Modi in US: ಚೀನ, ಪಾಕಿಸ್ಥಾನ ಮೇಲೆ ಮೋದಿ ವಾಕ್‌ ಪ್ರಹಾರ

15 ಬಾರಿ ಎದ್ದು ನಿಂತು ಗೌರವ; 79 ಬಾರಿ ಕರತಾಡನ!

Team Udayavani, Jun 24, 2023, 7:18 AM IST

modi speech in us

ವಾಷಿಂಗ್ಟನ್‌: “ಉಗ್ರವಾದವು ಮನುಕುಲದ ಶತ್ರು. ಭಯೋತ್ಪಾದನೆಯ ವಿರುದ್ಧ ಕ್ರಮ ಕೈಗೊಳ್ಳುವ ವಿಚಾರ ಬಂದಾಗ, ಒಂದು ವೇಳೆ ಅಥವಾ ಆದರೆ ಎಂಬ ಪ್ರಶ್ನೆಯೇ ಉದ್ಭವಿಸುವುದಿಲ್ಲ…”

ಅಮೆರಿಕ ಸಂಸತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಗುಡುಗಿದ್ದು ಹೀಗೆ. ಅಮೆರಿಕ ಪ್ರವಾಸದಲ್ಲಿರುವ ಮೋದಿಯವರು ಯುಎಸ್‌ ಕಾಂಗ್ರೆಸ್‌ನ ಜಂಟಿ ಸದನವನ್ನು ಉದ್ದೇಶಿಸಿ ಮಾತನಾಡುತ್ತ ಚೀನ ಮತ್ತು ಪಾಕ್‌ ಮೇಲೆ ಪರೋಕ್ಷ ವಾಗ್ಧಾಳಿ ನಡೆಸಿದ್ದಾರೆ.

ಸುಮಾರು ಒಂದು ತಾಸು ಅವಧಿಯ ತಮ್ಮ ಭಾಷಣದಲ್ಲಿ ಪ್ರಧಾನಿ ಮೋದಿಯವರು ಭಯೋತ್ಪಾದನೆ ವಿರುದ್ಧದ ಹೋರಾಟ, ಪ್ರಜಾಪ್ರಭುತ್ವ, ಮಹಿಳಾ ಸಶಕ್ತೀಕರಣ, ಇಂಡೋ ಪೆಸಿಫಿಕ್‌ನಲ್ಲಿ ಕಾಲು ಕೆರೆದು ಜಗಳಕ್ಕೆ ಬರುತ್ತಿರುವ ಚೀನ ಸಹಿತ ಹಲವು ಮಹತ್ವದ ವಿಚಾರಗಳನ್ನು ಪ್ರಸ್ತಾವಿಸಿದರು.

ಎರಡು ಬಾರಿ ಅಮೆರಿಕ ಸಂಸತ್ತಿನ ಜಂಟಿ ಸದನವನ್ನು ಉದ್ದೇಶಿಸಿ ಮಾತನಾಡಿದ ಮೊದಲ ಭಾರತೀಯ ನಾಯಕ ಎಂಬ ಇತಿಹಾಸವನ್ನೂ ಪ್ರಧಾನಿ ಮೋದಿಯವರು ಸೃಷ್ಟಿಸಿದರು.

ಜತೆಗೆ, ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು, ವಿನ್‌ಸ್ಟನ್‌ ಚರ್ಚಿಲ್‌, ನೆಲ್ಸನ್‌ ಮಂಡೇಲಾ ಬಳಿಕ ಒಂದಕ್ಕಿಂತ ಹೆಚ್ಚು ಬಾರಿ ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡಲು ಅವಕಾಶ ಪಡೆದ ವಿಶ್ವನಾಯಕ ಎಂಬ ಖ್ಯಾತಿಗೂ ಮೋದಿ ಪಾತ್ರರಾದರು.

ಭಯೋತ್ಪಾದನೆ ಎನ್ನುವುದು ಒಟ್ಟು ಮನುಕುಲಕ್ಕೆ ಅಪಾಯ. ಹೀಗಾಗಿ ಉಗ್ರವಾದವನ್ನು ಪ್ರಾಯೋಜಿಸುತ್ತಿರುವ ಮತ್ತು ರಫ್ತು ಮಾಡುತ್ತಿರುವ ಶಕ್ತಿಗಳ ವಿರುದ್ಧ ನಾವೆಲ್ಲರೂ ಒಗ್ಗಟ್ಟಾಗಬೇಕು ಎಂದು ಮೋದಿ ಕರೆ ನೀಡಿದರು. ವ್ಯೂಹಾತ್ಮಕವಾಗಿ ಮಹತ್ವದ ಪ್ರದೇಶವಾದ ಇಂಡೋ ಪೆಸಿಫಿಕ್‌ ಮೇಲೆ ಆಕ್ರಮಣ ಮತ್ತು ಸಂಘರ್ಷದ ಕರಿನೆರಳು ಬಿದ್ದಿದೆ ಎಂದು ಹೇಳುವ ಮೂಲಕ ಮೋದಿ ಅವರು ಚೀನದ ವಿಸ್ತರಣಾವಾದದ ವಿರುದ್ಧವೂ ಕಿಡಿಕಾರಿದರು. ಇಂಡೋ ಪೆಸಿಫಿಕ್‌ ಪ್ರದೇಶದಲ್ಲಿ ಸ್ಥಿರತೆಯೇ ನಮಗೆ ದೊಡ್ಡ ಸವಾಲಾಗಿದೆ ಎಂದರು.

