ಕೊಹಿನೂರ್‌ ವಜ್ರವನ್ನು ಮರಳಿ ತರಲು ಮೋದಿ ಯತ್ನ

ಯುಕೆಯಲ್ಲಿರುವ ಸಾವಿರಾರು ಇತರೆ ಕಲಾಕೃತಿಗಳೂ ಸ್ವದೇಶಕ್ಕೆ? -ಶೀಘ್ರದಲ್ಲೇ ಪ್ರಕ್ರಿಯೆ ಆರಂಭಿಸಲು ಪ್ರಧಾನಿ ಮೋದಿ ಸಲಹೆ

Team Udayavani, May 15, 2023, 7:09 AM IST

KOHINOOR DIAMOND

ನವದೆಹಲಿ: “ಬೆಳಕಿನ ಶಿಖರ” ಎಂದೇ ಕರೆಯಲ್ಪಡುವ ಕೊಹಿನೂರು ವಜ್ರವನ್ನು ಮರಳಿ ಭಾರತಕ್ಕೆ ತರುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹೊಸ ಹೆಜ್ಜೆಯಿಟ್ಟಿದೆ. ಕೊಹಿನೂರು ಮಾತ್ರವಲ್ಲದೇ ಬ್ರಿಟಿಷರ ಆಡಳಿತಾವಧಿಯಲ್ಲಿ ಭಾರತದಿಂದ ಹೊತ್ತೂಯ್ದಿದ್ದ ಇತರೆ ಅನೇಕ ಅಮೂಲ್ಯ ವಸ್ತುಗಳನ್ನು ವಾಪಸ್‌ ತರುವ ಉದ್ದೇಶದಿಂದ ಶೀಘ್ರದಲ್ಲೇ ರಾಜತಾಂತ್ರಿಕ ಅಭಿಯಾನವೊಂದನ್ನು ಆರಂಭಿಸಲು ಸರ್ಕಾರ ಸಿದ್ಧತೆ ನಡೆಸಿದೆ.

ಮೋದಿ ಆಸ್ಥೆ:

ಈ ರಾಜತಾಂತ್ರಿಕ ಅಭಿಯಾನವನ್ನು “ಗತಕಾಲದ ಪರಿಗಣನೆ’ ಎಂದು ವ್ಯಾಖ್ಯಾನಿಸಲಾಗಿದ್ದು, ಯುನೈಟೆಡ್‌ ಕಿಂಗ್‌ಡಮ್‌ ಎದುರಿಸಲಿರುವ ಅತಿದೊಡ್ಡ “ವಾಪಸಾತಿ ಬೇಡಿಕೆ’ ಇದಾಗಿರಲಿದೆ. ಕೊಹಿನೂರು ವಜ್ರ ಮತ್ತು ಭಾರತದ ಕಲಾಕೃತಿಗಳನ್ನು ಮರಳಿ ತರುವುದಕ್ಕೆ ಖುದ್ದು ಪ್ರಧಾನಿ ಮೋದಿಯವರೇ ಆಸ್ಥೆ ವಹಿಸಿದ್ದು, ಆದ್ಯತೆಯ ಮೇರೆಗೆ ಈ ಕೆಲಸ ನಡೆಯಬೇಕೆಂದು ಸೂಚಿಸಿದ್ದಾರೆ ಎಂದು ಕೇಂದ್ರ ಸಂಸ್ಕೃತಿ ಸಚಿವಾಲಯದ ಕಾರ್ಯದರ್ಶಿ ಗೋವಿಂದ್‌ ಮೋಹನ್‌ ಹೇಳಿದ್ದಾರೆ.

ಈ ವರ್ಷವೇ ಆರಂಭ:

ಭಾರತ ಮೂಲದ ಅಮೂಲ್ಯ ಕಲಾಕೃತಿಗಳನ್ನು ಹೊಂದಿರುವ, ಖರೀದಿಸಿರುವಂಥ ಯುಕೆಯಲ್ಲಿನ ವಿವಿಧ ಸಂಸ್ಥೆಗಳನ್ನು ಮೊದಲಿಗೆ ಲಂಡನ್‌ನಲ್ಲಿರುವ ರಾಜತಾಂತ್ರಿಕ ಅಧಿಕಾರಿಗಳು ಸಂಪರ್ಕಿಸಿ, ಔಪಚಾರಿಕ ಕೋರಿಕೆ ಸಲ್ಲಿಸಲಿದ್ದಾರೆ. ಈ ಪ್ರಕ್ರಿಯೆಯು ಪ್ರಸಕ್ತ ವರ್ಷವೇ ಆರಂಭವಾಗಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

