ಹಣೆಯಲ್ಲಿ ಬರೆದಿದ್ದರೆ ಸಚಿವ ಸ್ಥಾನ ಸಿಗುತ್ತದೆ, ಇಲ್ಲಾಂದ್ರೆ ಇಲ್ಲ: ಮುನಿರತ್ನ
ನನ್ನ ಜೊತೆಗೆ ಬಂದವರು ಎಲ್ಲಾ ಬ್ಯುಸಿಯಾಗಿದ್ದಾರೆ. ಯಾರಿಗೂ ಮಾತಾಡುವುದಕ್ಕೆ ಸಮಯವಿಲ್ಲ
Team Udayavani, Jan 14, 2021, 1:23 PM IST
ಬೆಂಗಳೂರು: ಸಚಿವ ಸ್ಥಾನ ನನ್ನ ಹಣೆಯಲ್ಲಿ ಬರೆದಿದ್ದರೆ ಸಿಗುತ್ತದೆ ಇಲ್ಲ ಅಂದ್ರೆ ಇಲ್ಲ. ಕಾರ್ಯಕರ್ತನಾಗಿ ಮುಂದುವರಿಯುತ್ತೇನೆ ಎಂದು ಶಾಸಕ ಮುನಿರತ್ನ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಜೊತೆಗೆ ಬಂದವರು ಎಲ್ಲಾ ಬ್ಯುಸಿಯಾಗಿದ್ದಾರೆ. ಯಾರಿಗೂ ಮಾತಾಡುವುದಕ್ಕೆ ಸಮಯವಿಲ್ಲ ಎಲ್ಲಾ ಬ್ಯುಸಿ ಇದ್ದಾರೆ ಎಂದು ವ್ಯಂಗ್ಯವಾಗಿ ಹೇಳಿದರು.
ಯಡಿಯೂರಪ್ಪ ವಚನ ಭ್ರಷ್ಟ ಅಲ್ಲ, ಮಾತು ತಪ್ಪಲಿಲ್ಲ.ಕೆಲವು ಸಂದರ್ಭಗಳಲ್ಲಿ ಹೀಗೆ ಆಗುತ್ತದೆ. ಮುಖ್ಯಮಂತ್ರಿ ವಿರುದ್ಧ ಮಾತನಾಡಿದರೆ ಪಕ್ಷಕ್ಕೆ ಕೆಟ್ಟದು ಮಾಡಿದ ಹಾಗೆಯಾಗುತ್ತದೆ. ಸಚಿವ ಸ್ಥಾನ ಸಿಗಲಿಲ್ಲ ಎಂದು ಕೆಟ್ಟದಾಗಿ ಮಾತನಾಡಬಾರದು. ನಮ್ಮದು ರಾಷ್ಟ್ರೀಯ ಪಕ್ಷ. ಅಲ್ಲಿಂದ ಒಪ್ಪಿಗೆ ಬರುವುದು ವಿಳಂಬವಾಗಬಹುದು ಎಂದರು.
ಇದನ್ನೂ ಓದಿ:ವರಿಷ್ಠರ ಅಪೇಕ್ಷೆಯಂತೆ ನನ್ನ ಇತಿ-ಮಿತಿಯಲ್ಲಿ ಸಂಪುಟ ವಿಸ್ತರಣೆ ಮಾಡಿದ್ದೇನೆ: ಬಿಎಸ್ ವೈ
ನಾನು ನನ್ನ ಕ್ಷೇತ್ರದಲ್ಲಿ ಕೆಲಸ ಮಾಡಿದ್ದೇನೆ. ಜನರ ಹೃದಯದಲ್ಲಿ ಸ್ಥಾನ ಪಡೆದಿದ್ದೇನೆ ಎಂದರು. ‘ಸಿಡಿ’ ಆರೋಪದ ವಿಚಾರವಾಗಿ ಮಾತನಾಡಿದ ಅವರು, ಸಿಡಿ ಇದ್ದರೆ ತೋರಿಸಲಿ, ಸುಮ್ಮನೆ ಆಧಾರ ರಹಿತವಾಗಿ ಮಾತಾಡಬಾರದು. ಗೌರವಯುತವಾಗಿ ಮಾತಾಡುವುದಕ್ಕೆ ಸಿಎಂ ಎಲ್ಲಾ ಅವಕಾಶ ಮಾಡಿಕೊಡುತ್ತಿದ್ದಾರೆ. ಪಕ್ಷಕ್ಕೆ ಮುಜುಗರ ತರುವ ಕೆಲಸ ಯಾರೂ ಮಾಡಬಾರದು ಎಂದರು.
ನಾನು ದೇವರನ್ನು ನಂಬುವ ಮನುಷ್ಯ. ದೇವರು ಇದ್ದಾನೆ ಎನ್ನುವ ಧರ್ಮದಲ್ಲಿ ಹುಟ್ಟಿದ್ದೇನೆ. ಸರ್ಕಾರ ಸುಭದ್ರವಾಗಿದೆ, ಇನ್ನೂ ಎರಡೂ ವರ್ಷ ಇರುತ್ತದೆ. ಯಾವುದೇ ತೊಂದರೆಯಾಗಲ್ಲ ಎಂದರು.
ಸಚಿವ ಸ್ಥಾನ ಇಲ್ಲ ಅಂತ ಚಿಂತೆ ಇಲ್ಲ. ಅರುಣ್ ಸಿಂಗ್ ಬಳಿ ನನಗೆ ಸಚಿವ ಸ್ಥಾನ ಬೇಕು ಎಂದೂ ಕೇಳಿಲ್ಲ. ಮಾತು ಕೊಟ್ಟಿದ್ದೇವೆ ಎಂದು ದುರುಪಯೋಗ ಮಾಡಿಕೊಳ್ಳಬಾರದು. ಬೇರೆಯವರಿಗೂ ನಮಗೂ ಹೋಲಿಕೆ ಮಾಡಿಕೊಳ್ಳಬಾರದು. ಕೆಲವು ಸಂದರ್ಭಗಳಲ್ಲಿ ಕೆಟ್ಟ ಸಮಯ ಬರುತ್ತದೆ ಎನೂ ಮಾಡುವುದಕ್ಕೆ ಆಗುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