ರೋಗಗ್ರಸ್ತ ಕೈಗಾರಿಕೆಗಳ ಪುನಶ್ಚೇತನಕ್ಕೆ ಕ್ರಮ: ಸಚಿವ ಮುರುಗೇಶ ನಿರಾಣಿ


Team Udayavani, Jan 6, 2023, 5:45 AM IST

ರೋಗಗ್ರಸ್ತ ಕೈಗಾರಿಕೆಗಳ ಪುನಶ್ಚೇತನಕ್ಕೆ ಕ್ರಮ: ಸಚಿವ ಮುರುಗೇಶ ನಿರಾಣಿ

ಬೆಂಗಳೂರು: ರೋಗಗ್ರಸ್ತ ಹಳೇ ಕೈಗಾರಿಕೆಗಳ ಪುನಶ್ಚೇತನಕ್ಕಾಗಿ ಯೋಜನೆ ರೂಪಿಸಲಾಗಿದ್ದು, ಅಂತಹ ಕೈಗಾರಿಕೆಗಳು ತನ್ನ ಕಾರ್ಯನಿರ್ವಹಣೆ ಕುರಿತು ದಾಖಲೆಯನ್ನು ಕೆಐಎಡಿಬಿಗೆ ಸಲ್ಲಿಸಿ, ಸರ್ಕಾರಕ್ಕೆ ನೀಡಬೇಕಾದ ಎಲ್ಲ ಬಾಕಿಯನ್ನು ಪಾವತಿಸಿದರೆ ಆ ಕಾರ್ಖಾನೆಗಳಿಗೆ ಸೇಲ್‌ ಡೀಡ್‌ ಮಾಡಿಕೊಡಲಾಗುವುದು ಎಂದು ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ತಿಳಿಸಿದರು.

ರಾಜ್ಯ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯಿಂದ ಗುರುವಾರ ಆಯೋಜಿಸಲಾಗಿದ್ದ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿ, ಕೈಗಾರಿಕೆ ಅಭಿವೃದ್ಧಿಗೆ ರಾಜ್ಯ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. ಪ್ರಮುಖವಾಗಿ ಕೈಗಾರಿಕೆಗಳಿಂದ ವಸೂಲಿ ಮಾಡುವ ಆಸ್ತಿ ತೆರಿಗೆಯಲ್ಲಿ ಶೇ.70 ಪ್ರಮಾಣವನ್ನು ಆಯಾ ಕೈಗಾರಿಕಾ ಪ್ರದೇಶದ ಸಂಘಕ್ಕೆ ನೀಡಲಾಗುವುದು. ಉಳಿದ ಶೇ.30ನ್ನು ಗ್ರಾಮ ಪಂಚಾಯಿತಿ ಸೇರಿ ಇನ್ನಿತರ ಸ್ಥಳೀಯ ಆಡಳಿತಗಳಿಗೆ ಕೊಡಲಾಗುವುದು. ಅದರ ಜತೆಗೆ ರೋಗಗ್ರಸ್ತ ಹಳೇ ಕೈಗಾರಿಕೆಗಳ ಪುನಶ್ಚೇತನಕ್ಕೆ ಹೊಸ ನಿಯಮ ಜಾರಿಗೆ ತರಲಾಗಿದೆ. ಆ ಕೈಗಾರಿಕೆಗಳಿಗೆ ಸೇಲ್‌ ಡೀಡ್‌ ಮಾಡಿಕೊಡಲು ನಿರ್ಧರಿಸಲಾಗಿದೆ. ಹೀಗೆ ಸೇಲ್‌ ಡೀಡ್‌ ಪಡೆಯುವ ಕೈಗಾರಿಕೆಗಳು ಹಿಂದಿನಂತೆಯೇ ತನ್ನ ಉತ್ಪಾದನೆಯನ್ನು ಮುಂದುವರಿಸಬಹುದಾಗಿದೆ ಎಂದು ಹೇಳಿದರು.

