ಸಮಾಜ ಸೇವಕ ರಫೀಕ್ ಬಡೇಘರ್ ಅವರ ಮಾದರಿ ಕಾರ್ಯ

ಅನಾಥ ವೃದ್ಧ ದಂಪತಿ ನೆರವಿಗೆ ನಿಂತು ಸೇವೆ

Team Udayavani, Sep 30, 2021, 6:43 PM IST

badeghar

ಬೈಲಹೊಂಗಲ : ಅನಾಥ ವೃದ್ಧ ದಂಪತಿ ಅನುಭವಿಸುತ್ತಿರುವ ಸಂಕಷ್ಟವನ್ನು ಮನಗಂಡು ಅವರ ನೆರವಿಗೆ ಧಾವಿಸುವುದರ ಮೂಲಕ ಸಾಮಾಜಿಕ ಕಾರ್ಯಕರ್ತ ರಫೀಕ್ ಬಡೇಘರ್ ಅವರು ಮಾದರಿ ಎನಿಸಿಕೊಂಡಿದ್ದಾರೆ.

ಅನಾಥ ವೃದ್ಧ ದಂಪತಿಗಳಾದ ಮೂಲತ: ಮಹಾರಾಷ್ಟ್ರದ ಇಂಚಲಕರಜಿಯವರಾದ ಬಸವರಾಜ ಮಲಕಾಜಪ್ಪ ಸೊಲಾಪೂರೆ ಮತ್ತು ಸಾವಿತ್ರಿ ಬಸವರಾಜ ಸೊಲಾಪೂರೆ ಅವರು ಬೆಳಗಾವಿಯ  ವೃದ್ಧಾಶ್ರಮದಲ್ಲಿನ ವ್ಯವಸ್ಥೆಯ ಕುರಿತು ಬೇಸರ ವ್ಯಕ್ತಪಡಿಸಿ, ವೃದ್ಧಾಶ್ರದಲ್ಲಿ ನಿಷ್ಕಾಳಜಿ ತೋರುತ್ತಿದ್ದು, ಸರಿಯಾದ ಊಟ, ಚಿಕಿತ್ಸೆ ಸಿಗುತ್ತಿಲ್ಲ. ನಿತ್ಯ ನರಕಯಾತನೆ ಅನುಭವಿಸುತ್ತಿದ್ದೇವೆ. ನಮ್ಮ ಮಾತು ಕೇಳುವವರು ಯಾರೂ ಇಲ್ಲ. ಏನಾದರೂ ಹೇಳಲು ಹೋದರೆ ನಮ್ಮ ಮಾತಿಗೆ ಬೆಲೆಯೇ ಇಲ್ಲ ಎಂದು ನೋವು ತೋಡಿಕೊಂಡಿದ್ದರು.

ತೀವ್ರವಾಗಿ ನೊಂದಿದ್ದ ವೃದ್ಧ ದಂಪತಿ ಬೈಲಹೊಂಗಲಕ್ಕೆ ಬಂದಿದ್ದರು. ರಫೀಕ್ ಬಡೇಘರ್ ಅವರು ಅವರಿಗೆ ಬಾಡಿಗೆ ಮನೆ ಕೊಡಿಸಿ, ಸ್ವಂತ ಹೂವು -ಹಣ್ಣಿನ ಅಂಗಡಿ ಹಾಕಿ ಕೊಟ್ಟು ಜೀವನೋಪಾಯಕ್ಕೆ ನೆರವಾಗಿದ್ದಾರೆ.

ವ್ಯಾಪಾರಕ್ಕಾಗಿ ಅಂಗಡಿಯ ಮುಂದೆ ಬ್ಯಾನರ್ ಹಾಕಿದ್ದು ‘ನಾವು ಅನಾಥರಿದ್ದು ತಾವುಗಳು ನಮ್ಮ ಅಂಗಡಿಯಲ್ಲಿ ಹೂವು. ಹಣ್ಣು-ಹಂಪಲು ಖರೀದಿ ಮಾಡಿ, ನಮಗೆ ಸಹಾಯ ಮಾಡಿರಿ ಎನ್ನುವ ಬ್ಯಾನರ್ ಹಾಕಿಕೊಂಡು ವ್ಯಾಪಾರ-ವಹಿವಾಟು ನಡೆಸುತ್ತಿದ್ದೇವೆ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ವೈದ್ಯ ಸಾಹಿತಿ ಡಾ.ಎಸ್.ಎಸ್.ದೇವಲಾಪೂರ ಅವರು ಅನಾಥ ವೃದ್ಧ ದಂಪತಿಯ ಚಿಕಿತ್ಸೆಯನ್ನು ಉಚಿತವಾಗಿ ನೋಡಿಕೊಳ್ಳುತ್ತೇವೆಂದು ಭರವಸೆ ನೀಡಿದ್ದಾರೆ.

