ಮೋದಿಜಿ ಕಾಂಗ್ರೆಸ್ನಿಂದಾಗಿ ಹೆಚ್ಚು ಶಕ್ತಿಶಾಲಿಯಾಗಿದ್ದಾರೆ : ಮಮತಾ ಬ್ಯಾನರ್ಜಿ
Team Udayavani, Oct 30, 2021, 1:18 PM IST
ಪಣಜಿ : ”ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಪಕ್ಷದಿಂದಾಗಿ ಹೆಚ್ಚು ಶಕ್ತಿಶಾಲಿಯಾಗಿದ್ದಾರೆ” ಎಂದು
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಶನಿವಾರ ಗೋವಾದಲ್ಲಿ ಹೇಳಿಕೆ ನೀಡಿದ್ದಾರೆ.
ಪಕ್ಷದ ಕಾರ್ಯಕರತರನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರತಿಪಕ್ಷಗಳು ಒಂದಾಗುವ ಅಗತ್ಯವನ್ನು ಗುರುತಿಸುವಲ್ಲಿ ಕಾಂಗ್ರೆಸ್ ವಿಫಲವಾಗಿದೆ . ಬಿಜೆಪಿಯನ್ನು ಎದುರಿಸಲು ಮತ್ತು ಭಾರತದ ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸಲು ಪ್ರಾದೇಶಿಕ ಪಕ್ಷಗಳ ಪ್ರಾಮುಖ್ಯತೆಯನ್ನು ಒತ್ತಿಹೇಳಿದರು.
”ಕಾಂಗ್ರೆಸ್ ನಿಂದಾಗಿ ಮೋದಿಜಿ ಹೆಚ್ಚು ಪವರ್ ಫುಲ್ ಆಗಿದ್ದಾರೆ, ಏಕೆಂದರೆ ಕಾಂಗ್ರೆಸ್ ಬಿಜೆಪಿಯ ಟಿಆರ್ ಪಿ (ಟೆಲಿವಿಷನ್ ರೇಟಿಂಗ್ ಪಾಯಿಂಟ್ಸ್). ಕಾಂಗ್ರೆಸ್ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗದಿದ್ದರೆ, ದೇಶಕ್ಕೆ ಹಾನಿಯಾಗುತ್ತದೆ. ದೇಶ ಏಕೆ ನರಳಬೇಕು? ಅವರಿಗೆ ಸಾಕಷ್ಟು ಅವಕಾಶವಿತ್ತು” ಎಂದು ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರ ಹಾಕಿದರು.
ವಿಜಯ್ ಸರ್ದೇಸಾಯಿ ಭೇಟಿ
ಮಮತಾ ಬ್ಯಾನರ್ಜಿ ಅವರು ಗೋವಾ ಫಾರ್ವರ್ಡ್ ಪಕ್ಷದ ಅಧ್ಯಕ್ಷ ವಿಜಯ್ ಸರ್ದೇಸಾಯಿ ಅವರನ್ನು ಭೇಟಿ ಮಾಡಿದರು.
ಭೇಟಿಯ ನಂತರ ಮಮತಾ ಬ್ಯಾನರ್ಜಿ ಮಾತನಾಡಿ, ”ಎರಡು ಪಕ್ಷಗಳು ಒಟ್ಟಾಗಿ ಕೆಲಸ ಮಾಡಲು ಮತ್ತು ಬಿಜೆಪಿ ವಿರುದ್ಧ ಹೋರಾಡಲು ನಿರ್ಧರಿಸಿವೆ” ಎಂದರು.
ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿಯ ಹಿಂದಿನ ಮಿತ್ರ ಪಕ್ಷವಾದ ಗೋವಾ ಫಾರ್ವರ್ಡ್ ಪಕ್ಷ ಪಕ್ಷವು ಟಿಎಂಸಿ ಜೊತೆ ಮೈತ್ರಿ ಮಾಡಿಕೊಂಡು ಸೀಟು ಹಂಚಿಕೆ ಮೂಲಕ ಚುನಾವಣೆ ಎದುರಿಸಲು ಮುಂದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
MUST WATCH
ಹೊಸ ಸೇರ್ಪಡೆ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!