ಈವರೆಗೆ ಎಸ್‌ಯುಸಿ ಆಧಾರದಲ್ಲಿ ಕೈಗಾರಿಕೆ ಆರಂಭಿಸುವವರು ಕೆಐಎಡಿಬಿಯಲ್ಲಿ ಹಣವನ್ನು ಠೇವಣಿ ಇಡಬೇಕಿತ್ತು. ಇದರ ಬಗ್ಗೆ ಸಾಕಷ್ಟು ವಿರೋಧಗಳಿದ್ದವು. ಹೀಗಾಗಿ ಎಸ್‌ಯುಸಿ ಆಧಾರದಲ್ಲಿ ಕೈಗಾರಿಕೆ ಆರಂಭಿಸಲು ಕೆಐಎಡಿಬಿಗೆ ಸರ್ಜಿ ಸಲ್ಲಿಸುವವರ ಬಳಿ ಸ್ವಂತ ಭೂಮಿ ಇದ್ದರೆ ಕೆಐಎಡಿಬಿಗೆ ಯಾವುದೇ ರೀತಿಯ ಹಣ ಪಾವತಿಸುವ ಅವಶ್ಯಕತೆಯಿಲ್ಲ ಎಂಬ ನಿಯಮ ಜಾರಿ ಮಾಡಲಾಗಿದೆ ಎಂದು ಹೇಳಿದರು.

ಎಫ್ಕೆಸಿಸಿಐ ಅಧ್ಯಕ್ಷ ಬಿ.ವಿ. ಗೋಪಾಲ ರೆಡ್ಡಿ, ಉಪಾಧ್ಯಕ್ಷ ಎಂ.ಜಿ. ಬಾಲಕೃಷ್ಣ, ಕೈಗಾರಿಕಾ ಸಮಿತಿ ಅಧ್ಯಕ್ಷ ಬಿ.ಪಿ. ಶಶಿಧರ್‌ ಇತರರಿದ್ದರು.

ಹಲವು ಸಮಸ್ಯೆಗಳ ಅನಾವರಣ
ಸಂವಾದದಲ್ಲಿ ಕೈಗಾರಿಕೋದ್ಯಮಿಗಳು ಸಚಿವರ ಮುಂದೆ ಹಲವು ಸಮಸ್ಯೆಗಳನ್ನಿಟ್ಟರು. 15 ವರ್ಷಗಳ ಹಿಂದೆ ಆರಂಭಿಸಿದ ಕೈಗಾರಿಕೆಗಳಿಗೆ ನೀಡಲಾಗಿರುವ ಬಿ ಖಾತಾವನ್ನು ರದ್ದು ಮಾಡಿ, ಎಲ್ಲ ಕೈಗಾರಿಕೆಗಳಿಗೆ ಎ ಖಾತೆ ನೀಡಲು ಕ್ರಮ ಕೈಗೊಳ್ಳಬೇಕು. ಹಾರೋಹಳ್ಳಿ ಪ್ರಿಂಟ್‌ ಪಾರ್ಕ್‌ನಲ್ಲಿ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದ ಆದೇಶ ಉಲ್ಲಂಘನೆಯಾಗಿದೆ ಎಂದು ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ. ಇದನ್ನು ತಡೆಯಲು ಹಾಗೂ ಸಮಸ್ಯೆ ನಿವಾರಿಸಲು ಕ್ರಮ ಕೈಗೊಳ್ಳಬೇಕು. ಜಿಎಸ್‌ಟಿ ಹಿಂಪಡೆಯುವ (ರೀಫ‌ಂಡ್‌) ಸಂಬಂಧ ಇರುವ ಸಮಸ್ಯೆ ನಿವಾರಿಸಬೇಕು, ನಷ್ಟದಲ್ಲಿರುವ ಕೈಗಾರಿಕೆಗಳಿಗೆ ಬ್ಯಾಂಕ್‌ಗಳಿಂದ ಅತಿಹೆಚ್ಚು ಬಡ್ಡಿ ದರದಲ್ಲಿ ಸಾಲ ನೀಡುವುದು, ತುಮಕೂರಿನಲ್ಲಿ ಉಗ್ರಾಣ ಮತ್ತು ಸಾರಿಗೆ ವ್ಯವಸ್ಥೆಯಲ್ಲಿನ ಸಮಸ್ಯೆಗಳು ಸೇರಿ ಇನ್ನಿತರ ಸಮಸ್ಯೆಗಳ ನಿವಾರಣೆಗೆ ಕೈಗಾರಿಕೋದ್ಯಮಿಗಳು ಸಚಿವ ಮುರುಗೇಶ ನಿರಾಣಿ ಅವರನ್ನು ಕೋರಿದರು.

