ಉತ್ತರಾಖಂಡ್: ಅಂಕಿತಾ ಪ್ರಕರಣ-ಬಿಜೆಪಿ ನಾಯಕನ ಪುತ್ರನ ರೆಸಾರ್ಟ್ ಧ್ವಂಸ, SIT ತನಿಖೆ
ಸೌರಭ್ ಭಾಸ್ಕರ್ ಮತ್ತು ಸಹಾಯಕ ಮ್ಯಾನೇಜರ್ ಅಂಕಿತ್ ಗುಪ್ತಾಗೆ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
Team Udayavani, Sep 24, 2022, 11:29 AM IST
ಉತ್ತರಾಖಂಡ್: ರಿಷಿಕೇಶ್ ನ ರೆಸಾರ್ಟ್ ನ ರಿಸೆಪ್ಶನಿಸ್ಟ್ ಅಂಕಿತಾ ನಾಪತ್ತೆಯಾಗಿದ್ದ ಪ್ರಕರಣ ಇದೀಗ ತಿರುವು ಪಡೆದುಕೊಂಡಿದ್ದು, ಆಕೆಯ ಶವ ಪತ್ತೆಯಾಗಿದೆ. ಅಲ್ಲದೇ ಅಂಕಿತಾಳನ್ನು ಕೊಲೆ ಮಾಡಿರುವ ಆರೋಪದಲ್ಲಿ ಬಿಜೆಪಿ ನಾಯಕನ ಮಗ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ರೆಸಾರ್ಟ್ ಧ್ವಂಸಕ್ಕೆ ಸಿಎಂ ಆದೇಶ:
ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ಬಿಜೆಪಿ ನಾಯಕ ವಿನೋದ್ ಆರ್ಯ ಪುತ್ರ ಪುಳಕಿತ್ ಆರ್ಯನಿಗೆ ಸೇರಿದ ವನತಾರಾ ರೆಸಾರ್ಟ್ ಅನ್ನು ಧ್ವಂಸಗೊಳಿಸುವಂತೆ ಉತ್ತರಾಖಂಡ್ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಆದೇಶ ನೀಡಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ದೇವ್ರೇ ನನಗೆ 25 ಕೋಟಿ ಬಹುಮಾನ ಬರಬಾರದಿತ್ತು…ಕೇರಳ ಆಟೋ ಚಾಲಕನ ಅಳಲೇನು?!
ಸಿಎಂ ಆದೇಶ ಬಳಿಕ ಪುಳಕಿತ್ ಆರ್ಯ ಮಾಲೀಕತ್ವದ ವನತಾರಾ ರೆಸಾರ್ಟ್ ಅನ್ನು ಜೆಸಿಬಿ ಮೂಲಕ ಧ್ವಂಸಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿಯ ಸ್ಪೆಷಲ್ ಪ್ರಿನ್ಸಿಪಲ್ ಸೆಕ್ರೆಟರಿ ಅಭಿನವ್ ಕುಮಾರ್ ಎಎನ್ ಐಗೆ ತಿಳಿಸಿದ್ದಾರೆ.
ಆರೋಪಿಗಳಾದ ಪುಳಕಿತ್ ಆರ್ಯ, ರೆಸಾರ್ಟ್ ಮ್ಯಾನೇಜರ್ ಸೌರಭ್ ಭಾಸ್ಕರ್ ಮತ್ತು ಸಹಾಯಕ ಮ್ಯಾನೇಜರ್ ಅಂಕಿತ್ ಗುಪ್ತಾಗೆ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ತನಿಖೆಗೆ ಎಸ್ ಐಟಿ ರಚನೆ:
ಅಂಕಿತಾ ಕೊಲೆ ಪ್ರಕರಣದ ತನಿಖೆ ನಡೆಸಲು ಎಸ್ ಐಟಿ (ವಿಶೇಷ ತನಿಖಾ ದಳ) ರಚಿಸಲಾಗುವುದು ಎಂದು ಸಿಎಂ ಪುಷ್ಕರ್ ಸಿಂಗ್ ಟ್ವೀಟ್ ಮಾಡಿದ್ದು, ಡೆಪ್ಯುಟಿ ಇನ್ಸ್ ಪೆಕ್ಟರ್ ಜನರಲ್ ಆಫ್ ಪೊಲೀಸ್ ರೇಣುಕಾ ದೇವಿ ನೇತೃತ್ವದಲ್ಲಿ ತನಿಖೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಸಿಎಂ ಪುಷ್ಕರ್ ಆದೇಶ ನೀಡಿದ್ದು, ಇದೊಂದು ದುರಾದೃಷ್ಟಕರ ಘಟನೆಯಾಗಿದೆ. ಇಂತಹ ಪೈಶಾಚಿಕ ಕೃತ್ಯ ಎಸಗಿದ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಲಾಗುವುದು ಎಂದು ಪುಷ್ಕರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
MUST WATCH
ಹೊಸ ಸೇರ್ಪಡೆ
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
Desi Swara: ಮಸ್ಕತ್- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