ವೃದ್ಧಾಶ್ರಮಗಳಲ್ಲಿ ಅನಾಥರಿಗೆ, ಬುದ್ಧಿಮಾಂಧ್ಯರಿಗೆ, ಅಂಗವಿಕಲರಿಗೆ ಸರಿಯಾದ ಊಪಚಾರ, ಕಾಳಜಿ ಮಾಡದೆ ಅಮಾನವೀಯ ರೀತಿಯಲ್ಲಿ ನಡೆದುಕೊಳ್ಳುತ್ತಿರುವುದು ಖಂಡನೀಯ. ಅಧಿಕಾರಗಳ ದಿವ್ಯ ನಿರ್ಲಕ್ಷತನದಿಂದ ಅನಾಥರು ನರಕಯಾತನೆ ಅನುಭವಿಸುತ್ತಿದ್ದಾರೆ. ಮಹಿಳಾ ಮತ್ತು ಮಕ್ಕಳ, ಕಲ್ಯಾಣ ಇಲಾಖೆ, ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಅಂಗವೀಕಲರ ಇಲಾಖೆಗೆ ಸರಕಾರ ಕೋಟ್ಯಾಂತರ ರೂ.ಹಣ ಖುರ್ಚು ಮಾಡುತ್ತಿರುವುದು ಯಾವ ಉದ್ದೇಶಕ್ಕಾಗಿ. ಅನಾಥರಿಗೆ ಸರಿಯಾದ ಊಟ, ಚಿಕಿತ್ಸೆ, ವಸತಿ ನೀಡದ ಅಮಾನವೀಯ ರೀತಿಯಲ್ಲಿ ನಡೆದುಕೊಳ್ಳುತ್ತಿರುವುದು ಸರಿಯಾದ ಕ್ರಮವಲ್ಲ. ಈ ಬಗ್ಗೆ ಅಧಿಕಾರಿಗಳು ಕ್ರಮವಹಿಸಿ ತಪ್ಪಿಸ್ಥರಿಗೆ ಶಿಕ್ಷೆ ವಿಧಿಸಬೇಕು.
ರಫೀಕ್ ಬಡೇಘರ, ಸಾಮಾಜಿಕ ಕಾರ್ಯಕರ್ತರು, ಬೈಲಹೊಂಗಲ

ನಾವು ಅನಾಥ ದಂಪತಿಗಳು ನಮಗೆ ಯಾರೂ ದಿಕ್ಕಿಲ್ಲ. ವೃದ್ಧಾಶ್ರಮಗಳಲ್ಲಿ ನಮ್ಮನ್ನು ಕೀಳಾಗಿ ಕಾಣುತ್ತಾರೆ. ಸರಿಯಾದ ಊಟ, ವಸತಿ, ಚಿಕಿತ್ಸೆ ನೀಡದೆ ನಾಯಿಗಿಂತ ಕಡೆಯಾಗಿ ನೋಡುತ್ತಾರೆ. ಸಾಮಾಜಿಕ ಕಾರ್ಯಕರ್ತ ರಫೀಕ ಬಡೇಘರ್ ಅವರು  ಬಾಡಿಗೆ ಮನೆ ಕೊಡಿಸಿ, ಜೀವನೋಪಾಯಕ್ಕಾಗಿ ಅಂಗಡಿ ಹಾಕಿಕೊಟ್ಟು ಸಮಾಜದಲ್ಲಿ ಬದುಕಲು ಹೇಳಿಕೊಟ್ಟಿದ್ದಾರೆ. ನಮ್ಮೆಲ್ಲ ಕಷ್ಟಗಳಿಗೆ ಬೆನ್ನೆಲುಬಾಗಿ ನಿಲ್ಲುವೆ ಎಂದು ಹೇಳಿದ್ದರಿಂದ ನಮ್ಮಲ್ಲಿ ಆತ್ಮಸ್ಥೈರ್ಯ ಹೆಚ್ಚಿದೆ.

ಬಸವರಾಜ ಸೊಲಾಪೂರೆ ಅನಾಥ ವೃದ್ಧ

ವರದಿ: ಸಿ.ವೈ.ಮೆಣಸಿನಕಾಯಿ

ಟಾಪ್ ನ್ಯೂಸ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

police crime

ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

10-uv-fusion

Theater: ಅಳಿವು ಉಳಿವಿನ ದವಡೆಯಲ್ಲಿ ರಂಗಭೂಮಿ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.