1849ರಿಂದಲೂ ಕೊಹಿನೂರು ವಜ್ರವು ಬ್ರಿಟಿಷ್‌ ರಾಜಮನೆತನದ ವಶದಲ್ಲಿದೆ. 1849ರಲ್ಲಿ 10 ವರ್ಷದವರಾಗಿದ್ದ ಭಾರತದ ಮಹಾರಾಜ ದುಲೀಪ್‌ ಸಿಂಗ್‌ ಅವರಿಂದ ಬಲವಂತವಾಗಿ ಲಾಹೋರ್‌ ಒಪ್ಪಂದಕ್ಕೆ ಸಹಿ ಹಾಕಿಸಿ, ಕೊಹಿನೂರು ವಜ್ರವನ್ನು ಬ್ರಿಟಿಷರು ಒಯ್ದರು ಎನ್ನಲಾಗಿದೆ. ಆದರೆ, “ಕೊಹಿನೂರು ವಜ್ರವು ಭಾರತದಿಂದ ಈಸ್ಟ್‌ ಇಂಡಿಯಾ ಕಂಪನಿಗೆ ನೀಡಲ್ಪಟ್ಟ ಉಡುಗೊರೆಯಾಗಿದೆ’ ಎನ್ನುವುದು ಬ್ರಿಟಿಷರ ವಾದ. ನಂತರದಲ್ಲಿ, ಕೊಹಿನೂರ್‌ ವಜ್ರವು ಬ್ರಿಟನ್‌ ರಾಣಿಯ ಕಿರೀಟದಲ್ಲಿ 2 ಸಾವಿರದಷ್ಟು ಇತರೆ ವಜ್ರಗಳೊಂದಿಗೆ ಸ್ಥಾನ ಪಡೆದುಕೊಂಡಿತು. ಈ ವಜ್ರವು ಭಾರತದಿಂದ ಕೊಂಡೊಯ್ಯುವ ವೇಳೆ 186 ಕ್ಯಾರೆಟ್‌ ಇತ್ತು.

ಬೇರೆ ಇನ್ನೇನಿವೆ?

ತೈಮೂರನ ಮಾಣಿಕ್ಯ, ಟಿಪ್ಪು ಸುಲ್ತಾನ್‌ ಒಡೆತನದ ರತ್ನಖಚಿತ ಹುಲಿಯ ತಲೆಯ ಕಲಾಕೃತಿ, ಟಿಪ್ಪು ಸುಲ್ತಾನನ ಹುಲಿಯ ಪ್ರತಿಕೃತಿ, ಅಮರಾವತಿ ಮಾರ್ಬಲ್‌, ಹರಿಹರ ವಿಗ್ರಹ, ಶಹಜಹಾನನ ವೈನ್‌ ಕಪ್‌ಗಳು, ಮಹಾರಾಜ ರಣಜಿತ್‌ ಸಿಂಗ್‌ನ ಸಿಂಹಾಸನ ಮತ್ತು ಹಿಂದೂ ದೇವದೇವತೆಗಳ ವಿಗ್ರಹಗಳು, ಕಲಾಕೃತಿಗಳು.

ಸಂಪತ್ತಿನ ಮೌಲ್ಯ

1765ರಿಂದ 1938ರ ಅವಧಿಯಲ್ಲಿ ಬ್ರಿಟಿಷರು ಭಾರತದಿಂದ ಹೊತ್ತೂಯ್ದ ಸಂಪತ್ತಿನ ಮೌಲ್ಯ 45 ಲಕ್ಷಕೋಟಿ ಡಾಲರ್‌ ಎಂದು 2018ರಲ್ಲಿ ಅರ್ಥಶಾಸ್ತ್ರಜ್ಞರಾದ ಉತ್ಸಾ ಪಟ್ನಾಯಕ್‌ ಅವರ ಸಂಶೋಧನಾ ವರದಿ ಹೇಳಿದೆ.

