೆ ಸರ್ಕಾರ ಈಡೇರಿಸುತ್ತದೆ ಎಂದರು.
ಇದನ್ನೂ ಓದಿ: ಸೆ. 17ರಿಂದ ಸಿಎಂ ಯಡಿಯೂರಪ್ಪ ದಿಲ್ಲಿ ಪ್ರವಾಸ, ಗರಿಗೆದರಿದ ರಾಜಕೀಯ ಚಟುವಟಿಕೆಗಳು
ಸಂಬಳ ಹೆಚ್ಚಳ ಮಾಡುವ ವಿಚಾರ ಇಂದು ಸಂಘದವರ ಜೊತೆ ಸಭೆ ಮಾಡಿ ಸಿಎಂ ಜೊತೆ ಚರ್ಚಿಸಿ ಅಂತಿಮ ನಿರ್ಧಾರ ಮಾಡುತ್ತೇವೆ. ಯಾವುದೇ ಕಾರಣಕ್ಕೂ ವೈದ್ಯರು ಮುಷ್ಕರ ಮಾಡಬಾರದು ಎಂದು ವೈದ್ಯರಿಗೆ ಸಚಿವ ಶ್ರೀರಾಮುಲು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK