Orissa ರೈಲು ದುರಂತ: ಮತ್ತೂಂದು ತಂಡ ತಾಯ್ನಾಡಿಗೆ

ರಾಜ್ಯದ ಸಂತ್ರಸ್ತರ ನೆರವಿಗೆ ತೆರಳಿದ್ದ ಸಚಿವ ಲಾಡ್‌ ತಂಡ

Team Udayavani, Jun 5, 2023, 7:47 AM IST

train tragedy

ಬೆಂಗಳೂರು: ರೈಲ್ವೆ ದುರಂತದಲ್ಲಿ ರಾಜ್ಯದ ಸಂತ್ರಸ್ತರ ನೆರವಿಗೆ ಧಾವಿಸಿದ್ದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ನೇತೃತ್ವದ ತಂಡ ರವಿವಾರ ಕೆಲವು ಕನ್ನಡಿಗರನ್ನು ಗುರು ಸುರಕ್ಷಿತವಾಗಿ ತಾಯ್ನಾಡಿಗೆ ಕಳುಹಿಸಿದೆ.

ಇಡೀ ದಿನ ಸಚಿವರ ತಂಡ ರಕ್ಷಣ ಕಾರ್ಯದಲ್ಲಿ ಸಕ್ರಿಯವಾಗಿತ್ತು. ಒಡಿಶಾ ಸರಕಾರದ ಅಧಿಕಾರಿಗಳು, ರೈಲ್ವೆ ಸಚಿವರೊಂದಿಗೆ ಸರಣಿ ಸಭೆಗಳನ್ನು ನಡೆಸಿ, ಮೃತಪಟ್ಟವರು ಅಥವಾ ಗಾಯಾಳುಗಳಲ್ಲಿ ಕನ್ನಡಿಗರಿದ್ದರೆ, ಅಂತಹವರ ಬಗ್ಗೆ ತಮಗೆ ಮಾಹಿತಿ ಒದಗಿಸುವಂತೆ ಮನವಿ ಮಾಡಿತು.ಈ ಮಧ್ಯೆ ಒಡಿಶಾದ ಪುರಿಯಲ್ಲಿ ನಡೆಯುತ್ತಿದ್ದ “ಜಾನಪದ ಮೇಳ- 2023″ರಲ್ಲಿ ಭಾಗವಹಿಸಲು 17 ಜನ ಕಲಾವಿದರು ತೆರಳಿದ್ದರು. ರೈಲ್ವೆ ದುರಂತದ ಹಿನ್ನೆಲೆಯಲ್ಲಿ ಅವರಿಗೆ ರೈಲು ಮತ್ತು ಬಸ್‌ ಸಿಗದೆ ಅತಂತ್ರರಾಗಿದ್ದರು. ಅವರನ್ನು ಭೇಟಿಮಾಡಿದ ಸಚಿವ ಸಂತೋಷ್‌ ಲಾಡ್‌, ಮೂರು ವಿಮಾನಗಳಲ್ಲಿ ಬೆಂಗಳೂರಿಗೆ ಸುರಕ್ಷಿತವಾಗಿ ಕರೆತರಲು ವ್ಯವಸ್ಥೆ ಮಾಡಿದ್ದಾರೆ.

ಸಂಜೆ 17 ಜನರ ತಂಡವು ಇಂಡಿಗೊ, ಏರ್‌ ಏಷ್ಯಾ ನಾಗರಿಕ ವಿಮಾನಗಳಲ್ಲಿ ಪ್ರತ್ಯೇಕವಾಗಿ ಒಡಿಶಾದಿಂದ ತೆರಳಿದ್ದು, ಸೋಮವಾರ ಬೆಳಗ್ಗೆ ಇಲ್ಲಿಗೆ ಬಂದಿಳಿಯಲಿದೆ. ಅದರಲ್ಲಿ ಏಳು ಮಹಿಳೆಯರು ಮತ್ತು 10 ಪುರುಷರಿದ್ದಾರೆ. ಈ ನಡುವೆ 32 ಜನರ ಬಾಲಕ- ಬಾಲಕಿಯರು ಮತ್ತು ಕೋಚ್‌ ಸೇರಿ ವಾಲಿಬಾಲ್‌ ಪಟುಗಳ ತಂಡವು ರವಿವಾರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯಿತು.

ರೈಲು ದುರಂತದಲ್ಲಿ ಒಟ್ಟಾರೆ ಸುಮಾರು 280 ಜನ ಸಾವನ್ನಪ್ಪಿದ್ದು, ನೂರಾರು ಜನ ಗಾಯಗೊಂಡಿದ್ದಾರೆ. ಅದರಲ್ಲಿ ಯಾರೊಬ್ಬರೂ ಕನ್ನಡಿಗರಿಲ್ಲ. ಮೃತರ ಪೈಕಿ 48-50 ಮೃತದೇಹಗಳ ಗುರುತು ಪತ್ತೆಯಾಗಿದ್ದು, ಉಳಿದವರನ್ನು ಗುರುತಿಸುವ ಕಾರ್ಯ ರೈಲ್ವೆ ಮತ್ತು ಒಡಿಶಾ ಸರಕಾರದಿಂದ ನಡೆದಿದೆ. ಒಂದು ವೇಳೆ ಯಾರಾದರೂ ಕನ್ನಡಿಗರು ಸಿಲುಕಿರುವುದು ಕಂಡುಬಂದರೆ, ತತ್‌ಕ್ಷಣ ತಮಗೆ ತಿಳಿಸುವಂತೆಯೂ ಹೇಳಿದ್ದೇವೆ ಎಂದು ಕರ್ನಾಟಕ ವಿಪತ್ತು ನಿರ್ವಹಣ ಪ್ರಾಧಿಕಾರದ ಆಯುಕ್ತ ಮನೋಜ್‌ ರಾಜನ್‌ ಉದಯವಾಣಿಗೆ ತಿಳಿಸಿದರು.

ಸಚಿವರ ತಂಡ ಇಂದು ವಾಪಸ್‌?
ಸಂತ್ರಸ್ತರ ರಕ್ಷಣ ಕಾರ್ಯ ಬಹುತೇಕ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸಚಿವ ಸಂತೋಷ್‌ ಲಾಡ್‌ ನೇತೃತ್ವದ ತಂಡ ಸೋಮವಾರ ಬೆಂಗಳೂರಿಗೆ ಮರಳುವ ಸಾಧ್ಯತೆ ಇದೆ. ಜೂನ್‌ 3ರಂದು ಮಧ್ಯಾಹ್ನ ಸಚಿವರು ಮತ್ತು ಅಧಿಕಾರಿಗಳ ತಂಡ ಭುವನೇಶ್ವರಕ್ಕೆ ಧಾವಿಸಿತ್ತು.

ಟಾಪ್ ನ್ಯೂಸ್

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: 15 ಮಂದಿ ಆರೋಪಿಗಳು ಖುಲಾಸೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.