 

ಟಾಪ್ ನ್ಯೂಸ್

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, 3 ಮಂದಿ ಖುಲಾಸೆ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, ಮೂವರು ಖುಲಾಸೆ

Colin Munro Announced International Retirement

Retired; ಟಿ20 ವಿಶ್ವಕಪ್ ನಲ್ಲಿ ಸಿಗದ ಸ್ಥಾನ; ವೃತ್ತಿಜೀವನಕ್ಕೆ ತೆರೆಎಳೆದ ಕಿವೀಸ್ ಬ್ಯಾಟರ್

pralhad joshi

Hubli; ಕಾಂಗ್ರೆಸ್ ಅಧಿಕಾರಕ್ಕಾಗಿ ದೇಶವನ್ನು ಒಡೆಯಲೂ ಹೇಸುವುದಿಲ್ಲ: ಪ್ರಹ್ಲಾದ ಜೋಶಿ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Dandeli: ಮದುವೆಗೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ… 8 ಮಂದಿಗೆ ಗಾಯ

Dandeli: ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ.. ಮಕ್ಕಳು ಸೇರಿ 8 ಮಂದಿಗೆ ಗಾಯ

Praveen Nettar Case; Arrest of main accused Mustafa Paychar of Sulya

Praveen Nettar Case; ಪ್ರಮುಖ ಆರೋಪಿ ಸುಳ್ಯದ ಮುಸ್ತಫಾ ಪೈಚಾರ್ ಬಂಧನ

ಪಾಕ್‌ಗೆ ಗೌರವ ಕೊಡಿ… ಇಲ್ಲವಾದಲ್ಲಿ ಅಣುಬಾಂಬ್ ಹಾಕುತ್ತಾರೆ: ಮಣಿಶಂಕರ್ ಅಯ್ಯರ್ ಹೇಳಿಕೆ

Pak ಬಳಿ ಅಣುಬಾಂಬ್ ಇದೆ ಅವರಿಗೆ ಗೌರವ ಕೊಡಿ… ಕಾಂಗ್ರೆಸ್ ನಾಯಕನ ವಿವಾದಾತ್ಮಕ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, 3 ಮಂದಿ ಖುಲಾಸೆ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, ಮೂವರು ಖುಲಾಸೆ

ಪಾಕ್‌ಗೆ ಗೌರವ ಕೊಡಿ… ಇಲ್ಲವಾದಲ್ಲಿ ಅಣುಬಾಂಬ್ ಹಾಕುತ್ತಾರೆ: ಮಣಿಶಂಕರ್ ಅಯ್ಯರ್ ಹೇಳಿಕೆ

Pak ಬಳಿ ಅಣುಬಾಂಬ್ ಇದೆ ಅವರಿಗೆ ಗೌರವ ಕೊಡಿ… ಕಾಂಗ್ರೆಸ್ ನಾಯಕನ ವಿವಾದಾತ್ಮಕ ಹೇಳಿಕೆ

Controversy: ಬಿಜೆಪಿ ನಾಯಕನ ಅಪ್ರಾಪ್ತ ಪುತ್ರನಿಂದ ಮತದಾನ; ವಿವಾದಿತ ವಿಡಿಯೋ ವೈರಲ್‌

Controversy: ಬಿಜೆಪಿ ನಾಯಕನ ಅಪ್ರಾಪ್ತ ಪುತ್ರನಿಂದ ಮತದಾನ; ವಿವಾದಿತ ವಿಡಿಯೋ ವೈರಲ್‌

police crime

Sandeshkhali ಪ್ರಕರಣಕ್ಕೆ ದಿಢೀರ್‌ ತಿರುವು : ಇಬ್ಬರು ಸಂತ್ರಸ್ತೆಯರಿಂದ ದೂರು ವಾಪಸ್‌!

1-wqewqeqeqw

BJP ನಾಯಕಿ ವಿವಾದ: ಒವೈಸಿಗೆ 15 ನಿಮಿಷ ಬೇಕು,ನಮಗಾದ್ರೆ 15 ಸೆಕೆಂಡ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, 3 ಮಂದಿ ಖುಲಾಸೆ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, ಮೂವರು ಖುಲಾಸೆ

Colin Munro Announced International Retirement

Retired; ಟಿ20 ವಿಶ್ವಕಪ್ ನಲ್ಲಿ ಸಿಗದ ಸ್ಥಾನ; ವೃತ್ತಿಜೀವನಕ್ಕೆ ತೆರೆಎಳೆದ ಕಿವೀಸ್ ಬ್ಯಾಟರ್

6-sslc

Rank: ರಾಜ್ಯಕ್ಕೆ 5ನೇ ರ‍್ಯಾಂಕ್ ಪಡೆದ ಪ್ರತ್ವಿತಾ ಪಿ.ಶೆಟ್ಟಿ; ಐ.ಎ.ಎಸ್ ಅಧಿಕಾರಿಯಾಗುವ ಆಸೆ

pralhad joshi

Hubli; ಕಾಂಗ್ರೆಸ್ ಅಧಿಕಾರಕ್ಕಾಗಿ ದೇಶವನ್ನು ಒಡೆಯಲೂ ಹೇಸುವುದಿಲ್ಲ: ಪ್ರಹ್ಲಾದ ಜೋಶಿ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.