ತುಮಕೂರಿನಲ್ಲಿ ವಿಮಾನನಿಲ್ದಾಣ
ತುಮಕೂರಿನಲ್ಲಿ ಕೈಗಾರಿಕಾ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ಪ್ರಮುಖವಾಗಿ ತುಮಕೂರಿನ ಶಿರಾದಲ್ಲಿ ಅಂತಾರಾಷ್ಟ್ರೀಯ ವಿಮಾನನಿಲ್ದಾಣ ನಿರ್ಮಾಣಕ್ಕೆ ಈಗಾಗಲೆ ತೀರ್ಮಾನಿಸಲಾಗಿದೆ. ಯೋಜನೆ ಕಾರ್ಯಗತಗೊಳಿಸುವುದಕ್ಕೆ ಸಂಬಂಧಿಸಿದ ಕೆಲಸಗಳು ನಡೆಯುತ್ತಿವೆ ಎಂದು ಸಚಿವ ಮುರುಗೇಶ ನಿರಾಣಿ ಹೇಳಿದರು.

ನಾನೇ ಮನವಿ ಸಿದ್ಧಪಡಿಸುತ್ತೇನೆ
ರಾಜ್ಯದಲ್ಲಿನ ಕೈಗಾರಿಕೋದ್ಯಮಿಗಳ ಪೈಕಿ ಹೊರರಾಜ್ಯದವರೇ ಹೆಚ್ಚಿದ್ದಾರೆ. ಇಲ್ಲಿನ ಸವಲತ್ತುಗಳನ್ನು ಬಳಸಿಕೊಳ್ಳುವಲ್ಲಿ ರಾಜ್ಯದ ಉದ್ಯಮಿಗಳು ವಿಫ‌ಲರಾಗಿದ್ದಾರೆ. ರಾಜ್ಯ ಸರ್ಕಾರದ ಬಳಿ ತಮ್ಮ ಬೇಡಿಕೆ ಇಡಲೂ ರಾಜ್ಯದ ಉದ್ಯಮಿಗಳು ಹಿಂಜರಿಯುತ್ತಿದ್ದಾರೆ. ರಾಜ್ಯದ ಉದ್ಯಮಿಗಳು ಇಲ್ಲಿನ ಸಂಪನ್ಮೂಲವನ್ನು ಸರಿಯಾಗಿ ಬಳಸಿಕೊಳ್ಳಬೇಕು. ಸರ್ಕಾರದಿಂದ ಸವಲತ್ತು ಪಡೆಯಲು ನಿಮಗೆ ಸಾಧ್ಯವಾಗದಿದ್ದರೆ, ಬೇಡಿಕೆಗಳನ್ನು ತಿಳಿಸಿ ನಿಮ್ಮ ಲೆಟರ್‌ ಹೆಡ್‌ ಕೊಡಿ. ಅದರಲ್ಲಿ ನಾನೇ ಮನವಿ, ಬೇಡಿಕೆಯನ್ನು ಮುದ್ರಿಸಿ ಮುಖ್ಯಮಂತ್ರಿ ಸೇರಿ ಸಂಬಂಧಪಟ್ಟ ಸಚಿವರಿಗೆ ನೀಡುತ್ತೇನೆ ಎಂದು ಮುರುಗೇಶ ನಿರಾಣಿ ತಿಳಿಸಿದರು.

ಟಾಪ್ ನ್ಯೂಸ್

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.