15 ಬಾರಿ ಎದ್ದು ನಿಂತು ಗೌರವ; 79 ಬಾರಿ ಕರತಾಡನ!

ಮೋದಿ ಭಾಷಣಕ್ಕೆ ಅಮೆರಿಕ ಸಂಸದರಿಂದ ಚಪ್ಪಾಳೆಯ ಸುರಿಮಳೆಯೇ ಸುರಿದಿದೆ. ಸಂಸದರು ಸುಮಾರು 15 ಬಾರಿ ಎದ್ದು ನಿಂತು ಗೌರವ ಸೂಚಿಸಿದ್ದಲ್ಲದೆ 79 ಬಾರಿ ಕರತಾಡನ ಮಾಡುವ ಮೂಲಕ ಮೋದಿಯ ಮಾತುಗಳಿಗೆ ಸಹಮತ ವ್ಯಕ್ತಪಡಿಸಿದರು.

ನಗು ಉಕ್ಕಿಸಿದ ಸಮೋಸಾ ಕಾಕಸ್‌

ಅಮೆರಿಕದಲ್ಲಿ ಇರುವ ಲಕ್ಷಾಂತರ ಮಂದಿ ಭಾರತದಲ್ಲಿ ಬೇರುಗಳನ್ನು ಹೊಂದಿದ್ದಾರೆ. ಅವರಲ್ಲಿ ಕೆಲವರು ಈ ಸದನದ ಛೇಂಬರ್‌ನಲ್ಲಿ ಕುಳಿತಿದ್ದಾರೆ. ಒಬ್ಬರು ನನ್ನ ಹಿಂದೆ ಆಸೀನರಾಗಿದ್ದಾರೆ. ಅವರು ಇತಿಹಾಸವನ್ನೇ ನಿರ್ಮಿಸಿದವರು ಎಂದು ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ ಕುರಿತು ಪ್ರಧಾನಿ ಮೋದಿ ನುಡಿದಾಗ ಚಪ್ಪಾಳೆಯ ಸುರಿಮಳೆಯಾಯಿತು.

ಭಾರತೀಯರು ಕೇವಲ ಸ್ಪೆಲ್ಲಿಂಗ್‌ ಬೀಯಲ್ಲಿ ಮಾತ್ರವಲ್ಲ, ಎಲ್ಲ ಕ್ಷೇತ್ರಗಳಲ್ಲೂ ಬುದ್ಧಿವಂತರು ಎಂದು ಮೋದಿ ಹೇಳಿದಾಗ ಸಂಸದರು ನಗೆಗಡಲಲ್ಲಿ ತೇಲಿದರು. “ಸಮೋಸಾ ಕಾಕಸ್‌ ಈಗ ಇಡೀ ಸದನದ ಫ್ಲೇವರ್‌ ಆಗಿ ಹೊರಹೊಮ್ಮಿದೆ. ಅದು ಇನ್ನಷ್ಟು ಬೆಳೆದು ವೈವಿಧ್ಯಮಯ ಭಾರತೀಯ ಖಾದ್ಯಗಳ ಸವಿಯನ್ನು ಇಲ್ಲಿ ಪಸರಿಸಲಿ” ಎಂದೂ ಮೋದಿ ಹೇಳಿದರು. ಜನಪ್ರಿಯ ಭಾರತೀಯ ಖಾದ್ಯಗಳಲ್ಲಿ ಒಂದಾದ ಸಮೋಸಾವನ್ನು ಅಮೆರಿಕಕ್ಕೆ ಹೋದ ಭಾರತೀಯರು ಅಲ್ಲೂ ಜನಪ್ರಿಯಗೊಳಿಸಿದ್ದಾರೆ. ಅಮೆರಿಕ ಸಂಸತ್ತಿನಲ್ಲಿರುವ ದಕ್ಷಿಣ ಏಷ್ಯಾ ಮೂಲದ ಚುನಾಯಿತ ಪ್ರತಿನಿಧಿಗಳ ಸಮೂಹ (ವಿಶೇಷವಾಗಿ ಭಾರತೀಯರು)ವನ್ನು “ಸಮೋಸಾ ಕಾಕಸ್‌” ಎಂದೇ ಕರೆಯಲಾಗುತ್ತದೆ ಎನ್ನುವುದು ಇಲ್ಲಿ ಉಲ್ಲೇಖಾರ್ಹ.

ಟಾಪ್ ನ್ಯೂಸ್

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.