ಆಸ್ಪತ್ರೆಯ ಆಪರೇಶನ್ ಥಿಯೇಟರ್ ನೊಳಗೆ ಅತ್ಯಾಚಾರಕ್ಕೊಳಗಾದ ಯುವತಿ ಸಾವು: ತನಿಖೆಗೆ ಆದೇಶ
ಆರೋಪದ ಬಗ್ಗೆ ತನಿಖೆ ನಡೆಸಲು ಎರಡು ತನಿಖಾ ಸಮಿತಿಯನ್ನು ರಚಿಸಲಾಗಿದೆ ಎಂದು ವರದಿ ತಿಳಿಸಿದೆ.
Team Udayavani, Jun 9, 2021, 12:52 PM IST
ಲಕ್ನೋ: ಪ್ರಯಾಗ್ ರಾಜ್ ನ ಎಸ್ ಆರ್ ಎನ್ ಆಸ್ಪತ್ರೆಗೆ ದಾಖಲಾಗಿದ್ದ ಮಿರ್ಜಾಪುರದ ಯುವತಿ ಮೇಲೆ ಕೆಲವು ವೈದ್ಯರು ಸಾಮೂಹಿಕ
ಅತ್ಯಾಚಾರಕ್ಕೊಳಗಾಗಿದ್ದು, ಈಕೆ ಮಂಗಳವಾರ(ಜೂನ್ 09) ಸಾವನ್ನಪ್ಪಿರುವುದಾಗಿ ವರದಿ ತಿಳಿಸಿದೆ. ಕರುಳಿನ ಸಮಸ್ಯೆಯಿಂದ ಯುವತಿ ಮೇ 29ರಂದು ಆಸ್ಪತ್ರೆಗೆ ದಾಖಲಾಗಿದ್ದಳು ಎಂದು ವರದಿ ಹೇಳಿದೆ.
ಇದನ್ನೂ ಓದಿ:ಮುಂಗಾರು ಅಬ್ಬರ…ಮುಂಬಯಿಯಲ್ಲಿ ಧಾರಾಕಾರ ಮಳೆ; ಟ್ರಾಫಿಕ್ ಜಾಮ್, ರೈಲು ಸಂಚಾರ ವ್ಯತ್ಯಯ
ಜೂನ್ 1ರಂದು ಯುವತಿಯನ್ನು ಶಸ್ತ್ರಚಿಕಿತ್ಸೆಗಾಗಿ ಆಪರೇಷನ್ ಥಿಯೇಟರ್ ಗೆ ಕರೆದೊಯ್ದಿದ್ದು, ಈ ಸಂದರ್ಭದಲ್ಲಿ ವೈದ್ಯರ ತಂಡ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವುದಾಗಿ ಆರೋಪಿಸಲಾಗಿದೆ. ಶಸ್ತ್ರಚಿಕಿತ್ಸೆಯ ನಂತರ ಯುವತಿ ಅಸ್ವಸ್ಥಗೊಂಡಿದ್ದು, ಆಪರೇಷನ್ ಥಿಯೇಟರ್ ನೊಳಗೆ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ವಿಷಯದ ಟಿಪ್ಪಣಿ ಬರಹವನ್ನು ಸಹೋದರನಿಗೆ ನೀಡುವ ಮೂಲಕ ವಿಷಯ ಬಹಿರಂಗಗೊಂಡಿರುವುದಾಗಿ ವರದಿ ವಿವರಿಸಿದೆ.
“ಈ ವೈದ್ಯರು ಒಳ್ಳೆಯವರಲ್ಲ” ಎಂದು ನಡುಗುವ ಕೈಗಳಿಂದ ತುಂಡು ಕಾಗದದಲ್ಲಿ ಬರೆದು ಸಹೋದರನಿಗೆ ನೀಡಿದ್ದಳು. ಆಕೆಗೆ ಯಾವ ಚಿಕಿತ್ಸೆಯನ್ನೂ ನೀಡಿಲ್ಲ, ಏನೊ ನಡೆದಿದೆ ಎಂದು ಸಹೋದರ ಆರೋಪಿಸಿದ್ದ. ನಂತರ ಆಪರೇಷನ್ ಥಿಯೇಟರ್ ನಲ್ಲಿ ನಡೆದ ಘಟನೆಯ ಬಗ್ಗೆ ಸಹೋದರ ವಿಡಿಯೋ ಮಾಡಿಕೊಂಡಿರುವುದಾಗಿ ವರದಿ ತಿಳಿಸಿದೆ.
ಈ ಘಟನೆ ಬಗ್ಗೆ ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದರು. ಘಟನಾ ಸ್ಥಳಕ್ಕೆ ಠಾಣಾಧಿಕಾರಿ ಸತ್ಯೇಂದ್ರ ತಿವಾರಿ ಬಂದು ಸಂತ್ರಸ್ತೆಯ ತಾಯಿ ಮತ್ತು ಸಂಬಂಧಿಕರನ್ನು ಪ್ರಶ್ನಿಸಿದ್ದರು. ಆದರೆ ಕುಟುಂಬದ ಸದಸ್ಯರು ವೈದ್ಯರ ಮೇಲೆ ಯಾವುದೇ ಆರೋಪ ಹೊರಿಸಿಲ್ಲ ಎಂದು ತಿಳಿಸಿದ್ದಾರೆ. ಯುವತಿಗೆ ಪ್ರಜ್ಞೆ ಬಂದ ನಂತರ ಹೇಳಿಕೆಯನ್ನು ದಾಖಲು ಮಾಡಿಕೊಳ್ಳುವ ನಿಟ್ಟಿನಲ್ಲಿ ಪೊಲೀಸರು ವಾಪಸ್ ಬಂದಿದ್ದರು. ಆದರೆ ಅಷ್ಟರಲ್ಲಿ ಯುವತಿ ಸಾವಿಗೀಡಾಗಿದ್ದಾಳೆ ಎಂದು ವರದಿ ವಿವರಿಸಿದೆ.
ಯುವತಿ ಹೇಳಿಕೆ ನೀಡಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಏತನ್ಮಧ್ಯೆ ಎಸ್ ಆರ್ ಎನ್ ಆಸ್ಪತ್ರೆಯ ವೈದ್ಯರ ವಿರುದ್ಧದ ಸಾಮೂಹಿಕ ಅತ್ಯಾಚಾರ ಆರೋಪದ ಬಗ್ಗೆ ತನಿಖೆ ನಡೆಸಲು ಎರಡು ತನಿಖಾ ಸಮಿತಿಯನ್ನು ರಚಿಸಲಾಗಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