ಚಂಡೀಗಢ ಪಂಜಾಬ್ಗೆ: ಮಾನ್ ವಿರುದ್ಧ ಕಿಡಿ ಕಾರಿದ ಹರಿಯಾಣ ಸಿಎಂ
ಆಪ್ ಸರಕಾರ ಬಚ್ಚಾ ಎಂದ ಹರಿಯಾಣ ಸಚಿವ, ಎಸ್ವೈಎಲ್ ವಿವಾದವೂ ಮುನ್ನೆಲೆಗೆ
Team Udayavani, Apr 2, 2022, 3:31 PM IST
ಚಂಡೀಗಢ: ಪಂಜಾಬ್ಗೆ ಚಂಡೀಗಢವನ್ನು ವರ್ಗಾಯಿಸುವ ನಿರ್ಣಯದ ಬಗ್ಗೆ ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ತೀವ್ರ ಅಸಮಾಧಾನ ಹೊರ ಹಾಕಿದ್ದು, ಇದು ಆಪ್ ಮತ್ತು ಬಿಜೆಪಿ ನಡುವೆ ಹೊಸ ಸಂಘರ್ಷಕ್ಕೆ ಕಾರಣವಾಗಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಖಟ್ಟರ್, ಇದು ಖಂಡನೀಯ. ಅವರು ಈ ರೀತಿ ಮಾಡಬಾರದಿತ್ತು. ರಾಜೀವ್ – ಲಾಂಗೊವಾಲ್ ಒಪ್ಪಂದಕ್ಕೆ 35-36 ವರ್ಷಗಳ ಹಿಂದೆ ಸಹಿ ಹಾಕಲಾಯಿತು, ಅದರ ಪ್ರಕಾರ ಚಂಡೀಗಢ ಹರಿಯಾಣ ಮತ್ತು ಪಂಜಾಬ್ ಎರಡರ ರಾಜಧಾನಿಯಾಗಿದೆ. ಇದಕ್ಕೆ ಸಂಬಂಧಿಸಿದ ಹಲವಾರು ಸಮಸ್ಯೆಗಳಿವೆ ಎಂದು ನಾನು ಹೇಳಿದ್ದೆ ಎಂದರು.
ಅವರು ಈ ರೀತಿ ಏನಾದರೂ ಮಾಡಲು ಬಯಸಿದರೆ, ಅವರು ಮೊದಲು ಸಟ್ಲೆಜ್ ಯಮುನಾ ಲಿಂಕ್ ಕಾಲುವೆ ಸಮಸ್ಯೆಯನ್ನು ಪರಿಹರಿಸುವ ಕುರಿತು ಸುಪ್ರೀಂ ಕೋರ್ಟ್ಗೆ ಹೋಗಬೇಕು. ಹಿಂದಿ ಮಾತನಾಡುವ ಪ್ರದೇಶಗಳನ್ನು ಹರಿಯಾಣಕ್ಕೆ ನೀಡಲಿಲ್ಲ, ಇದು ಉಳಿದ ಸಮಸ್ಯೆಗಳನ್ನು ವಿಳಂಬಗೊಳಿಸಿತು. ಹರ್ಯಾಣಕ್ಕೆ ಹಿಂದಿ ಭಾಷಿಕ ಪ್ರದೇಶಗಳನ್ನು ನೀಡಲು ಸಿದ್ಧ ಎಂದು ಅವರು ಹೇಳಬೇಕು ಎಂದು ಖಟ್ಟರ್ ಹೇಳಿದ್ದಾರೆ.
ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ಇದನ್ನು ಖಂಡಿಸಬೇಕು ಅಥವಾ ಅವರು ಹರಿಯಾಣದ ಜನರ ಕ್ಷಮೆಯಾಚಿಸಬೇಕು. ಪಂಜಾಬ್ ಸಿಎಂ ಕೂಡ ಹರಿಯಾಣ ಜನತೆಯ ಕ್ಷಮೆ ಕೇಳಬೇಕು. ಅವರು ಮಾಡಿರುವುದು ಖಂಡನೀಯ ಎಂದರು.
ಆಪ್ ಸರಕಾರ ಬಚ್ಚಾ ಎಂದ ಹರಿಯಾಣ ಸಚಿವ
ಪಂಜಾಬ್ ಸರ್ಕಾರ ‘ಬಚ್ಚಾ ಪಕ್ಷ’. ಅವರಿಗೆ ಸಮಸ್ಯೆಗಳ ಸಂಪೂರ್ಣ ಜ್ಞಾನವಿಲ್ಲ.ಚಂಡೀಗಢ ಮಾತ್ರ ಸಮಸ್ಯೆಯಲ್ಲ. ಅದಕ್ಕೆ ಸಂಬಂಧಿಸಿದ ಇತರ ಹಲವು ಸಮಸ್ಯೆಗಳಿವೆ. ಹಿಂದಿ ಮಾತನಾಡುವ ಪ್ರದೇಶಗಳ ಸಮಸ್ಯೆಗಳಿವೆ. ಅವರು ಅದರ ಬಗ್ಗೆ ಏನನ್ನೂ ಹೇಳಲಿಲ್ಲ. ಅದು ಸಂಭವಿಸಿದಾಗಲೆಲ್ಲಾ ಒಂದೇ ನಿರ್ಧಾರವನ್ನು ತೆಗೆದುಕೊಳ್ಳಬಹುದು ಎಂದು ಹರಿಯಾಣ ಸಚಿವ ಮಿನ್ ಅನಿಲ್ ವಿಜ್ ಕಿಡಿ ಕಾರಿದ್ದಾರೆ.
ಚಂಡೀಗಢವನ್ನು ಕೇಂದ್ರ ಸೇವಾ ನಿಯಮಗಳಿಗೆ ಒಳಪಡಿಸುವ ಕೇಂದ್ರದ ನಿರ್ಧಾರದ ವಿರುದ್ಧ ಪಂಜಾಬ್ ಸಿಎಂ ಭಗವಂತ್ ಮಾನ್ ಪಂಜಾಬ್ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ್ದರು. ಚಂಡೀಗಢವನ್ನು ಪಂಜಾಬ್ಗೆ ವರ್ಗಾಯಿಸಲು ಮಾನ್ ಕೇಂದ್ರ ಸರ್ಕಾರಕ್ಕೆ ಪ್ರಸ್ತಾಪ ಮುಂದಿಟ್ಟಿದ್ದರು.
ಸಟ್ಲೆಜ್ ಯಮುನಾ ಲಿಂಕ್ ಕಾಲುವೆ ವಿವಾದ ?
ವಿವಾದದ ಕಾರಣದಿಂದ ಕಾಲುವೆ ಅಪೂರ್ಣವಾಗಿದೆ. 1999 ರಲ್ಲಿ, ಹರಿಯಾಣವು ಕಾಲುವೆ ನಿರ್ಮಾಣಕ್ಕಾಗಿ ಸುಪ್ರೀಂ ಕೋರ್ಟ್ನಲ್ಲಿ ದಾವೆ ಹೂಡಿತ್ತು. 2002 ರಲ್ಲಿ, ಸುಪ್ರೀಂ ಕೋರ್ಟ್ ಪಂಜಾಬ್ಗೆ ಎಸ್ವೈಎಲ್ ಕಾಲುವೆಯನ್ನು ಒಂದು ವರ್ಷದೊಳಗೆ ಪೂರ್ಣಗೊಳಿಸಲು ಸೂಚಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್