‘ಪುಷ್ಪ’ ಮತ್ತೊಂದು ವಿವಾದ: ಸಂಗೀತ ನಿರ್ದೇಶಕರ ವಿರುದ್ಧ ಬಿಜೆಪಿ ಶಾಸಕ ಕಿಡಿ
Team Udayavani, Dec 18, 2021, 4:57 PM IST
ಹೈದರಾಬಾದ್: ಖ್ಯಾತ ನಟ ಅಲ್ಲು ಅರ್ಜುನ್ ನಟನೆಯ ‘ಪುಷ್ಪ’ ಚಿತ್ರ ಹಲವು ವಿವಾದಾತ್ಮಕ ವಿಚಾರಗಳಿಗಾಗಿ ಭಾರಿ ಸುದಿಯಾಗುತ್ತಿದ್ದು, ಚಿತ್ರಕ್ಕೆ ಸಂಗೀತ ನೀಡಿರುವ ಖ್ಯಾತ ಸಂಗೀತ ನಿರ್ದೇಶಕ ದೇವಿಶ್ರೀ ಪ್ರಸಾದ್ ಅವರ ಹೇಳಿಕೆ ವಿವಾದಕ್ಕೆ ಸಿಲುಕಿ ಆಕ್ರೋಶಕ್ಕೆ ಕಾರಣವಾಗಿದೆ.
ದೇವಿಶ್ರೀ ಪ್ರಸಾದ್, ‘ಐಟಂ ಸಾಂಗ್ ನನಗೆ ಭಕ್ತಿ ಗೀತೆ ಇದ್ದ ಹಾಗೆ, ಐಟಂ ಸಾಂಗ್ಗಳು ಒಂದು ರೀತಿಯ ಧ್ಯಾನವೂ ಕೂಡ ಹೌದು’ಎಂದು ಹೇಳಿಕೆ ನೀಡಿದ್ದರು. ಹೇಳಿಕೆ ವಿವಾದಕ್ಕೆ ಗುರಿಯಾಗಿದ್ದು, ತೆಲಂಗಾಣದ ಬಿಜೆಪಿ ಶಾಸಕ ರಾಜಾ ಸಿಂಗ್ ಹೇಳಿಕೆಯನ್ನು ವಿರೋಧಿಸಿ ಕಿಡಿ ಕಾರಿದ್ದಾರೆ.
ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿರುವ ದೇವಿ ಶ್ರೀ ಪ್ರಸಾದ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಗೋಶಮಹಲ್ ಶಾಸಕ ರಾಜಾ ಸಿಂಗ್ ಹೈದರಾಬಾದ್ನ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾರೆ.
ದೇವಿಶ್ರೀ, ಐಟಂ ಸಾಂಗ್ಗೆ ಭಕ್ತಿ ಗೀತೆಯನ್ನು ಹೇಗೆ ಹೋಲಿಸುತ್ತಾರೆ? ಅನಗತ್ಯವಾಗಿ ಹಿಂದೂ ಭಕ್ತಿ ಗೀತೆಗಳ ವಿರುದ್ಧ ಅರ್ಥವಿಲ್ಲದ ಹೇಳಿಕೆ ನೀಡಿದ್ದಾರೆ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದು, ಕೂಡಲೇ ಬೇಷರತ್ ಕ್ಷಮೆಯಾಚಿಸಬೇಕೆಂದಿದ್ದಾರೆ. ಕ್ಷಮೆಯಾಚಿಸದಿದ್ದರೆ, ಹಿಂದೂ ಸಮುದಾಯದಿಂದ ತೀವ್ರ ವಿರೋಧ ಎದುರಿಸಬೇಕಾಗುತ್ತದೆ ಎಂದು ಕಿಡಿ ಕಾರಿದ್ದಾರೆ.
ಕ್ಷಮೆಯಾಚಿಸದಿದ್ದರೆ, ದೇವಿಶ್ರೀ ಅವರನ್ನು ತೆಲಂಗಾಣದಲ್ಲಿ ಸ್ವತಂತ್ರವಾಗಿ ತಿರುಗಾಡಲು ಬಿಡುವುದಿಲ್ಲ ಎಂದು ಗುಡುಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